Homeಮುಖಪುಟಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಕೇರಳದಲ್ಲಿ ಮತ್ತೊಮ್ಮೆ LDF ?- ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳ ಸೂಚನೆಯೇನು?

ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ.

- Advertisement -
- Advertisement -

ಇತ್ತೀಚೆಗೆ ಕೇರಳದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ಸಿಪಿಐ(ಎಂ)‌ ನೇತೃತ್ವದ LDF ಅತೀ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಕಾಂಗ್ರೆಸ್‌ ನೇತೃತ್ವದ UDF ಎರಡನೇ ಸ್ಥಾನ ಪಡೆದುಕೊಂಡಿದೆ. ಸ್ಥಳೀಯ ಸಂಸ್ಥೆ ಚುನಾವಣೆಗಳು ಅಸೆಂಬ್ಲಿ ಚುನಾವಣೆಗೆ ಮುಂಚಿತಾಗಿ ನಡೆಯುವ ಸೆಮಿಫೈನಲ್‌ ಎಂದು ಪರಿಗಣಿಸಲಾಗುತ್ತದೆ. ಪ್ರಸ್ತುತ ಈ ಚುನಾವಣೆಯು 2021 ರ ಕೇರಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂದು ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂದಿನ ಕೇರಳ ಚುನಾವಣೆಯು LDF‌ ಮತ್ತು UDF ‌ಗಳ ನಡುವೆ ಭಾರೀ ಸ್ಪರ್ಧೆಯನ್ನು ಏರ್ಪಡಿಸಲಿದ್ದು, ಬಿಜೆಪಿ ಹೆಚ್ಚುವರಿ ಆಟಗಾರನಂತೆ ಕಣಕ್ಕಿಯಲಿದೆ ಎಂದು ರಾಜಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಕೇರಳ ರಾಜಕೀಯದ ಸಂಪ್ರದಾಯದಂತೆ ಒಂದು ಬಾರಿ LDF ಬಂದರೆ ಇನ್ನೊಂದು ಬಾರಿ UDF ಅಧಿಕಾರ ಹಿಡಿಯುತ್ತಿತ್ತು. ಒಂದು ವೇಳೆ ಮುಂದಿನ ಬಾರಿ LDF ಅಧಿಕಾರ ಹಿಡಿದರೆ ಕೇರಳ ರಾಜಕೀಯದ ಎಲ್ಲಾ ದಾಖಲೆಗಳನ್ನು ಮುರಿದಂತಾಗುತ್ತದೆ.

ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಮೈತ್ರಿಕೂಟವು ಒಟ್ಟು 941 ರಲ್ಲಿ 514 ಮತ್ತು ಯುಡಿಎಫ್‌ 375 ಗ್ರಾಮ ಪಂಚಾಯಿತಿಗಳನ್ನು ಗೆದ್ದಿದ್ದು, ಇದು ಭಾರೀ ಸ್ಪರ್ಧೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೂಟ ಕೇವಲ 23 ಗ್ರಾಮ ಪಂಚಾಯಿತಿಗಳನ್ನು ಮಾತ್ರ ಗೆಲ್ಲುವಲ್ಲಿ ಸಫಲವಾಗಿದೆ. ವಿರೋಧ ಪಕ್ಷಗಳ ನಿರಂತರ ಆರೋಪಗಳ ಮಧ್ಯೆಯೂ ಸಿಎಂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರ ಜನಮನ್ನಣೆ ಪಡೆಯಲು ಯಶಸ್ವಿಯಾಗಿದೆ.

ಇದನ್ನೂ ಓದಿ: ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ, ಭಾರಿ ಗೆಲುವು ಕಂಡ ಎಡಪಕ್ಷಗಳು

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಅರಳದ ಕಮಲ
PC: Peoples Democracy

ಎಲ್ಲರಿಗೂ ಸುರಕ್ಷಿತ ವಸತಿ ಒದಗಿಸುವ ಗುರಿಯನ್ನು ಹೊಂದಿರುವ ವಸತಿ ಯೋಜನೆ, ಲೈಫ್ ಮಿಷನ್ ಸೇರಿದಂತೆ ರಾಜ್ಯ ಸರ್ಕಾರದ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಹಳಿ ತಪ್ಪಿಸಲು ಯುಡಿಎಫ್ ಮತ್ತು ಎನ್‌ಡಿಎ ಪ್ರಯತ್ನಿಸಿದ್ದವು. ಆದಾಗ್ಯೂ, ಎಲ್‌ಡಿಎಫ್‌ ಅಭಿವೃದ್ಧಿ ಚಟುವಟಿಕೆಗಳತ್ತ ಗಮನ ಹರಿಸಿ, ಯಶಸ್ವಿ ಕಂಡಿದೆ.

ಬಿಜೆಪಿ ನೀಡಬಲ್ಲುದೆ ಪೈಪೋಟಿ?

ಮೇಲ್ನೋಟಕ್ಕೆ ಎಲ್‌ಡಿಎಫ್‌ ಮತ್ತು ಬಿಜೆಪಿ ನಡುವೆ ಹೋರಾಟ ನಡೆಯುತ್ತಿದೆ ಎಂದು ಹೇಳಲಾಗುತ್ತಿದ್ದರೂ, ಕೇರಳದಲ್ಲಿ ಬಿಜೆಪಿ ಅಂತಹ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಸ್ಥಳೀಯ ಚುನಾವಣೆಯಲ್ಲಿ ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಮುಂದಾಗಿದ್ದ ಬಿಜೆಪಿ ಉನ್ನತ ನಾಯಕರನ್ನೇ ಕಣಕ್ಕಿಳಿಸಿತ್ತು. ಅದರೂ, 2015 ಕ್ಕಿಂತ ಸ್ವಲ್ಪ ಪ್ರಾಮಾಣದಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದರೂ, ಪೈಪೋಟಿ ನೀಡಲು ಸಾಧ್ಯವಾಗಿಲ್ಲ. ಕೇವಲ 23 ಗ್ರಾಮ ಪಂಚಾಯತಿಗಳನ್ನು ಗೆದ್ದರೂ, ಯಾವುದೇ ಬ್ಲಾಕ್ ಪಂಚಾಯತ್, ಜಿಲ್ಲಾ ಪಂಚಾಯತಿಗಳನ್ನು ಗೆಲ್ಲಲು ಸಾಧ್ಯವಾಗಲಿಲ್ಲ.

ಕೇವಲ ಒಂದು ಪುರಸಭೆ (ಪಾಲಕ್ಕಾಡ್)ಯನ್ನು ಗೆದ್ದಿರುವ ಎನ್‌ಡಿಎ, ಪಂದಲಂನಲ್ಲಿ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದೆ. ಇನ್ನೆಲ್ಲಿಯೂ ತೀವ್ರ ಪೈಪೋಟಿಯನ್ನು ನೀಡಿಲ್ಲ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶದ ವಿರುದ್ಧ ಜನರನ್ನು ಸಂಘಟಿಸುತ್ತಿದ್ದ ಬಿಜೆಪಿ/ಆರ್‌ಎಸ್‌ಎಸ್‌ ಸಂಘಟನೆಗಳು 2018 ರಲ್ಲಿ ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ ನಂತರ ಪಥನಂತಿಟ್ಟ ಜಿಲ್ಲೆಯ ಪಂದಲಂನಲ್ಲಿಯೂ ತಮ್ಮ ನೆಲೆಯನ್ನು ಕಳೆದುಕೊಂಡಿದೆ.

ಕೇರಳ

ಎಲ್‌ಡಿಎಫ್‌ನಿಂದ ಅಧಿಕಾರ ಕಿತ್ತುಕೊಳ್ಳಲು ಬಿಜೆಪಿ ತನ್ನ ರಾಜ್ಯ ನಾಯಕರನ್ನೇ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದ್ದ ತಿರುವನಂತಪುರಂ ಕಾರ್ಪೊರೇಶನ್‌ನಲ್ಲಿ, ಈ ಹಿಂದೆ ಪಡೆದಿದ್ದಷ್ಟೂ ಸ್ಥಾನಗಳನ್ನೂ ಕೂಡ ಉಳಿಸಿಕೊಳ್ಳಲಷ್ಟೇ ಸೀಮಿತವಾಗಿದೆ. ತಿರುವನಂತಪುರಂ ಪಾಲಿಕೆಯ 100 ಸ್ಥಾನಗಳಲ್ಲಿ ಎಲ್‌ಡಿಎಫ್‌ 51 ಸ್ಥಾನಗಳನ್ನು ಪಡೆದರೆ, ಎನ್‌ಡಿಎ 34, ಯುಡಿಎಫ್ 10 ಮತ್ತು ಇತರರು 5 ಸ್ಥಾನಗಳನ್ನು ಗೆದ್ದಿದ್ದಾರೆ. 2015 ರಲ್ಲಿ ಎಲ್‌ಡಿಎಫ್ 42 ವಾರ್ಡ್‌ಗಳನ್ನು ಗೆದ್ದಿತ್ತು ಮತ್ತು ಆಗ ಬಿಜೆಪಿ ಮೈತ್ರಿಕೂಟವು ಅದೇ 34 ಸ್ಥಾನಗಳನ್ನು ಹೊಂದಿತ್ತು.

ಚುನಾವಣಾ ಸಂದರ್ಭದಲ್ಲಿ ಬಿಜೆಪಿ ಮತ್ತು ಯುಡಿಎಫ್‌ ಎರಡೂ ಮೈತ್ರಿಕೂಟಗಳು ಎಲ್‌ಡಿಎಫ್‌ ವಿರುದ್ಧ ಪ್ರಚಾರ ಮಾಡಿದರೂ, ಅವುಗಳು ಎಲ್‌ಡಿಎಫ್‌ನ ಸ್ಥಾನಗಳನ್ನ ಕಸಿದುಕೊಳ್ಳಲು ಅಂತಹ ಸಫಲತೆ ಕಂಡಿಲ್ಲ. ಬದಲಾಗಿದೆ, ಈ ಎರಡು ಮೈತ್ರಿಕೂಟಗಳ ಸ್ಥಾನಗಳೇ ಚದುರಿ ಹೋಗಿದೆ.

ಇದನ್ನೂ ಓದಿ: ಕೇರಳ ಪುರಸಭೆ ಕಟ್ಟಡ ಮೇಲೆ ಜೈ ಶ್ರೀರಾಮ್ ಪೋಸ್ಟರ್‌: ಎಫ್‌ಐಆರ್‌ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...