Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...