Homeಮುಖಪುಟ370ನೇ ವಿಧಿಯನ್ನು ಅಂಬೇಡ್ಕರ್ ಯಾಕೆ ಸೇರಿಸಿದರೆಂದು ಇತಿಹಾಸ ತಿಳಿಯಿರಿ: ಉಪರಾಷ್ಟ್ರಪತಿ ಧನ್ಕರ್

370ನೇ ವಿಧಿಯನ್ನು ಅಂಬೇಡ್ಕರ್ ಯಾಕೆ ಸೇರಿಸಿದರೆಂದು ಇತಿಹಾಸ ತಿಳಿಯಿರಿ: ಉಪರಾಷ್ಟ್ರಪತಿ ಧನ್ಕರ್

- Advertisement -
- Advertisement -

ಕತ್ರಾ (ಜಮ್ಮು-ಕಾಶ್ಮೀರ): 2019ರಲ್ಲಿ 370ನೇ ವಿಧಿಯನ್ನು “ಐತಿಹಾಸಿಕ”ವಾಗಿ ರದ್ದುಗೊಳಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊಸ ಪ್ರಯಾಣ ಆರಂಭವಾಯಿತು, ಪವಿತ್ರ ಪ್ರದೇಶವನ್ನು ಇನ್ನು ಮುಂದೆ ಸಂಘರ್ಷ ವಲಯವೆಂದು ಪರಿಗಣಿಸಲಾಗುವುದಿಲ್ಲ ಮತ್ತು ಅದರ ಜನರ ಆಶಯಗಳು ಹೆಚ್ಚಿವೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಶನಿವಾರ ಹೇಳಿದರು.

ಒಂದು ಕಾಲದಲ್ಲಿ ಅವ್ಯವಸ್ಥೆ ಇದ್ದ ಕಡೆ, ನಾವು ಈಗ ನಿಜವಾದ ಕ್ರಮ ಮತ್ತು ಸ್ಥಿರತೆಗೆ ಸಾಕ್ಷಿಯಾಗಿದ್ದೇವೆ ಎಂದ ಉಪರಾಷ್ಟ್ರಪತಿಯವರು, ಇಲ್ಲಿ ಮಾತಾ ವೈಷ್ಣೋದೇವಿ ವಿಶ್ವವಿದ್ಯಾಲಯದ (SMVDU) 10ನೇ ಘಟಿಕೋತ್ಸವ ಸಮಾರಂಭದಲ್ಲಿ ಸಭೆಯನ್ನುದ್ದೇಶಿಸಿ ಹೇಳಿದರು.

ಬಿಜೆಪಿ ಸಿದ್ಧಾಂತವಾದಿ ಶ್ಯಾಮ ಪ್ರಸಾದ್ ಮುಖರ್ಜಿ ಅವರನ್ನು ಸ್ಪಷ್ಟವಾಗಿ ಉಲ್ಲೇಖಿಸುತ್ತಾ ಮಣ್ಣಿನ ಮಹಾನ್ ಪುತ್ರ ಒಮ್ಮೆ ‘ಏಕ್ ದೇಶ್ ಮೇ ಏಕ್ ನಿಶಾನ್, ಏಕ್ ವಿಧಾನ್, ಏಕ್ ಪ್ರಧಾನ್’ ಬೇಡಿಕೆಯನ್ನು ಧ್ವನಿಸಿದ್ದರು ಮತ್ತು ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಆ ಕನಸು ನನಸಾಗಿದೆ ಎಂದು ಉಪರಾಷ್ಟ್ರಪತಿ ಹೇಳಿದರು.

2019ರಲ್ಲಿ 370ನೇ ವಿಧಿಯ ಐತಿಹಾಸಿಕ ರದ್ದತಿಯೊಂದಿಗೆ ತಲೆಮಾರುಗಳ ಆಕಾಂಕ್ಷೆಗಳಿಗೆ ರೆಕ್ಕೆಗಳು ಗರಿಗೆದರಿದವು. ಮಾತಾ ವೈಷ್ಣೋದೇವಿಯ ಪವಿತ್ರ ಭೂಮಿಯಲ್ಲಿ, ಒಂದು ಹೊಸ ತೀರ್ಥಯಾತ್ರೆ ಪ್ರಾರಂಭವಾಯಿತು ಎಂದು ಅವರು ಹೇಳಿದರು.

ಸಂವಿಧಾನದ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರು 370ನೇ ವಿಧಿಯನ್ನು ಹೊರತುಪಡಿಸಿ ಎಲ್ಲಾ ವಿಧಿಗಳನ್ನು ರಚಿಸಿದರು ಎಂದು ಅವರು ಹೇಳಿದರು.

ಅವರು ಏಕೆ ನಿರಾಕರಿಸಿದರು ಎಂಬುದರ ಹಿನ್ನೆಲೆಯನ್ನು ತಿಳಿಯಲು ಐತಿಹಾಸಿಕ ದೃಷ್ಟಿಕೋನಕ್ಕೆ ಹೋಗಬೇಕೆಂದು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ” ಎಂದು ಅವರು ಹೇಳಿದರು, ಭಾರತೀಯ ರಾಜಕೀಯ ಆಕಾಶದ ಮತ್ತೊಬ್ಬ “ಅತ್ಯುನ್ನತ ದೈತ್ಯ” ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹೊರತುಪಡಿಸಿ ಇತರ ರಾಜ್ಯಗಳನ್ನು ಸಂಯೋಜಿಸುವ ಕಾರ್ಯವನ್ನು ಸ್ವತಃ ವಹಿಸಿಕೊಂಡರು ಎಂದು ಅವರು ಹೇಳಿದರು.

“ಈಗ ಬದಲಾವಣೆಯ ಗಾಳಿಯು ಶಾಂತಿ ಮತ್ತು ಪ್ರಗತಿಯನ್ನು ತಂದಿದೆ.” “ಏಕ್ ದೇಶ್ ಮೇ ಏಕ್ ನಿಶಾನ್, ಏಕ್ ವಿಧಾನ್, ಏಕ್ ಪ್ರಧಾನ್” ಎಂಬ ಬೇಡಿಕೆಯನ್ನು ಈಡೇರಿಸಿದ ಮಹಾನ್ ಮಣ್ಣಿನ ಪುತ್ರನೊಬ್ಬನಿದ್ದರು ಮತ್ತು ಅದು ಈಡೇರಿದೆ” ಎಂದು ಉಪರಾಷ್ಟ್ರಪತಿ ಹೇಳಿದರು.

1980ರ ದಶಕದ ಆರಂಭದಲ್ಲಿ ಗುಲ್ಮಾರ್ಗ್, ಸೋನಾಮಾರ್ಗ್ ಮತ್ತು ಇತರ ಸ್ಥಳಗಳಿಗೆ ತಮ್ಮ ಕುಟುಂಬದೊಂದಿಗೆ ಭೇಟಿ ನೀಡಿದಾಗ ಅವರು ಮೊದಲು ಜಮ್ಮು ಮತ್ತು ಕಾಶ್ಮೀರಕ್ಕೆ ಬಂದೆವು ಎಂದು ಹೇಳಿದ ಉಪರಾಷ್ಟ್ರಪತಿ, ಎರಡನೇ ಭೇಟಿ ಬಹಳ ನೋವಿನ ಅನುಭವವಾಗಿತ್ತು. ನಾನು 1989ರಲ್ಲಿ ಸಂಸತ್ತಿಗೆ ಆಯ್ಕೆಯಾದೆ. ನಾನು ಸಚಿವ ಸಂಪುಟದ ಸದಸ್ಯನಾಗಿ ಶ್ರೀನಗರಕ್ಕೆ ಬಂದೆ. ಶ್ರೀನಗರದ ಬೀದಿಗಳಲ್ಲಿ ಡಜನ್‌ಗಟ್ಟಲೆ ಜನರನ್ನು ನಾವು ನೋಡಲಿಲ್ಲ ಮತ್ತು ಆ ದೃಶ್ಯವು ಕತ್ತಲೆಯಾಗಿತ್ತು ಎಂದಿದ್ದಾರೆ.

ನಾವು ಈಗ ಎಲ್ಲಿದ್ದೇವೆ ಎಂದು ನೋಡಿ. ಎರಡು ಕೋಟಿಗೂ ಹೆಚ್ಚು ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ಬಂದು ಹೋಗಿದ್ದಾರೆ ಎಂದು ಘೋಷಿಸಿದಾಗ ರಾಜ್ಯಸಭೆಯಲ್ಲಿ ನನಗೆ ಅದು ವೈಭವೀಕರಣದ ಕ್ಷಣವಾಗಿತ್ತು ಎಂದು ಹೇಳಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ 35 ವರ್ಷಗಳಲ್ಲಿ ಅತಿ ಹೆಚ್ಚು ಮತದಾನವಾಗಿದ್ದ ಜಮ್ಮು ಮತ್ತು ಕಾಶ್ಮೀರವು ಕಣಿವೆಯಲ್ಲಿ ಮತದಾರರ ಭಾಗವಹಿಸುವಿಕೆಯಲ್ಲಿ 30 ಅಂಕಗಳ ಹೆಚ್ಚಳವನ್ನು ಕಂಡಿದೆ ಎಂದು ಉಪರಾಷ್ಟ್ರಪತಿ ಹೇಳಿದರು.

“ಪ್ರಜಾಪ್ರಭುತ್ವವು ತನ್ನ ನಿಜವಾದ ಧ್ವನಿಯನ್ನು ಮತ್ತು ಅದರ ನಿಜವಾದ ಅನುರಣನವನ್ನು ಕಂಡುಕೊಂಡಿದೆ. ಈ ಪ್ರದೇಶವು ಇನ್ನು ಮುಂದೆ ಸಂಘರ್ಷದ ಕಥೆಯಾಗುವುದಿಲ್ಲ; ಹೊಸ ಕಾಶ್ಮೀರದಲ್ಲಿನ ಪ್ರತಿಯೊಂದು ಹೂಡಿಕೆ ಪ್ರಸ್ತಾವನೆಯು ಕೇವಲ ಬಂಡವಾಳದ ಬಗ್ಗೆ ಮಾತ್ರ ಅಲ್ಲ, ಅದು ನಂಬಿಕೆಯನ್ನು ಪುನಃಸ್ಥಾಪಿಸುವ ಬಗ್ಗೆ, ನಂಬಿಕೆಗೆ ಪ್ರತಿಫಲ ನೀಡುವ ಬಗ್ಗೆಯಾಗಿದೆ” ಎಂದರು.

“ಬದಲಾವಣೆಯು ಅಗ್ರಾಹ್ಯವಲ್ಲ; ಅದು ಗ್ರಹಿಸಬಹುದಾದದ್ದು. ಗ್ರಹಿಕೆ ಬದಲಾಗಿದೆ, ನೆಲದ ವಾಸ್ತವ ಬದಲಾಗುತ್ತಿದೆ, ಜನರ ಭರವಸೆಗಳು ಗಗನಕ್ಕೇರುತ್ತಿವೆ” ಎಂದು ಅವರು ಹೇಳಿದರು.

ಕೇವಲ ಎರಡು ವರ್ಷಗಳಲ್ಲಿ, ಜಮ್ಮು ಮತ್ತು ಕಾಶ್ಮೀರವು 65,000 ಕೋಟಿ ರೂ. ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಸ್ವೀಕರಿಸಿದೆ. ಇದು ಈ ಪ್ರದೇಶದಲ್ಲಿ ಬಲವಾದ ಆರ್ಥಿಕ ಆಸಕ್ತಿಯನ್ನು ಸೂಚಿಸುತ್ತದೆ ಎಂದು ತಿಳಿಸಿದರು.

2019ರ ನಂತರ ಮೊದಲ ಬಾರಿಗೆ ವಿದೇಶಿ ನೇರ ಹೂಡಿಕೆ (FDI) ಜಮ್ಮು ಮತ್ತು ಕಾಶ್ಮೀರವನ್ನು ಪ್ರವೇಶಿಸಿದೆ ಮತ್ತು ಹಲವಾರು ಅಂತರರಾಷ್ಟ್ರೀಯ ಕಂಪನಿಗಳು ಆಸಕ್ತಿ ತೋರಿಸಿವೆ. ಈ ಪ್ರದೇಶವು ವಿಶ್ವಾಸ ಮತ್ತು ಬಂಡವಾಳದ ಸಂಗಮವಾಗಿದೆ ಎಂದು ಉಪರಾಷ್ಟ್ರಪತಿ ಹೇಳಿದರು.

“2023ರಲ್ಲಿ ಎರಡು ಕೋಟಿಗೂ ಹೆಚ್ಚು ಪ್ರವಾಸಿಗರ ಭೇಟಿ ಸ್ಥಳೀಯ ಆರ್ಥಿಕತೆಗೆ ಅಗಾಧ ಉತ್ತೇಜನ ನೀಡಿತು. ಒಂದು ಕಾಲದಲ್ಲಿ ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲ್ಪಡುತ್ತಿದ್ದ ಸ್ಥಳವು ಈಗ ಭರವಸೆ ಮತ್ತು ಸಮೃದ್ಧಿಯ ಸಂಕೇತವಾಗಿದೆ. ಬದಲಾವಣೆಯ ಗಾಳಿ ಶಾಂತಿ ಮತ್ತು ಪ್ರಗತಿಯನ್ನು ತಂದಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತಕ್ಕೆ ಹೊಸ ಉದಯದ ಶಿಲ್ಪಿಗಳಾಗಿ ನಾವು ಕಾರ್ಯನಿರ್ವಹಿಸೋಣ” ಎಂದು ಅವರು ಹೇಳಿದರು.

ಉರ್ದು ಶಾಲೆಗಳಲ್ಲಿ ವಾರ್ಷಿಕ 5000 ಕೋಟಿ ಭ್ರಷ್ಟಾಚಾರ: ಮಹಾರಾಷ್ಟ್ರ ಅಲ್ಪಸಂಖ್ಯಾತ ಆಯೋಗದ ನೂತನ ಅಧ್ಯಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...