Homeಮುಖಪುಟ'ಇನ್ನಾದರೂ ಪಾಠ ಕಲಿಯಿರಿ': ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

‘ಇನ್ನಾದರೂ ಪಾಠ ಕಲಿಯಿರಿ’: ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಸೋಲಿಗೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಬುಧವಾರ ಟೀಕಿಸಿದ್ದು, ”ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಪಕ್ಷ ನಂಬಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾವತ್, ಕಾಂಗ್ರೆಸ್ “ಗೆಲುವಿನ ಆಟವನ್ನು ಸೋಲನ್ನಾಗಿ ಪರಿವರ್ತಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ “ಅತಿಯಾದ ಆತ್ಮವಿಶ್ವಾಸ” ಮತ್ತು ಸ್ಥಳೀಯ ನಾಯಕರ “ಅಹಂಕಾರ” ಕಾರಣ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಕುಮಾರಿ ಸೆಲ್ಜಾ ಅವರಂತಹ ಪ್ರಮುಖ ವ್ಯಕ್ತಿಗಳನ್ನು ಬದಿಗಿಟ್ಟು, ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಪ್ರಾಬಲ್ಯವನ್ನು ಸಂಪಾದಕೀಯವು ವಿಶೇಷವಾಗಿ ಟೀಕಿಸಿದೆ. ಈ ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದ್ದು ಮತ್ತು ಕಳಪೆ ಮಟ್ಟದ ಪ್ರಚಾರಕ್ಕೆ ಕಾರಣವಾಯಿತು ಎಂದು ಅದು ವಾದಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಭಾವನೆ ಇದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಕಾಣುತ್ತದೆ ಎಂದು ಹಲವರು ನಿರೀಕ್ಷೆಯಿಟ್ಟಿದ್ದರು ಸಂಪಾದಕೀಯ ಹೇಳಿದೆ. ಆದಾಗ್ಯೂ, ಬಿಜೆಪಿ ವಿರೋಧಿ ವಾತಾವರಣವನ್ನು ಲಾಭ ಮಾಡಿಕೊಳ್ಳುವಲ್ಲಿ ಪಕ್ಷದ ಆಂತರಿಕ ಕಲಹವು ಬಾರಿ ದೊಡ್ಡ ವೈಫಲ್ಯ ಅನುಭವಿಸಿದೆ ಎಂದು ಸಂಪಾದಕೀಯ ಹೇಳಿಕೊಂಡಿದೆ.

ಗೆಲ್ಲುವ ಪಂದ್ಯವನ್ನು ಸೋಲನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಎಲ್ಲರೂ ಕಲಿಯಬೇಕು ಎಂದು ಸಂಪಾದಕೀಯ ಹೇಳಿದೆ. ಹರಿಯಾಣದಲ್ಲಿ ಪಕ್ಷದ ಸೋಲಿನಿಂದ ಪಾಠ ಕಲಿಯುವಂತೆ ಸಂಪಾದಕೀಯವು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಮೈತ್ರಿಯ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ರಾವತ್ ಪ್ರತಿಪಾದಿಸಿದ್ದಾರೆ. “ಹರಿಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆಂದರೆ ಕಾಂಗ್ರೆಸ್ ಸ್ವಂತವಾಗಿ ಗೆಲ್ಲುತ್ತೇವೆ ಮತ್ತು ಅಧಿಕಾರದಲ್ಲಿ ತನಗೆ ಬೇರೆ ಪಾಲುದಾರರ ಅಗತ್ಯವಿಲ್ಲ ಎಂದು ಭಾವಿಸಿತ್ತು” ಎಂದು ಸಂಪಾದಕೀಯ ಹೇಳಿದೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಹರಿಯಾನ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

“ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಉತ್ತಮವಾಗಿ ಹೋರಾಡಿ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಬೇಕಾಯಿತು. ಆಡಳಿತ ವಿರೋಧಿ ಅಲೆಯ ನಂತರವೂ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಹರಿಯಾಣ ವಿಧಾನಸಭೆಯ 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗೆದ್ದಿದ್ದು ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ (INLD) 2 ಸ್ಥಾನಗಳನ್ನು ಪಡೆದುಕೊಂಡಿದೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಎಂವಿಎಯಲ್ಲಿ ಸೀಟು ಹಂಚಿಕೆ ಸೂತ್ರದ ಕುರಿತು ಮಾತುಕತೆಗಳು ನಡೆಯುತ್ತಿವೆ.

ವಿಡಿಯೊ ನೊಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...