Homeಮುಖಪುಟ'ಇನ್ನಾದರೂ ಪಾಠ ಕಲಿಯಿರಿ': ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

‘ಇನ್ನಾದರೂ ಪಾಠ ಕಲಿಯಿರಿ’: ಹರಿಯಾಣ ಸೋಲಿನ ಬಗ್ಗೆ ಕಾಂಗ್ರೆಸ್‌ಗೆ ಶಿವಸೇನೆ (ಯುಬಿಟಿ) ವಾಗ್ದಾಳಿ

- Advertisement -
- Advertisement -

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಪ್ರಮುಖ ಪಕ್ಷ ಕಾಂಗ್ರೆಸ್ ಸೋಲಿಗೆ ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವುತ್ ಬುಧವಾರ ಟೀಕಿಸಿದ್ದು, ”ಮಿತ್ರಪಕ್ಷಗಳ ಬೆಂಬಲವಿಲ್ಲದೆ ಗೆಲ್ಲಬಹುದು ಎಂದು ಪಕ್ಷ ನಂಬಿತ್ತು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶಿವಸೇನೆ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯದಲ್ಲಿ ಬರೆದಿರುವ ಸಂಜಯ್ ರಾವತ್, ಕಾಂಗ್ರೆಸ್ “ಗೆಲುವಿನ ಆಟವನ್ನು ಸೋಲನ್ನಾಗಿ ಪರಿವರ್ತಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿಗೆ “ಅತಿಯಾದ ಆತ್ಮವಿಶ್ವಾಸ” ಮತ್ತು ಸ್ಥಳೀಯ ನಾಯಕರ “ಅಹಂಕಾರ” ಕಾರಣ ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿ ಆಯ್ಕೆಯಲ್ಲಿ ಕುಮಾರಿ ಸೆಲ್ಜಾ ಅವರಂತಹ ಪ್ರಮುಖ ವ್ಯಕ್ತಿಗಳನ್ನು ಬದಿಗಿಟ್ಟು, ಹರಿಯಾಣ ಕಾಂಗ್ರೆಸ್ ನಾಯಕ ಭೂಪಿಂದರ್ ಸಿಂಗ್ ಹೂಡಾ ಅವರ ಪ್ರಾಬಲ್ಯವನ್ನು ಸಂಪಾದಕೀಯವು ವಿಶೇಷವಾಗಿ ಟೀಕಿಸಿದೆ. ಈ ಆಂತರಿಕ ಭಿನ್ನಾಭಿಪ್ರಾಯವು ಕಾಂಗ್ರೆಸ್‌ನ ಸಂಘಟನಾ ಶಕ್ತಿಯನ್ನು ದುರ್ಬಲಗೊಳಿಸಿದ್ದು ಮತ್ತು ಕಳಪೆ ಮಟ್ಟದ ಪ್ರಚಾರಕ್ಕೆ ಕಾರಣವಾಯಿತು ಎಂದು ಅದು ವಾದಿಸಿದೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಭಾವನೆ ಇದ್ದು, ಕಾಂಗ್ರೆಸ್ ಪ್ರಚಂಡ ಗೆಲುವು ಕಾಣುತ್ತದೆ ಎಂದು ಹಲವರು ನಿರೀಕ್ಷೆಯಿಟ್ಟಿದ್ದರು ಸಂಪಾದಕೀಯ ಹೇಳಿದೆ. ಆದಾಗ್ಯೂ, ಬಿಜೆಪಿ ವಿರೋಧಿ ವಾತಾವರಣವನ್ನು ಲಾಭ ಮಾಡಿಕೊಳ್ಳುವಲ್ಲಿ ಪಕ್ಷದ ಆಂತರಿಕ ಕಲಹವು ಬಾರಿ ದೊಡ್ಡ ವೈಫಲ್ಯ ಅನುಭವಿಸಿದೆ ಎಂದು ಸಂಪಾದಕೀಯ ಹೇಳಿಕೊಂಡಿದೆ.

ಗೆಲ್ಲುವ ಪಂದ್ಯವನ್ನು ಸೋಲನ್ನಾಗಿ ಪರಿವರ್ತಿಸುವುದು ಹೇಗೆ ಎಂಬುದನ್ನು ಕಾಂಗ್ರೆಸ್‌ನಿಂದ ಎಲ್ಲರೂ ಕಲಿಯಬೇಕು ಎಂದು ಸಂಪಾದಕೀಯ ಹೇಳಿದೆ. ಹರಿಯಾಣದಲ್ಲಿ ಪಕ್ಷದ ಸೋಲಿನಿಂದ ಪಾಠ ಕಲಿಯುವಂತೆ ಸಂಪಾದಕೀಯವು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕರಿಗೆ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಮೈತ್ರಿಯ ಭಾಗವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಫಲಿತಾಂಶಗಳು ವಿಭಿನ್ನವಾಗಿರುತ್ತಿದ್ದವು ಎಂದು ರಾವತ್ ಪ್ರತಿಪಾದಿಸಿದ್ದಾರೆ. “ಹರಿಯಾಣದಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲು ಸಾಧ್ಯವಾಗಲಿಲ್ಲ ಏಕೆಂದರೆ ಕಾಂಗ್ರೆಸ್ ಸ್ವಂತವಾಗಿ ಗೆಲ್ಲುತ್ತೇವೆ ಮತ್ತು ಅಧಿಕಾರದಲ್ಲಿ ತನಗೆ ಬೇರೆ ಪಾಲುದಾರರ ಅಗತ್ಯವಿಲ್ಲ ಎಂದು ಭಾವಿಸಿತ್ತು” ಎಂದು ಸಂಪಾದಕೀಯ ಹೇಳಿದೆ.

ಶಿವಸೇನೆ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ಕೂಡ ಹರಿಯಾನ ಸೋಲಿನ ಬಗ್ಗೆ ಕಾಂಗ್ರೆಸ್ ಆತ್ಮಾವಲೋಕನ ಮಾಡಿಕೊಳ್ಳುವಂತೆ ಕರೆ ನೀಡಿದ್ದಾರೆ.

ಇದನ್ನೂಓದಿ: ಇಬ್ಬರು ಮಾಜಿ ಸಿಎಂಗಳಿಗೆ ಹನಿಟ್ರ್ಯಾಪ್ ಮಾಡಿ ಸಚಿವ ಸ್ಥಾನ ಪಡೆದಿದ್ದ ಮುನಿರತ್ನ : ಸಂತ್ರಸ್ತ ಮಹಿಳೆ ಗಂಭೀರ ಆರೋಪ

“ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಉತ್ತಮವಾಗಿ ಹೋರಾಡಿ ಸರ್ಕಾರ ರಚಿಸಲು ಸಜ್ಜಾಗಿದ್ದಾರೆ. ಹರಿಯಾಣದಲ್ಲಿ ಕಾಂಗ್ರೆಸ್ ಸೋಲನ್ನು ಅನುಭವಿಸಬೇಕಾಯಿತು. ಆಡಳಿತ ವಿರೋಧಿ ಅಲೆಯ ನಂತರವೂ ಹರಿಯಾಣದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ. ಕಾಂಗ್ರೆಸ್ ತನ್ನ ಸೋಲಿಗೆ ಕಾರಣಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

ಹರಿಯಾಣ ವಿಧಾನಸಭೆಯ 90 ಸ್ಥಾನಗಳಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ 37 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಮಂಗಳವಾರ ಬಿಡುಗಡೆಯಾದ ECI ಅಂಕಿಅಂಶಗಳ ಪ್ರಕಾರ, ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳನ್ನು ಗೆದ್ದಿದ್ದು ಮತ್ತು ಇಂಡಿಯನ್ ನ್ಯಾಷನಲ್ ಲೋಕದಳ (INLD) 2 ಸ್ಥಾನಗಳನ್ನು ಪಡೆದುಕೊಂಡಿದೆ.

ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್, ಎನ್‌ಸಿಪಿ (ಎಸ್‌ಪಿ) ಮತ್ತು ಶಿವಸೇನೆ (ಯುಬಿಟಿ) ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಮಾಡಿಕೊಂಡಿದೆ. ರಾಜ್ಯದಲ್ಲಿ ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಎಂವಿಎಯಲ್ಲಿ ಸೀಟು ಹಂಚಿಕೆ ಸೂತ್ರದ ಕುರಿತು ಮಾತುಕತೆಗಳು ನಡೆಯುತ್ತಿವೆ.

ವಿಡಿಯೊ ನೊಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...