Homeಮುಖಪುಟಮತ್ತೆ ಒಂಟಿಯಾದ ಚಿರಾಗ್ ಪಾಸ್ವಾನ್ - ಜೆಡಿಯುಗೆ ಹಾರಿದ ಪಕ್ಷದ ಪ್ರಮುಖ ನಾಯಕ!

ಮತ್ತೆ ಒಂಟಿಯಾದ ಚಿರಾಗ್ ಪಾಸ್ವಾನ್ – ಜೆಡಿಯುಗೆ ಹಾರಿದ ಪಕ್ಷದ ಪ್ರಮುಖ ನಾಯಕ!

- Advertisement -
- Advertisement -

ಬಿಹಾರದ ಪ್ರಭಾವಶಾಲಿ ನಾಯಕರಾಗಿದ್ದ ರಾಮ್ ವಿಲಾಸ್‌ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷ(LJP)ವು ಎರಡು ಬಣಗಳಾಗಿ ಒಡೆದು ಹೋಗಿದೆ. ಒಂದು ಬಣದ ನಾಯಕನಾಗಿ ರಾಮ್ ವಿಲಾಸ್ ಪಾಸ್ವಾನ್ ಅವರ ಸಹೋಧರ ಪಶುಪತಿ ಕುಮಾರ್‌ ಪರಾಸ್ ಅವರಿದ್ದರೆ, ಇನ್ನೊಂದು ನಾಯಕನಾಗಿ ಪಾಸ್ವಾನ್ ಅವರ ಮಗ ಚಿರಾಗ್ ಪಾಸ್ವಾನ್ ಅವರಿದ್ದಾರೆ.

ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಚಿರಾಗ್ ಅವರು ಯಾವುದೆ ಪಕ್ಷಗಳ ಮೈತ್ರಿಯಿಲ್ಲದೆ ಏಕಾಂಗಿಯಾಗಿ ಹೋರಾಟ ನಡೆಸಿದ್ದರು. ಅದರ ನಂತರ ಪಕ್ಷದ ಒಳಗೆ ಆಂತರಿಕ ಬಿನ್ನಾಭಿಪ್ರಾಯ ಭುಗಿಲೆದ್ದು ಪಕ್ಷವು ಒಡೆದು ಹೋಗಿತ್ತು. ಹೀಗಾಗಿ ಚಿರಾಗ್ ಅವರೇ ತಮ್ಮ ಬಣವನ್ನು ಮುನ್ನಡೆಸುತ್ತಿದ್ದರು. ಇದೀಗ ಚಿರಾಗ್‌ಗೆ ಮತ್ತೊಂದು ಅಫಾತ ಉಂಟಾಗಿದೆ. ಸೋಮವಾರದಂದು ಚಿರಾಗ್ ಬಣದ ಹಿರಿಯ ಮುಖಂಡ ವಿನೋದ್ ಕುಮಾರ್ ಸಿಂಗ್ ಅವರು ಆಡಳಿತಾರೂಢ ಜೆಡಿಯು ಪಕ್ಷವನ್ನು ಸೇರಿದ್ದಾರೆ.

ಇದನ್ನೂ ಓದಿ: ತೇಜಸ್ವಿ, ಚಿರಾಗ್ ಪಾಸ್ವಾನ್ ಮೈತ್ರಿಗೆ ಸಮ್ಮತ ಸೂಚಿಸಿದ ಲಾಲು ಪ್ರಸಾದ್ ಯಾದವ್

ಪಕ್ಷವು ಒಡೆಯುವುದಕ್ಕಿಂತ ಮುಂಚೆ, ಚಿರಾಗ್ ಪಾಸ್ವಾನ್ ವಿರುದ್ಧ ನಡೆದ ನಾಯಕತ್ವ ದಂಗೆಯ ನಂತರವೂ ಪಕ್ಷದ ರಾಜಕೀಯ ಕಾರ್ಯತಂತ್ರಗಳನ್ನು ರೂಪಿಸುವಲ್ಲಿ ವಿನೋದ್‌ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು. ಹಾಗಾಗಿ ಅವರನ್ನು ಚಿರಾಗ್‌ ಅವರ ಆಪ್ತ ನಾಯಕ ಎಂದು ಪರಿಗಣಿಸಲಾಗಿತ್ತು.

ಈ ಹಿಂದೆ ಜೆಡಿಯುನಲ್ಲೆ ಇದ್ದ ವಿನೋದ್‌ ಸಿಂಗ್‌‌ ಅವರು, 2015 ರಲ್ಲಿ ರಾಜಕೀಯ ಅವಕಾಶಕ್ಕಾಗಿ ಎಲ್‌ಜೆಪಿಗೆ ಸೇರಿದ್ದರು.

“ಚಿರಾಗ್ ಪಾಸ್ವಾನ್ ನೇತೃತ್ವದ ಎಲ್‌ಜೆಪಿ ಈಗ ಹಿರಿಯ ನಾಯಕರಿಗೆ ಯಾವುದೇ ಕಾಳಜಿ ಮತ್ತು ಗೌರವವಿಲ್ಲದೆ ನಿರಂಕುಶವಾಗಿ ಕೆಲಸ ಮಾಡಲು ಆರಂಭಿಸಿದೆ. ಇಂತಹ ಪರಿಸ್ಥಿತಿಯಲ್ಲಿ ನನಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಾನು ಈ ಪಕ್ಷವನ್ನು ತೊರೆದಿದ್ದೇನೆ” ಎಂದು ಜೆಡಿಯು ಸೇರಿದ ನಂತರ ವಿನೋದ್‌ ಸಿಂಗ್ ಹೇಳಿದ್ದಾರೆ.

ಜೆಡಿಯು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಅವರು ವಿನೋದ್‌ ಸಿಂಗ್ ಅವರನ್ನು ಪಕ್ಷದ ಇತರ ನಾಯಕರ ಸಮ್ಮುಖದಲ್ಲಿ ಮತ್ತೆ ಜೆಡಿಯುಗೆ ಸೇರಿಸಿಕೊಂಡಿದ್ದಾರೆ.

ವಿನೋದ್ ಸಿಂಗ್ ಅವರಿಗೆ 2015 ಮತ್ತು 2020 ರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಜೆಪಿಯಿಂದ ಟಿಕೆಟ್ ನೀಡಲಾಗಿತ್ತು. ಅವರು ಎಲ್‌ಜೆಪಿ ಸಂಸದೀಯ ಮಂಡಳಿಯ ಸದಸ್ಯರಲ್ಲಿ ಒಬ್ಬರಾಗಿದ್ದು, ಎಲ್‌ಜೆಪಿಯ ಉಪಾಧ್ಯಕ್ಷರಾಗಿ ದೀರ್ಘಕಾಲ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ನಿತೀಶ್‌ ಕುಮಾರ್‌ರವರ JDU ಯಾವಾಗ ಬೇಕಾದರೂ ಇಬ್ಭಾಗವಾಗಬಹುದು: ಚಿರಾಗ್ ಪಾಸ್ವಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....