Homeಕರ್ನಾಟಕರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ರಿಲಯನ್ಸ್‌ ಸಂಸ್ಥೆಯ ನಾಯಕತ್ವ: ಕೇಂದ್ರ ಸ್ಥಾನಕ್ಕೆ ಅಂಬಾನಿ ಮಕ್ಕಳ ಪ್ರವೇಶ

ಮುಖೇಶ್ ಅಂಬಾನಿಯವರ ಮೂವರು ಮಕ್ಕಳಾದ ಆಕಾಶ್‌, ಇಶಾ, ಅನಂತ್‌ ಅವರು ಅಂಬಾನಿ ಗುಂಪಿನ ಪ್ರಮುಖ ಜವಾಬ್ದಾರಿಗಳನ್ನು ವಹಿಸಿದ್ದಾರೆ.

- Advertisement -
- Advertisement -

ದೇಶದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರು ತಮ್ಮ ಹಿರಿಯ ಮಗನಿಗೆ ದೂರಸಂಪರ್ಕ (ಟೆಲಿಕಾಂ) ಘಟಕದ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸುವ ರಿಲಯನ್ಸ್‌ ನಾಯಕತ್ವ ಬದಲಾಯಿಸಿದ್ದಾರೆ.

ಕಳೆದ ವರ್ಷ ಮುಖೇಶ್‌ ಅಂಬಾನಿ, “ತನ್ನ ಮಕ್ಕಳು ವ್ಯವಹಾರದಲ್ಲಿ ಮಹತ್ವದ ಪಾತ್ರಗಳನ್ನು ವಹಿಸಲಿದ್ದಾರೆ. ರಿಲಯನ್ಸ್ ಸಂಸ್ಥೆಯು ಮಹತ್ವದ ನಾಯಕತ್ವ ಪರಿವರ್ತನೆಯ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದ್ದರು. ಅದರ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ.

ಸುಮಾರು 200 ಡಾಲರ್‌ ಶತಕೋಟಿ ಮೌಲ್ಯದ ಭಾರತದ ಅತಿದೊಡ್ಡ ಸಂಸ್ಥೆಯಲ್ಲಿ ಅಂಬಾನಿಯವರ ಮೂರು ಮಕ್ಕಳು ಈಗ ಜವಾಬ್ದಾರಿ ವಹಿಸಿದ್ದಾರೆ. ಆಕಾಶ್ ಅಂಬಾನಿ, ಇಶಾ ಅಂಬಾನಿ, ಅನಂತ್‌ ಅಂಬಾನಿ- ಈ ಮೂವರು ಈಗ ಅಂಬಾನಿ ಗುಂಪಿನ ಕೇಂದ್ರ ಸ್ಥಾನಗಳನ್ನು ಅಲಂಕರಿಸಿದ್ದಾರೆ.

ಆಕಾಶ್ ಅಂಬಾನಿ

ಅಂಬಾನಿಯವರ ಹಿರಿಯ ಮಗ ಆಕಾಶ್, ಬ್ರೌನ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರ ಪದವಿಯನ್ನು ಪೂರ್ಣಗೊಳಿಸಿದ್ದು, ಅಂಬಾನಿ ಗುಂಪಿನ ದೂರಸಂಪರ್ಕ ಘಟಕ ರಿಲಯನ್ಸ್ ಜಿಯೋದಲ್ಲಿ ನಾಯಕತ್ವ ವಹಿಸಿದ್ದಾರೆ.

ನಾನ್‌ಎಕ್ಸಿಕ್ಯೂಟಿವ್‌‌ ನಿರ್ದೇಶಕರಾಗಿ, ಕಂಪನಿಯ ಕಾರ್ಯತಂತ್ರ ಮತ್ತು ಬೆಳವಣಿಗೆಯ ಯೋಜನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದರು. ಈ ಕಂಪನಿಯು 400 ಮಿಲಿಯನ್‌ಗಿಂತಲೂ ಹೆಚ್ಚು ಚಂದಾದಾರರನ್ನು ಹೊಂದಿದೆ. ಇದೀಗ ಅವರು ಟೆಲಿಕಾಂ ಘಟಕದ ಅಧ್ಯಕ್ಷರಾಗಲಿದ್ದಾರೆ ಎಂದು ರಿಲಯನ್ಸ್ ಮಂಗಳವಾರ ತಿಳಿಸಿದೆ.

ತನ್ನ ಸಂಸ್ಥೆಯ ಉದ್ಯೋಗಿಗಳನ್ನು ಸಕ್ರಿಯಗೊಳಿಸುವಲ್ಲಿ, ಉತ್ಪನ್ನಗಳ ಅಭಿವೃದ್ಧಿಯಲ್ಲಿ ಆಕಾಶ್ ತೊಡಗಿಸಿಕೊಂಡಿದ್ದಾರೆ. ಕ್ರಿಕೆಟ್ ವ್ಯವಹಾರದಲ್ಲಿಯೂ ಪಾತ್ರ ವಹಿಸಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್‌ನಲ್ಲಿ ರಿಲಯನ್ಸ್ ಒಡೆತನದ ಮುಂಬೈ ಇಂಡಿಯನ್ಸ್ ತಂಡವನ್ನು ನಿರ್ವಹಿಸುವಲ್ಲಿ ಆಕಾಶ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಜಿಯೋ ಪ್ಲಾಟ್‌ಫಾರ್ಮ್ಸ್‌ನಲ್ಲಿ ಮೆಟಾ ಪ್ಲಾಟ್‌ಫಾರ್ಮ್‌ಗಳು 5.7  ಬಿಲಿಯನ್ ಡಾಲರ್‌‌ ಹೂಡಿಕೆ ಮಾಡುವಲ್ಲಿಯೂ ಆಕಾಶ್ ಪಾತ್ರ ವಹಿಸಿದ್ದಾರೆ. 2019ರಲ್ಲಿ ಆಕಾಶ್‌, ವಜ್ರದ ವ್ಯಾಪಾರಿಯ ಮಗಳಾದ ಶ್ಲೋಕಾ ಮೆಹ್ತಾ ಅವರನ್ನು ವಿವಾಹವಾಗಿದ್ದಾರೆ.

ಇಶಾ ಅಂಬಾನಿ

ಆಕಾಶ್ ಅವರ ಅವಳಿ ಸಹೋದರಿ ಇಶಾ ಅಂಬಾನಿ ಈಗಾಗಲೇ ಕಂಪನಿಯ ರಿಟೇಲ್, ಇ-ಕಾಮರ್ಸ್ ಮತ್ತು ಐಷಾರಾಮಿ ಯೋಜನೆಗಳ ಚಾಲನೆಯಲ್ಲಿ ಸಕ್ರಿಯರಾಗಿದ್ದಾರೆ. ರಿಲಯನ್ಸ್ ಭಾರತದ ಅತಿದೊಡ್ಡ ಚಿಲ್ಲರೆ ವ್ಯಾಪಾರದಲ್ಲೂ ತೊಡಗಿಸಿಕೊಂಡಿದೆ. ಕಂಪನಿಯ ಎ-ಜಿಯೊ ಇ-ಕಾಮರ್ಸ್ ಅಪ್ಲಿಕೇಶನ್ ವಿಸ್ತರಿಸುವಲ್ಲಿ ಇಶಾ ಮುಂದಾಳತ್ವ ವಹಿಸಿದ್ದಾರೆ. ಇಶಾ ಅವರು ಸ್ಟ್ಯಾನ್‌ಫೋರ್ಡ್‌ನಿಂದ ಬಿಸಿನೆಸ್ ಮ್ಯಾನೇಜ್‌ಮೆಟ್‌ ಪದವಿ ಪಡೆದಿದ್ದಾರೆ.

ಇದನ್ನೂ ಓದಿರಿ: ಸಿಎಂ ಸ್ಥಾನಕ್ಕೆ ಉದ್ಧವ್‌ ರಾಜೀನಾಮೆ: ಸರ್ಕಾರ ರಚನೆಗೆ ಬಿಜೆಪಿ ನಾಯಕರ ಸಭೆ

ಅನಂತ್ ಅಂಬಾನಿ

ಅನಂತ್ ಅವರು ಅಂಬಾನಿಯವರ ಕಿರಿಯ ಪುತ್ರರಾಗಿದ್ದು, ಅಂಬಾನಿ ಗ್ರೂಪ್‌ನ ಹೂಡಿಕೆಯ ಪ್ರಮುಖ ಕ್ಷೇತ್ರವಾದ ಹೊಸ ಇಂಧನ ವ್ಯವಹಾರದ ಮೇಲೆ ಅನಂತ್‌ ಗಮನ ಹರಿಸಿದ್ದಾರೆ.

ಹಸಿರು ಇಂಧನ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಕಾಂಕ್ಷಿ ಯೋಜನೆಯಲ್ಲಿ ರಿಲಯನ್ಸ್ ಸ್ಪರ್ಧಿಸುತ್ತಿದೆ.

ರಿಲಯನ್ಸ್ ಸಂಸ್ಥೆಯು ಸೌರ ಮತ್ತು ಹಸಿರು ಹೈಡ್ರೋಜನ್ ಸೇರಿದಂತೆ ಶುದ್ಧ ಇಂಧನ ಯೋಜನೆಗಳಲ್ಲಿ ತೊಡಗಿಸಿಕೊಂಡಿದೆ. ಅನಂತ್‌‌ ಇದರಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿಂದೆ ಕಂಪನಿಯ ಕಾರ್ಯಕ್ರಮಗಳಲ್ಲಿ ಆಕಾಶ್ ಮತ್ತು ಇಶಾ ಜೊತೆಗೆ ಪ್ರೇಕ್ಷಕರನ್ನು ಉದ್ದೇಶಿಸಿ ಅನಂತ್‌ ಮಾತನಾಡಿದ್ದರು. ಅನಂತ್ 2017ರಲ್ಲಿ ಬ್ರೌನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...