Homeಕರ್ನಾಟಕಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಸಮ್ಮಿಶ್ರ ಸರ್ಕಾರ ಉರುಳಲು ಪೆಗಾಸಸ್ ಕಾರಣ? HDK, ಸಿದ್ದು ಆಪ್ತ ಸಹಾಯಕರು, ಜಿ.ಪರಮೇಶ್ವರ್ ಫೋನ್ ಹ್ಯಾಕ್!

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.

- Advertisement -
- Advertisement -

ಪೆಗಾಸಸ್ ಕಳೆದ ಎರಡು ದಿನಗಳಲ್ಲಿ ದೇಶದಲ್ಲಿ ಕೋಲಾಹಲ ಸೃಷ್ಟಿಸಿದೆ. ಆದರೆ, ಇಲ್ಲಿಯವರೆಗೆ ಕರ್ನಾಟಕದ ಯಾರ ಹೆಸರು ಕೇಳಿ ಬಂದಿರಲಿಲ್ಲ. ಆದರೆ, ಇಂದು ದಿ ವೈರ್ ಬಿಡುಗಡೆ ಮಾಡಿರುವ ವರದಿಯಲ್ಲಿ ಕರ್ನಾಟಕದ 2019 ರ ಸಮ್ಮಿಶ್ರ ಸರ್ಕಾರ ಉರುಳಲು ಈ ಪೆಗಾಸಸ್ ಗೂಢಚರ್ಯೆ ಕಾರಣವಾಗಿದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ಮೇಲೆ ಪೆಗಾಸಸ್ ಕಣ್ಗಾವಲು ಇದ್ದದ್ದು ಈಗ ಬಹಿರಂಗವಾಗಿದೆ. ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರ ವೈಯಕ್ತಿಕ ಕಾರ್ಯದರ್ಶಿಗಳ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ. ಪೆಗಾಸಸ್ ಗೂಢಚರ್ಚೆಯಿಂದಾಗಿಯೇ 2019 ರ ಜುಲೈನಲ್ಲಿ ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್-ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಲು ಕಾರಣವಾಯಿತೆ ಎಂಬ ಅನುಮಾನಗಳು ಶುರುವಾಗಿವೆ.

ಇದನ್ನೂ ಓದಿ: ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

2019 ರಲ್ಲಿ ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಜೆಪಿ ಸರ್ವ ಪ್ರಯತ್ನ ನಡೆಸುತ್ತಿತ್ತು. ಸರ್ಕಾರ ಮತ್ತು ಭಾರತೀಯ ಜನತಾ ಪಕ್ಷ  ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದ ಸಮಯದಲ್ಲಿ ಕರ್ನಾಟಕದ ಕೆಲವು ಪ್ರಮುಖ ರಾಜಕೀಯ ವ್ಯಕ್ತಿಗಳ ದೂರವಾಣಿ ಸಂಖ್ಯೆಗಳನ್ನು ಹ್ಯಾಕ್ ಮಾಡಲು ಆಯ್ಕೆ ಮಾಡಲಾಗಿದೆ ಎಂದು ವರದಿ ಹೇಳಿದೆ.

ಇದೇ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರದ 17 ಶಾಸಕರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾಗಿದ್ದರು. ನಂತರ ಅವರೆಲ್ಲರೂ ಬಿಜೆಪಿ ಸೇರಿ ಬಹುತೇಕರು ಉಪ ಚುನಾವಣೆಯಲ್ಲಿ ಆಯ್ಕೆಯಾದಾಗ ಈ ಬೆಳವಣಿಗೆಗಳು ನಡೆದಿವೆ ಎಂದು ವರದಿ ಬಹಿರಂಗ ಪಡಿಸಿದೆ.

ಸೋರಿಕೆಯಾಗಿರುವ ದತ್ತಾಂಶದ ಪ್ರಕಾರ, ಆಗಿನ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಪ್ತ ಸಹಾಯಕರಾಗಿದ್ದ ಸತೀಶ್ ಅವರಿಗೆ ಸಂಬಂಧಿಸಿದ ಎರಡು ಫೋನ್ ಸಂಖ್ಯೆಗಳನ್ನು ಪೆಗಾಸಸ್‌ ಟಾರ್ಗೆಟ್ ಮಾಡಲಾಗಿದೆ. 2019 ರ ಮಧ್ಯದಲ್ಲಿ ಗೂಢಚರ್ಯೆಗೆ ಒಳಪಡಿಸಲಾಗಿದೆ. ಸತೀಶ್ ಅವರು 2019 ರಲ್ಲಿ ಇದೆ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದರು ಎಂದು ದೃಢಪಡಿಸಿದ್ದಾರೆ ಎಂದು ದಿ ವೈರ್ ವರದಿ ಮಾಡಿದೆ. ಈ ಸಮಯದಲ್ಲಿ ಕಾಂಗ್ರೆಸ್-ಜೆಡಿ (ಎಸ್) ಸರ್ಕಾರವು ಬಂಡಾಯ ಶಾಸಕರನ್ನು ಮನವೊಲಿಸಲು ಹೆಣಗಾಡುತ್ತಿತ್ತು.

ಇನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಸಹಾಯಕರಾಗಿದ್ದ ವೆಂಕಟೇಶ್ ಅವರ ದೂರವಾಣಿ ಸಂಖ್ಯೆಯನ್ನು ಸಹ ಇದೇ ಅವಧಿಯಲ್ಲಿ ಸೇರಿಸಲಾಗಿದೆ ಎಂದು ವರದಿ ಬಹಿರಂಗ ಪಡಿಸಿದೆ.

ಇದನ್ನೂ ಓದಿ: Explainer: ಏನಿದು ಪೆಗಾಸಸ್? ಹೇಗೆ ಫೋನ್ ಹ್ಯಾಕ್ ಮಾಡುತ್ತದೆ? ಅಪಾಯಗಳೇನು?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ವರ್ಷಗಳಿಂದ ವೈಯಕ್ತಿಕ ಫೋನ್ ಬಳಸುತ್ತಿಲ್ಲ ಮತ್ತು ಫೋನ್ ಸಂಭಾಷಣೆಗಾಗಿ ಅವರು ತಮ್ಮ ಆಪ್ತ ಸಹಾಯಕರನ್ನು ಅವಲಂಬಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಆದ್ದರಿಂದ, ವೆಂಕಟೇಶ್ ಅವರ ಫೋನ್ ಸಂಖ್ಯೆಯನ್ನು ಪೆಗಾಸಸ್‌ ಗೂಢಚರ್ಯೆಗೆ ಆಯ್ಕೆ ಮಾಡಿರುವುದು ಅಪಾರ ಮಹತ್ವವನ್ನು ಪಡೆದುಕೊಂಡಿದೆ ಎಂದು ದಿ ವೈರ್‌ ವರದಿ ಮಾಡಿದೆ.

ಇವರ ಜೊತೆಗೆ  ಮಾಜಿ ಪ್ರಧಾನಿ ಮತ್ತು ಜೆಡಿಎಸ್ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರ ಭದ್ರತಾ ಸಿಬ್ಬಂದಿಯಲ್ಲಿ ಒಬ್ಬರಾಗಿದ್ದ ಮಂಜುನಾಥ್ ಮುದ್ದೇಗೌಡ ಎಂಬ ಪೊಲೀಸ್ ಅಧಿಕಾರಿಯ ಪೋನ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ. ನನ್ನ ಮೊಬೈಲ್ ಸಂಖ್ಯೆ ಎಂದು ಪೊಲೀಸ್ ಅಧಿಕಾರಿ ದೃಢಪಡಿಸಿದ್ದಾರೆ.  ಅವರ ಸಂಖ್ಯೆಯನ್ನು 2019 ರ ಮಧ್ಯದಲ್ಲಿ ಹ್ಯಾಕ್ ಮಾಡಲಾಗಿದೆ.

ಇದೇ ರೀತಿಯಾಗಿ, ಕಾಂಗ್ರೆಸ್ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್‌ ಅವರ ಮೊಬೈಲ್ ನಂಬರ್ ಕೂಡ ಹ್ಯಾಕ್ ಮಾಡಲಾಗಿದೆ.  2019 ರಲ್ಲಿ ಅದೇ ಫೋನ್ ಸಂಖ್ಯೆಯನ್ನು ಬಳಸುತ್ತಿದ್ದು, ಕೆಲವು ತಿಂಗಳುಗಳ ಹಿಂದೆ ಅದರ ಬಳಕೆ ನಿಲ್ಲಿಸಿದ್ದೇನೆ. ಆ ಸಮಯದಲ್ಲಿ ನಾನು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷನಾಗಿರಲಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ದಿ ವೈರ್‌ಗೆ ತಿಳಿಸಿದ್ದಾರೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಪ್ರಸ್ತುತ ಸಂಪುಟದಲ್ಲಿರುವ ಇಬ್ಬರು ಮಂತ್ರಿಗಳು, 40 ಕ್ಕೂ ಹೆಚ್ಚು ಪತ್ರಕರ್ತರು, ಮೂವರು ವಿರೋಧ ಪಕ್ಷದ ನಾಯಕರು ಮತ್ತು ಒಬ್ಬ ನ್ಯಾಯಾಧೀಶರು, ಹಲವಾರು ಉದ್ಯಮಿಗಳು ಮತ್ತು  ಹೋರಾಟಗಾರರು ಸೇರಿದಂತೆ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕರ್ನಾಟಕ ಕಾಂಗ್ರೆಸ್, “ಇಸ್ರೇಲಿ ಗೂಡಾಚಾರಿಕೆ ಸಾಫ್ಟವೇರ್ ಪೆಗಾಸಸ್ ಮೂಲಕ ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ಡಾ.ಜಿ.ಪರಮೇಶ್ವರ್‌ ಅವರ ಫೋನ್‌ಗಳನ್ನು ಕದ್ದು ನೋಡಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಬಿಜೆಪಿ ಪಕ್ಷ ಇಂತಹ ನೀಚ ಕೃತ್ಯಕ್ಕೆ ಇಳಿಯುವ ಮೂಲಕ ಅದೊಂದು ರಾಜಕೀಯ ಪಕ್ಷವಾಗಿರದೆ, ವಿಧ್ವಂಸಕ ಕೃತ್ಯವೆಸಗುವ ಸಂಘಟನೆ ಎಂದು ಸಾಬೀತು ಮಾಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.


ಇದನ್ನೂ ಓದಿ: ಫೋನ್ ಹ್ಯಾಕ್ ಮಾಡಿಯೂ ಬಿಜೆಪಿಗೆ ಚುನಾವಣೆ ಗೆಲ್ಲಲು ಸಾಧ್ಯವಾಗಲಿಲ್ಲ: ಟಿಎಂಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...