Homeಮುಖಪುಟ'ಇನ್ನಾದರೂ ಪಾಠ ಕಲಿಯಿರಿ': ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

‘ಇನ್ನಾದರೂ ಪಾಠ ಕಲಿಯಿರಿ’: ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಸೋಲಿಗೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಬುಧವಾರ ಟೀಕಿಸಿದ್ದು, ”ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಪಕ್ಷ ನಂಬಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾವತ್, ಕಾಂಗ್ರೆಸ್ “ಗೆಲುವಿನ ಆಟವನ್ನು ಸೋಲನ್ನಾಗಿ ಪರಿವರ್ತಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ “ಅತಿಯಾದ ಆತ್ಮವಿಶ್ವಾಸ” ಮತ್ತು ಸ್ಥಳೀಯ ನಾಯಕರ “ಅಹಂಕಾರ” ಕಾರಣ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಕುಮಾರಿ ಸೆಲ್ಜಾ ಅವರಂತಹ ಪ್ರಮುಖ ವ್ಯಕ್ತಿಗಳನ್ನು ಬದಿಗಿಟ್ಟು, ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಪ್ರಾಬಲ್ಯವನ್ನು ಸಂಪಾದಕೀಯವು ವಿಶೇಷವಾಗಿ ಟೀಕಿಸಿದೆ. ಈ ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದ್ದು ಮತ್ತು ಕಳಪೆ ಮಟ್ಟದ ಪ್ರಚಾರಕ್ಕೆ ಕಾರಣವಾಯಿತು ಎಂದು ಅದು ವಾದಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಭಾವನೆ ಇದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಕಾಣುತ್ತದೆ ಎಂದು ಹಲವರು ನಿರೀಕ್ಷೆಯಿಟ್ಟಿದ್ದರು ಸಂಪಾದಕೀಯ ಹೇಳಿದೆ. ಆದಾಗ್ಯೂ, ಬಿಜೆಪಿ ವಿರೋಧಿ ವಾತಾವರಣವನ್ನು ಲಾಭ ಮಾಡಿಕೊಳ್ಳುವಲ್ಲಿ ಪಕ್ಷದ ಆಂತರಿಕ ಕಲಹವು ಬಾರಿ ದೊಡ್ಡ ವೈಫಲ್ಯ ಅನುಭವಿಸಿದೆ ಎಂದು ಸಂಪಾದಕೀಯ ಹೇಳಿಕೊಂಡಿದೆ.

ಗೆಲ್ಲುವ ಪಂದ್ಯವನ್ನು ಸೋಲನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಎಲ್ಲರೂ ಕಲಿಯಬೇಕು ಎಂದು ಸಂಪಾದಕೀಯ ಹೇಳಿದೆ. ಹರಿಯಾಣದಲ್ಲಿ ಪಕ್ಷದ ಸೋಲಿನಿಂದ ಪಾಠ ಕಲಿಯುವಂತೆ ಸಂಪಾದಕೀಯವು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಮೈತ್ರಿಯ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ರಾವತ್ ಪ್ರತಿಪಾದಿಸಿದ್ದಾರೆ. “ಹರಿಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆಂದರೆ ಕಾಂಗ್ರೆಸ್ ಸ್ವಂತವಾಗಿ ಗೆಲ್ಲುತ್ತೇವೆ ಮತ್ತು ಅಧಿಕಾರದಲ್ಲಿ ತನಗೆ ಬೇರೆ ಪಾಲುದಾರರ ಅಗತ್ಯವಿಲ್ಲ ಎಂದು ಭಾವಿಸಿತ್ತು” ಎಂದು ಸಂಪಾದಕೀಯ ಹೇಳಿದೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಹರಿಯಾನ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

“ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಉತ್ತಮವಾಗಿ ಹೋರಾಡಿ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಬೇಕಾಯಿತು. ಆಡಳಿತ ವಿರೋಧಿ ಅಲೆಯ ನಂತರವೂ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಹರಿಯಾಣ ವಿಧಾನಸಭೆಯ 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗೆದ್ದಿದ್ದು ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ (INLD) 2 ಸ್ಥಾನಗಳನ್ನು ಪಡೆದುಕೊಂಡಿದೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಎಂವಿಎಯಲ್ಲಿ ಸೀಟು ಹಂಚಿಕೆ ಸೂತ್ರದ ಕುರಿತು ಮಾತುಕತೆಗಳು ನಡೆಯುತ್ತಿವೆ.

ವಿಡಿಯೊ ನೊಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...