Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...