Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ : ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಎಷ್ಟು ಮನೆಗಳನ್ನು ನೆಲಸಮ ಮಾಡಲಾಗಿದೆ. ಇದರಿಂದಾಗಿ ಎಷ್ಟು ಕುಟುಂಬಗಳು ನಿರಾಶ್ರಿತರಾಗಿದ್ದಾರೆ ಮತ್ತು ಪುನರ್ವವಸತಿಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಮಾಹಿತಿಯನ್ನು ಒಳಗೊಂಡ ವರದಿ ಸಲ್ಲಿಸುವಂತೆ ಪ್ರಕರಣದಲ್ಲಿ ನ್ಯಾಯಾಲಯದ ನೆರವುಗಾರರಾಗಿರುವ...

ಫೈಝಾನ್ ಸಾವು ಪ್ರಕರಣ : ಆರು ವರ್ಷಗಳ ಬಳಿಕ ಇಬ್ಬರು ಪೊಲೀಸರಿಗೆ ಕೋರ್ಟ್ ಸಮನ್ಸ್

ಈಶಾನ್ಯ ದೆಹಲಿಯ 2020ರ ಗಲಭೆ ವೇಳೆ ಮುಸ್ಲಿಂ ಯುವಕ ಫೈಝಾನ್ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಸಾವನ್ನಪ್ಪುವ ಮುನ್ನ ಇತರ ನಾಲ್ಕೈದು ಯುವಕರೊಂದಿಗೆ...

ಗಂಗಾವತಿ : ವಿದೇಶಿ ಮಹಿಳೆ ಸೇರಿ ಇಬ್ಬರ ಅತ್ಯಾಚಾರ, ಓರ್ವನ ಕೊಲೆ ಪ್ರಕರಣ : ಮೂವರು ದೋಷಿಗಳು ಎಂದ ಕೋರ್ಟ್

ಕೊಪ್ಪಳದ ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿ ಸ್ಥಳೀಯ ಹೋಮ್‌ ಸ್ಟೇ ಮಾಲಕಿ ಮತ್ತು ಇಸ್ರೇಲಿ ಯುವತಿ ಮೇಲೆ ಅತ್ಯಾಚಾರವೆಸಗಿ, ಅವರ ಜೊತೆಗಿದ್ದ ಯುವಕನನ್ನು ಕೊಲೆಗೈದ ಪ್ರಕರಣದ ಮೂವರು ಆರೋಪಿಗಳನ್ನು ಒಂದನೇ ಹೆಚ್ಚುವರಿ...

ರಾಜಸ್ಥಾನದ ಬುಂಡಿಯಲ್ಲಿ ಎರಡು ಬಾಲ್ಯ ವಿವಾಹಗಳು ಸ್ಥಗಿತ; ಬಾಲಕಿಯರ ದೂರಿನ ಮೇರೆಗೆ ಅಧಿಕಾರಿಗಳ ಮಧ್ಯಪ್ರವೇಶ

ಕೋಟಾ: ಫೆಬ್ರವರಿ 10ರಂದು ನಿಗದಿಯಾಗಿದ್ದ ತಮ್ಮ ವಿವಾಹಗಳನ್ನು ನಿಲ್ಲಿಸುವಂತೆ ರಾಜಸ್ಥಾನದ ಬುಂಡಿ ಜಿಲ್ಲೆಯ 12ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಹುಡುಗಿಯರು ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. 17 ವರ್ಷದ ಬಾಲಕಿಯೊಬ್ಬಳು ತನ್ನ...

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...