Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...