Homeಮುಖಪುಟರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ರೈತ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜೀನಾಮೆ ನೀಡಿದವರೆಷ್ಟು?: ಇಲ್ಲಿದೆ ವಿವರ

ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ- ಶಾಸಕ ಅಭಯ್ ಸಿಂಗ್ ಚೌಟಾಲ

- Advertisement -
- Advertisement -

ಲಕ್ಷಾಂತರ ರೈತರು ಕಳೆದ 2 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಈ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಕುತಂತ್ರಗಳು ನಡೆಯುತ್ತಲೇ ಇವೆ. ಇದರ ನಡುವೆ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬಿಜೆಪಿಯ ಶಾಸಕರು ಸೇರಿದಂತೆ ಹಲವರು ರಾಜೀನಾಮೆ ನೀಡಿದ್ದಾರೆ. ಜೊತೆಗೆ ಎನ್‌ಡಿಎ ಮೈತ್ರಿಕೂಟದ ಪಕ್ಷಗಳು ಮೈತ್ರಿಯಿಂದ ಹೊರಬಂದಿವೆ. ಈ ಕುರಿತ ಸಂಕ್ಷಿಪ್ತ ವರದಿ ಇಲ್ಲಿದೆ.

1. ಹರ್‌ಸಿಮ್ರತ್ ಕೌರ್ ಬಾದಲ್‌

ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಮಸೂದೆಗಳು ಅವರಿಗೆ ಉರುಳಾಗುವ ಸಾಧ್ಯತೆ ದಟ್ಟವಾಗಿದೆ. ರಾಷ್ಟ್ರಾದ್ಯಂತ ರೈತರು ವ್ಯಾಪಕ ಪ್ರತಿಭಟನೆ ನಡೆಸುತ್ತಿರುವುದರ ಬೆನ್ನಲ್ಲೇ ಈ ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಿರೋಧಿಸಿ ಪಂಜಾಬ್‌ನ ಶಿರೋಮಣಿ ಅಕಾಲಿ ದಳ ಪಕ್ಷವು ಕಳೆದ ವರ್ಷವೇ ಎನ್‌ಡಿಎ ಮೈತ್ರಿಕೂಟ ತೊರೆದು ಹೊರನಡೆದಿತ್ತು.

ಅಕಾಲಿ ದಳವು ಎನ್‌ಡಿಎ ಮೈತ್ರಿಕೂಟದ ಹಳೆಯ ಗೆಳೆಯನಾಗಿತ್ತು. ಆದರೆ ಕೇಂದ್ರ ಸರ್ಕಾರ ಕೃಷಿ ಮಸೂದೆಗಳನ್ನು ಅಂಗೀಕರಿಸಲು ಹೊರಟಾಗ ಮುಖ್ಯವಾಗಿ ಪಂಜಾಬ್ ರೈತರು ಬೀದಿಗಿಳಿದು ಹೋರಾಟ ಮಾಡಿದ್ದರು. ಆಗ ಅಕಾಲಿ ದಳದಿಂದ ಕೇಂದ್ರ ಆಹಾರ ಸಂಸ್ಕರಣ ಸಚಿವೆಯಾಗಿದ್ದ ಹರ್‌ಸಿಮ್ರತ್ ಕೌರ್ ಬಾದಲ್‌ರವರು ಮಸೂದೆಗಳನ್ನು ವಿರೋಧಿಸಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಹೆಚ್ಚುತ್ತಿರುವ ಬೆಂಬಲ – ಗಡಿಗಳಲ್ಲಿ ತೀವ್ರಗೊಳ್ಳುತ್ತಿರುವ ರೈತ ಹೋರಾಟ

2. ಹನುಮಾನ್ ಬೆನಿವಾಲ್

ರೈತರನ್ನು ಬೆಂಬಲಿಸಿ ಎನ್‌ಡಿಎ ಮಿತ್ರ ಪಕ್ಷ RLP ಸಂಸದ ಹನುಮಾನ್ ಬೆನಿವಾಲ್ ಮೂರು ಸಂಸದೀಯ ಸಮಿತಿಗಳಿಗೆ ರಾಜೀನಾಮೆ ನೀಡಿದ್ದರು. ರಾಷ್ಟ್ರೀಯ ಲೋಕತಾಂತ್ರಿಕ್ ಪಕ್ಷದಿಂದ ರಾಜಸ್ಥಾನದ ನಾಗೂರ್‌ನ ಸಂಸದರಾದ ಹನುಮಾನ್ ಬೆನಿವಾಲ್ ಕಳೆದ ತಿಂಗಳು ತಮ್ಮ ರಾಜೀನಾಮೆಯನ್ನು ಸ್ವೀಕರ್ ಓಂ ಬಿರ್ಲಾರವರಿಗೆ ಸಲ್ಲಿಸಿದ್ದರು.

“ಸಂಸತ್ತಿನಲ್ಲಿ ನಾನು ಭಾಗವಾಗಿದ್ದ ಹಲವು ಸಮಿತಿಗಳಲ್ಲಿ ವಿವಿಧ ಜನ ಕೇಂದ್ರಿತ ಸಮಸ್ಯೆಗಳನ್ನು ಎತ್ತಿದ್ದೆ. ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕ್ರಮ ಕೈಗೊಳ್ಳದಿದ್ದರೆ ಸಂಸದೀಯ ಸಮಿತಿಗಳಲ್ಲಿ ಇದ್ದು ಏನು ಪ್ರಯೋಜನ? ಸಮಸ್ಯೆಗಳು ಬಗೆಹರಿಯದಿರುವುದು ಮತ್ತು ರೈತರ ಆಂದೋಲನಕ್ಕೆ ಬೆಂಬಲ ನೀಡಲು ನಾನು ಸಮಿತಿಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ಹೇಳಿದ್ದರು. ಬೆನಿವಾಲ್ ಕೈಗಾರಿಕೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲದ ಸಂಸದೀಯ ಸಮಿತಿಯ ಭಾಗವಾಗಿದ್ದರು.

ರಾಜಸ್ಥಾನದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷವು, ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಿದ್ದು, ಜಾಥಾಕ್ಕೆ ಸ್ವತಃ ಹನುಮಾನ್ ಬೆನಿವಾಲ್ ನೇತೃತ್ವ ನೀಡಿದ್ದರು.

ಅಮಿತ್ ಶಾ ಜೀ, ನಡೆಯುತ್ತಿರುವ ರೈತರ ಆಂದೋಲನಕ್ಕೆ ದೇಶದಾದ್ಯಂತ ವ್ಯಕ್ತವಾಗಿರುವ ಬೆಂಬಲವನ್ನ ಗಮನದಲ್ಲಿಟ್ಟುಕೊಂಡು, ಇತ್ತೀಚೆಗೆ ಕೃಷಿಗೆ ಸಂಬಂಧಿಸಿದ ಮೂರು ಮಸೂದೆಗಳನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರವು ಸ್ವಾಮಿನಾಥನ್ ಆಯೋಗದ ಎಲ್ಲಾ ಶಿಫಾರಸುಗಳನ್ನು ಜಾರಿಗೆ ತರಬೇಕು ಮತ್ತು ದೆಹಲಿಯಲ್ಲಿ ರೈತರೊಂದಿಗೆ ತಕ್ಷಣ ಸಂವಾದವನ್ನು ನಡೆಸಬೇಕು” ಎಂದು ಬೆನಿವಾಲ್ ಈ ಹಿಂದೆ ಹೇಳಿದ್ದರು.

“ರಾಷ್ಟ್ರೀಯ ಲೋಕತಾಂತ್ರಿಕ್ ಪಾರ್ಟಿ (ಆರ್‌ಎಲ್‌ಪಿ)ಯು ಎನ್​ಡಿಎಯ ಘಟಕವಿರಬಹುದು. ಆದರೆ ಇದಕ್ಕೆ ಶಕ್ತಿ ಬಂದಿರುವುದು ರೈತರು ಮತ್ತು ಸೈನಿಕರಿಂದ. ಈ ವಿಚಾರದಲ್ಲಿ ತ್ವರಿತ ಕ್ರಮ ಕೈಗೊಳ್ಳದಿದ್ದರೆ ಇದ್ದಲ್ಲಿ, ನಾವು ರೈತರ ಹಿತದೃಷ್ಟಿಯಿಂದಾಗಿ ಎನ್​ಡಿಯ ಜೊತೆಗಿನ ಸಹಭಾಗಿತ್ವದ ಕುರಿತು ಮರುಚಿಂತನೆ ಮಾಡಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದರು.

3. ಅಭಯ್ ಸಿಂಗ್ ಚೌಟಾಲ

ಹರಿಯಾಣದ ಭಾರತೀಯ ರಾಷ್ಟ್ರೀಯ ಲೋಕ್ ದಳ (ಐಎನ್‌ಎಲ್‌ಡಿ)ದ ಶಾಸಕ ಅಭಯ್ ಸಿಂಗ್ ಚೌಟಾಲ ರಾಜೀನಾಮೆ ನೀಡಿದ್ದು, ರೈತರನ್ನು ಬೆಂಬಲಿಸಿ ರಾಜೀನಾಮೆ ನೀಡುತ್ತಿರುವವರ ಸಾಲಿಗೆ ಇವರು ಹೊಸ ಸೇರ್ಪಡೆ.

ಈ ಕುರಿತು ಸ್ವತಃ ಶಾಸಕರೆ ಟ್ವೀಟ್ ಮಾಡಿದ್ದು, “ನನಗೆ ಕುರ್ಚಿ ಬೇಡ, ನನ್ನ ದೇಶದ ರೈತನಿಗೆ ಸಂತೋಷ ಬೇಕು! ಸರ್ಕಾರ ಜಾರಿಗೆ ತಂದಿರುವ ಈ ಕರಾಳ ಕಾನೂನುಗಳ ವಿರುದ್ಧ ನಾನು ರಾಜೀನಾಮೆ ನೀಡಿದ್ದೇನೆ. ಪ್ರತಿಪಕ್ಷದಲ್ಲಿ ಕುಳಿತಿರುವ ಇತರ ಎಲ್ಲ ನಾಯಕರು ಮತ್ತು ರೈತರ ಮಕ್ಕಳು ಎನಿಸಿಕೊಂಡವರು ರೈತನೊಂದಿಗೆ ನಿಲ್ಲಬೇಕೆಂದು ನಾನು ವಿನಂತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಟಿಕ್ರಿ ಗಡಿಯಲ್ಲಿ ಗೌರಿ ಮೀಡಿಯಾ ತಂಡಕ್ಕೆ ಪಿಸ್ತೂಲ್‌ ತೋರಿಸಿ ಹಲ್ಲೆ ನಡೆಸುವ ಬೆದರಿಕೆ!

4. ಹರಿಂದರ್ ಸಿಂಗ್ ಖಲ್ಸಾ

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರನ್ನು ಬೆಂಬಲಿಸಿ ಲೋಕಸಭೆಯ ಮಾಜಿ ಸಂಸದ ಹರಿಂದರ್ ಸಿಂಗ್ ಖಲ್ಸಾ ಇಂದು ರಾಜೀನಾಮೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಎಎನ್‌ಐ, “ಮಾಜಿ ಲೋಕಸಭಾ ಸದಸ್ಯರಾದ ಹರಿಂದರ್ ಸಿಂಗ್ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಅವರ ಪತ್ನಿಯಂದಿರು, ಮಕ್ಕಳು ಅನುಭವಿಸುತ್ತಿರುವ ದುಃಖ-ದುಮ್ಮಾನಗಳ ಬಗ್ಗೆ ಪಕ್ಷದ ಮುಖಂಡರು ಹಾಗೂ ಸರಕಾರದ ನಿರ್ಲಕ್ಷ್ಯತೆಯ ಧೋರಣೆಯನ್ನು ವಿರೋಧಿಸಿ ಈ ನಿರ್ಧಾರ ಕೈಗೊಂಡಿದ್ದಾರೆ” ಎಂದು ವರದಿ ಮಾಡಿದೆ.

5. ಲಖ್ವಿಂದರ್ ಸಿಂಗ್ ಜಖರ್

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ವ್ಯಕ್ತಪಡಿಸಿರುವ ಪಂಜಾಬ್ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಚಂಡೀಗಢದ ಕಾರಾಗೃಹಗಳ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಆಗಿ ನೇಮಕಗೊಂಡಿದ್ದ 56 ವರ್ಷದ ಲಖ್ವಿಂದರ್ ಸಿಂಗ್ ಜಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ರಾಜೀನಾಮೆ ಪತ್ರದಲ್ಲಿ, “ನಾನು ಮೊದಲು ರೈತ, ನಂತರ ಪೊಲೀಸ್ ಅಧಿಕಾರಿ. ಇಂದು ನನಗೆ ಯಾವುದೇ ಸ್ಥಾನ ಸಿಕ್ಕಿದ್ದರೂ, ಅದಕ್ಕೆ ಕಾರಣ ನನ್ನ ತಂದೆ ಹೊಲಗಳಲ್ಲಿ ಕೃಷಿಕರಾಗಿ ಕೆಲಸ ಮಾಡಿದ್ದು. ಕೃಷಿಯಿಂದಲೇ ಸಂಪಾದಿಸಿ ಅವರು ನನ್ನನ್ನು ವಿದ್ಯಾವಂತನಾಗಿಸಿದ್ದಾರೆ. ಆದ್ದರಿಂದ, ನನಗೆ ಸಿಕ್ಕಿರುವ ಎಲ್ಲದಕ್ಕೂ ನಾನು ಕೃಷಿಗೆ ಋಣಿಯಾಗಿದ್ದೇನೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: ಹಿಂದಕ್ಕೆ ಹೆಜ್ಜೆ ಇಡಲೊಪ್ಪದ ರೈತರು: ಸ್ಥಳ ಖಾಲಿ ಮಾಡಿದ ಹೆಚ್ಚುವರಿ ಪೊಲೀಸರು!

6. ಸೋಂಬೀರ್ ಸಾಂಗ್ವಾನ್

ಹರಿಯಾಣ ಸ್ವತಂತ್ರ ಶಾಸಕ ಸೋಂಬೀರ್ ಸಾಂಗ್ವಾನ್ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ರಾಜ್ಯ ಜಾನುವಾರು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸೋಂಬೀರ್ ಸಾಂಗ್ವಾನ್ ಅವರು ಪಕ್ಷೇತರ ಶಾಸಕರಾಗಿದ್ದು, ಹರಿಯಾಣ ರಾಜ್ಯದ ಬಿಜೆಪಿ-ಜೆಜೆಪಿ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

7. ಮಲ್ವಿಂದರ್ ಸಿಂಗ್ ಕಂಗ್

ಎನ್‌ಡಿಎ ಸರ್ಕಾರದಿಂದ ಅಂಗೀಕರಿಸಲಾದ ಕೃಷಿ ಕಾನೂನುಗಳನ್ನು ವಿರೋಧಿಸಿ ಪಂಜಾಬ್ ಬಿಜೆಪಿಯ ಕಾರ್ಯದರ್ಶಿ ಮಲ್ವಿಂದರ್ ಸಿಂಗ್ ಕಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ: ಸುಪ್ರೀಂಕೋರ್ಟ್ ಮೇಲಿನ ತನ್ನ ಟ್ವೀಟ್‌‌ಗಳಿಗೆ ಕ್ಷಮೆ ಕೋರಲು ನಿರಾಕರಿಸಿದ ಹಾಸ್ಯ ನಟ ಕುನಾಲ್ ಕಮ್ರಾ

8. ಪರಮಿಂದರ್ ಧುಲ್

ಎರಡು ಬಾರಿ ಬಿಜೆಪಿ ಶಾಸಕರಾಗಿದ್ದ ಪರಮಿಂದರ್ ಧುಲ್ 2020 ರ ನವೆಂಬರ್‌ನಲ್ಲಿ ಕೃಷಿ ಮಸೂದೆಗಳನ್ನು ವಿರೋಧಿಸಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. 2019 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಇವರು ಮುಂಬರುವ ಬರೋಡಾ ಉಪಚುನಾವಣೆಯಲ್ಲಿ ಬಿಜೆಪಿಯ ರೈತ ವಿರೋಧಿ ನೀತಿಗಳ ವಿರುದ್ಧ ಪ್ರಚಾರ ಮಾಡುವುದಾಗಿ ಹೇಳಿದ್ದರು.

9. ರಾಂಪಾಲ್ ಮಜ್ರಾ

ಹರಿಯಾಣ ಬಿಜೆಪಿ ಮುಖಂಡ ಮತ್ತು ಮಾಜಿ ಮುಖ್ಯ ಸಂಸದೀಯ ಕಾರ್ಯದರ್ಶಿ ರಾಂಪಾಲ್ ಮಜ್ರಾ ಅವರು ಕೇಂದ್ರದ ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ಮತ್ತು ರೈತ ಹೋರಾಟವನ್ನು ಬೆಂಬಲಿಸಿ ಗುರುವಾರ ಪಕ್ಷ ತೊರೆದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಈ ಕಾನೂನುಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರೊಂದಿಗೆ ನಾನು ಸಂಪೂರ್ಣವಾಗಿ ನಿಲ್ಲುತ್ತೇನೆ. ಈ ಕಾನೂನುಗಳು ರೈತ ವಿರೋಧಿ ಮಾತ್ರವಲ್ಲ, ಜಾರಿಗೆ ಬಂದಾಗ ಸಮಾಜದ ಇತರ ವರ್ಗಗಳ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಜ. 26ರ ಹಿಂಸಾಚಾರಕ್ಕೆ ಕೇಂದ್ರ ಸರ್ಕಾರ ಕಾರಣ’: ಬಿಜೆಪಿ ತೊರೆದ ಹಿರಿಯ ನಾಯಕ ರಾಂಪಾಲ್…

ಬಿಜೆಪಿಯ ಒಳಗೆ ಮನೆಮಾಡಿರುವ ಅಸಮಾಧಾನ;

ರೈತರ ಆಂದೋಲನಕ್ಕೆ ಶೀಘ್ರ ಅಂತ್ಯವಂತೂ ಕಾಣುತ್ತಿಲ್ಲ. ಸರ್ಕಾರದೊಂದಿಗಿನ ಮಾತುಕತೆ ಸ್ಥಗಿತಗೊಂಡಿದ್ದರಿಂದ, ಪಂಜಾಬ್ ಬಿಜೆಪಿಯ ಉನ್ನತ ನಾಯಕರಲ್ಲಿಯೂ ಅಸಮಾಧಾನ ಹೆಚ್ಚುತ್ತಿದೆ. ಹಿರಿಯ ಬಿಜೆಪಿ ನಾಯಕಿ ಮತ್ತು ರಾಷ್ಟ್ರೀಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಕಾಂತಾ ಚಾವ್ಲಾ “ಆಂದೋಲನ ಇಷ್ಟು ದಿನ ನಡೆಯಲು ಅವಕಾಶ ನೀಡಬಾರದಿತ್ತು ಮತ್ತು ಪ್ರಧಾನಿ ಅವರು ಬಯಸಿದ್ದರೆ ಒಂದು ದಿನದಲ್ಲಿ ಪರಿಸ್ಥಿತಿಯನ್ನು ಪರಿಹರಿಸಬಹುದು” ಎಂದು ಹೇಳಿದ್ದಾರೆ.

ಫೆಬ್ರವರಿ 15 ರಂದು ಪುರಸಭೆ ಚುನಾವಣೆಗಳು ನಡೆಯಲಿದ್ದು, ಕೃಷಿ ಕಾಯ್ದೆಗಳ ಕುರಿತಾದ ಕೇಂದ್ರದ ನಿಲುವಿಗೆ ಪಂಜಾಬ್ ಬಿಜೆಪಿಯಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅಸಮಾಧಾನ ಭುಗಿಲೇಳುತ್ತಿದೆ. ಇದು ಅಲ್ಲಿನ ಬಿಜೆಪಿಯಲ್ಲಿ ಆತಂಕ ಮೂಡಿಸಿದೆ. ಪ್ರತಿಭಟನೆಗಳು ಹಿಂಸಾತ್ಮಕ ತಿರುವು ಪಡೆಯಬಹುದೆಂದು ಪಂಜಾಬ್ ಬಿಜೆಪಿಯ ಹಲವು ಮುಖಂಡರು ಆತಂಕ ವ್ಯಕ್ತಪಡಿಸಿದ್ದಾರೆ.
ಇಷ್ಟು ದಿನ ಪ್ರತಿಭಟನೆ ನಡೆಯುತ್ತಿದ್ದರೂ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ರೈತರು “ಜಗತ್ತಿಗೆ ಒಂದು ಮಾದರಿಯನ್ನು ನೀಡಿದ್ದಾರೆ” ಎಂದು ಬಿಜೆಪಿ ನಾಯಕಿ ಲಕ್ಷ್ಮೀ ಕಾಂತಾ ಚಾವ್ಲಾ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ಮಾಲ್ವಾ ಮೂಲದ ಬಿಜೆಪಿ ನಾಯಕರೊಬ್ಬರು ಪ್ರತಿಭಟನೆಯ ನಿಜವಾದ ಚಿತ್ರಣವನ್ನು ದೆಹಲಿ ನಾಯಕತ್ವಕ್ಕೆ ಪ್ರಸ್ತುತಪಡಿಸಲು ರಾಜ್ಯ ಘಟಕ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನೆಯ ಹೊರತಾಗಿಯೂ ಸಂಸತ್ತಿನಲ್ಲಿ ಕೃಷಿ ಸುಗ್ರೀವಾಜ್ಞೆಗಳನ್ನು ಅಂಗೀಕರಿಸಲಾಯಿತು. ನಂತರ, ಅಕಾಲಿ ದಳವು ನಮ್ಮೊಂದಿಗಿನ 27 ವರ್ಷಗಳ ಮೈತ್ರಿಯನ್ನು ಮುರಿದುಕೊಂಡಿತು. ಆಗಲೂ ನಮ್ಮ ಪಕ್ಷವು ಎಚ್ಚರಗೊಳ್ಳಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ, ರೈತರು ರೈಲ್ ರೋಕೊ ಮತ್ತು ಅನಿರ್ದಿಷ್ಟ ಪ್ರತಿಭಟನೆಗಳನ್ನು ಅಕ್ಟೋಬರ್‌ನಲ್ಲಿ ಪ್ರಾರಂಭಿಸಿದರೂ, ಕೇಂದ್ರ ಸಚಿವರೊಂದಿಗೆ ಮೊದಲ ಸಭೆಯನ್ನು ತುಂಬ ತಡವಾಗಿ ಏರ್ಪಡಿಸಲಾಯಿತು. ರೈತರು ದೆಹಲಿ ಗಡಿಗಳಿಗೆ ತಲುಪಿದಾಗಿನಿಂದ ಹನ್ನೊಂದು ಸುತ್ತಿನ ಸಭೆಗಳು ನಡೆದಿವೆ, ಆದರೆ ಯಾವುದೇ ಪ್ರಗತಿಯಿಲ್ಲ” ಎಂದು ಬಿಜೆಪಿ ನಾಯಕ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮನೆ ಮುಂದೆ ನೆರೆದ ಜನಸಂದಣಿ: ರಾತ್ರಿಯೇ ದೆಹಲಿಗೆ ಮೆರವಣಿಗೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...