Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...