Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...