Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...