Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...