Homeಮುಖಪುಟಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ)‌ ನೇತೃತ್ವದ LDF ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್‌ ನೇತೃತ್ವದ UDF ಎರಡನೇ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ ಈ ಚುನಾವಣೆಯು 2021 ರ ಕೇರಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಕೇರಳ ಚುನಾವಣೆಯು LDF‌ ಮತ್ತು UDF ‌ಗಳ ನಡುವೆ ಭಾರೀ ಸ್ಪರ್ಧೆಯನ್ನು ಏರ್ಪಡಿಸಲಿದ್ದು, ಬಿಜೆಪಿ ಹೆಚ್ಚುವರಿ ಆಟಗಾರನಂತೆ ಕಣಕ್ಕಿಯಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೇರಳ ರಾಜಕೀಯದ ಸಂಪ್ರದಾಯದಂತೆ ಒಂದು ಬಾರಿ LDF ಬಂದರೆ ಇನ್ನೊಂದು ಬಾರಿ UDF ಅಧಿಕಾರ ಹಿಡಿಯುತ್ತಿತ್ತು. ಒಂದು ವೇಳೆ ಮುಂದಿನ ಬಾರಿ LDF ಅಧಿಕಾರ ಹಿಡಿದರೆ ಕೇರಳ ರಾಜಕೀಯದ ಎಲ್ಲಾ ದಾಖಲೆಗಳನ್ನು ಮುರಿದಂತಾಗುತ್ತದೆ.

ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಒಟ್ಟು 941 ರಲ್ಲಿ 514 ಮತ್ತು ಯುಡಿಎಫ್‌ 375 ಗ್ರಾಮ ಪಂಚಾಯಿತಿಗಳನ್ನು ಗೆದ್ದಿದ್ದು, ಇದು ಭಾರೀ ಸ್ಪರ್ಧೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಕೇವಲ 23 ಗ್ರಾಮ ಪಂಚಾಯಿತಿಗಳನ್ನು ಮಾತ್ರ ಗೆಲ್ಲುವಲ್ಲಿ ಸಫಲವಾಗಿದೆ. ವಿರೋಧ ಪಕ್ಷಗಳ ನಿರಂತರ ಆರೋಪಗಳ ಮಧ್ಯೆಯೂ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಜನಮನ್ನಣೆ ಪಡೆಯಲು ಯಶಸ್ವಿಯಾಗಿದೆ.

ಇದನ್ನೂ ಓದಿ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವು ಕಂಡ ಎಡಪಕ್ಷಗಳು

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ
PC: Peoples Democracy

ಎಲ್ಲರಿಗೂ ಸುರಕ್ಷಿತ ವಸತಿ ಒದಗಿಸುವ ಗುರಿಯನ್ನು ಹೊಂದಿರುವ ವಸತಿ ಯೋಜನೆ, ಲೈಫ್ ಮಿಷನ್ ಸೇರಿದಂತೆ ರಾಜ್ಯ ಸರ್ಕಾರದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಹಳಿ ತಪ್ಪಿಸಲು ಯುಡಿಎಫ್ ಮತ್ತು ಎನ್‌ಡಿಎ ಪ್ರಯತ್ನಿಸಿದ್ದವು. ಆದಾಗ್ಯೂ, ಎಲ್‌ಡಿಎಫ್‌ ಅಭಿವೃದ್ಧಿ ಚಟುವಟಿಕೆಗಳತ್ತ ಗಮನ ಹರಿಸಿ, ಯಶಸ್ವಿ ಕಂಡಿದೆ.

ಬಿಜೆಪಿ ನೀಡಬಲ್ಲುದೆ ಪೈಪೋಟಿ?

ಮೇಲ್ನೋಟಕ್ಕೆ ಎಲ್‌ಡಿಎಫ್‌ ಮತ್ತು ಬಿಜೆಪಿ ನಡುವೆ ಹೋರಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದರೂ, ಕೇರಳದಲ್ಲಿ ಬಿಜೆಪಿ ಅಂತಹ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಸ್ಥಳೀಯ ಚುನಾವಣೆಯಲ್ಲಿ ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿದ್ದ ಬಿಜೆಪಿ ಉನ್ನತ ನಾಯಕರನ್ನೇ ಕಣಕ್ಕಿಳಿಸಿತ್ತು. ಅದರೂ, 2015 ಕ್ಕಿಂತ ಸ್ವಲ್ಪ ಪ್ರಾಮಾಣದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದರೂ, ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕೇವಲ 23 ಗ್ರಾಮ ಪಂಚಾಯತಿಗಳನ್ನು ಗೆದ್ದರೂ, ಯಾವುದೇ ಬ್ಲಾಕ್ ಪಂಚಾಯತ್, ಜಿಲ್ಲಾ ಪಂಚಾಯತಿಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಕೇವಲ ಒಂದು ಪುರಸಭೆ (ಪಾಲಕ್ಕಾಡ್)ಯನ್ನು ಗೆದ್ದಿರುವ ಎನ್‌ಡಿಎ, ಪಂದಲಂನಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನೆಲ್ಲಿಯೂ ತೀವ್ರ ಪೈಪೋಟಿಯನ್ನು ನೀಡಿಲ್ಲ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ಜನರನ್ನು ಸಂಘಟಿಸುತ್ತಿದ್ದ ಬಿಜೆಪಿ/ಆರ್‌ಎಸ್‌ಎಸ್‌ ಸಂಘಟನೆಗಳು 2018 ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ಪಥನಂತಿಟ್ಟ ಜಿಲ್ಲೆಯ ಪಂದಲಂನಲ್ಲಿಯೂ ತಮ್ಮ ನೆಲೆಯನ್ನು ಕಳೆದುಕೊಂಡಿದೆ.

ಕೇರಳ

ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ತನ್ನ ರಾಜ್ಯ ನಾಯಕರನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದ್ದ ತಿರುವನಂತಪುರಂ ಕಾರ್ಪೊರೇಶನ್‌ನಲ್ಲಿ, ಈ ಹಿಂದೆ ಪಡೆದಿದ್ದಷ್ಟೂ ಸ್ಥಾನಗಳನ್ನೂ ಕೂಡ ಉಳಿಸಿಕೊಳ್ಳಲಷ್ಟೇ ಸೀಮಿತವಾಗಿದೆ. ತಿರುವನಂತಪುರಂ ಪಾಲಿಕೆಯ 100 ಸ್ಥಾನಗಳಲ್ಲಿ ಎಲ್‌ಡಿಎಫ್‌ 51 ಸ್ಥಾನಗಳನ್ನು ಪಡೆದರೆ, ಎನ್‌ಡಿಎ 34, ಯುಡಿಎಫ್ 10 ಮತ್ತು ಇತರರು 5 ಸ್ಥಾನಗಳನ್ನು ಗೆದ್ದಿದ್ದಾರೆ. 2015 ರಲ್ಲಿ ಎಲ್‌ಡಿಎಫ್ 42 ವಾರ್ಡ್‌ಗಳನ್ನು ಗೆದ್ದಿತ್ತು ಮತ್ತು ಆಗ ಬಿಜೆಪಿ ಮೈತ್ರಿಕೂಟವು ಅದೇ 34 ಸ್ಥಾನಗಳನ್ನು ಹೊಂದಿತ್ತು.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಯುಡಿಎಫ್‌ ಎರಡೂ ಮೈತ್ರಿಕೂಟಗಳು ಎಲ್‌ಡಿಎಫ್‌ ವಿರುದ್ಧ ಪ್ರಚಾರ ಮಾಡಿದರೂ, ಅವುಗಳು ಎಲ್‌ಡಿಎಫ್‌ನ ಸ್ಥಾನಗಳನ್ನ ಕಸಿದುಕೊಳ್ಳಲು ಅಂತಹ ಸಫಲತೆ ಕಂಡಿಲ್ಲ. ಬದಲಾಗಿದೆ, ಈ ಎರಡು ಮೈತ್ರಿಕೂಟಗಳ ಸ್ಥಾನಗಳೇ ಚದುರಿ ಹೋಗಿದೆ.

ಇದನ್ನೂ ಓದಿ: ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...