Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...