Homeಕರ್ನಾಟಕ'ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ': ಸಂತೋಷ್ ಕೌಲಗಿ

‘ಈ ಕಗ್ಗತ್ತಲ ಕಾಲದಲ್ಲಿ ಗಾಂಧಿ ವಿಚಾರಗಳನ್ನು ಎದೆಗಿಳಿಸಿಕೊಳ್ಳೋಣ’: ಸಂತೋಷ್ ಕೌಲಗಿ

- Advertisement -
- Advertisement -

ಹಳ್ಳಿಯ ಜನರಿಗೆ ಗಾಂಧಿ ಕುರಿತು ಯಾವಾಗ ಬೇಕಾದರೂ ಹೇಳಬಹುದು. ಆದರೆ ನಮ್ಮೊಳಗೆ ಗಾಂಧಿಯನ್ನು ಎಷ್ಟು ಬಿಟ್ಟುಕೊಂಡಿದ್ದೇವೆ ಎಂಬುದನ್ನು ಪರೀಕ್ಷಿಸಲು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ ಎಂದು ಮೇಲುಕೋಟೆಯ ಜನಪದ ಸೇವಾ ಟ್ರಸ್ಟ್ ಸಂತೋಷ್ ಕೌಲಗಿ ಹೇಳಿದ್ದಾರೆ.

ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಗಾಂಧಿ ವಿಚಾರ ಬಳಗದ ವತಿಯಿಂದಗಾಂಧಿಯಡೆಗೆ ನಮ್ಮ ನಡಿಗೆವಿಷಯವಾಗಿ ಮೇಲುಕೋಟೆಯಿಂದ ಮಂಡ್ಯದವರೆಗೆ ಮೂರು ದಿನಗಳ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನನಗೆ ದಕ್ಕಿದ ಗಾಂಧಿ ಎಷ್ಟು ಎಂಬುದರ ಬಗ್ಗೆ ವಿಮರ್ಶೆ ಮಾಡಿಕೊಳ್ಳಬೇಕಿರುವ ಕಾಲ ಇದಾಗಿದೆ ಎಂದ ಅವರು, ‘ಇಷ್ಟು ದಿನ ಗಾಂಧಿ ಬಗ್ಗೆ ನಾವು ಮತನಾಡದೇ ಬಹಳ ದೊಡ್ಡ ತಪ್ಪು ಮಾಡಿದ್ದೇವೆ ಎಂಬುದು ಪಾದಯಾತ್ರೆಯಲ್ಲಿ ಅರಿವಿಗೆ ಬಂತುಎಂದು ತಿಳಿಸಿದರು.

ಗಾಂಧಿ ಸಮಾಜದ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾರೆ. ಅವರ ವಿಚಾರಗಳು ಪ್ರಖರವಾಗಿವೆ. ಆದರೆ ಹೊಳಪನ್ನು ನೋಡಲು ಸಿದ್ದವಿಲ್ಲದವರು ಕಸಕಡ್ಡಿ ಹಾಕಿ ಮಸಕು ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಮಗೆ ಗಾಂಧಿ ವಿಚಾರಗಳು ಪ್ರಕಾಶಮಾನವಾಗಿ ಕಾಣುತ್ತಿವೆ ಎಂದರು.

ಪಾದಯಾತ್ರೆಯ ಮೂಲಕ ಮಂಡ್ಯ ಜಿಲ್ಲೆಯಲ್ಲಿ ಗಾಂಧಿಯ ವಿಚಾರಕ್ಕೆ ಹೊಸ ಸಂಚಲನ ಶುರುವಾಗಲಿ. ಇದು ಇಲ್ಲಿಗೆ ಮುಗಿಯುವುದಿಲ್ಲ, ಸತತವಾಗಿ ನಡೆಯಬೇಕಾದ ಕ್ರಿಯೆ, ನಡಿಗೆ ಸಹಜವಾಗಿ ನಡೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ಗಾಂಧಿಯನ್ನು ದುಷ್ಟರು, ಸರಿಯಾದ ಚಿಂತನೆಯಿಲ್ಲದವರು ತೆಗೆದುಕೊಳ್ಳಲು ಬಿಡಬಾರದು. ಏಕೆಂದರೆ ಇಂದು ನಮ್ಮ ದೇಶ ದೇಶ ದೊಡ್ಡ ಕ್ಷೋಭೆಗೆ ಒಳಗಾಗಿದೆ. ಇಡೀ ಪ್ರಪಂಚವೇ ಬಡವರನ್ನು, ಶೋಷಿತರನ್ನು ಪ್ರಪಾತಕ್ಕೆ ತಳ್ಳುತ್ತಿದೆ. ಹಿಂಸಾವಾದಿ ಸರ್ವಾಧಿಕಾರಿಗಳು ಅಧಿಕಾರದ ಚುಕ್ಕಾಣಿ ಹಿಡಿಯುತ್ತಿದ್ದಾರೆ. ಸಂದರ್ಭದಲ್ಲಿ ನಾವು ಗಾಂಧಿಯ ವಿಚಾರಗಳನ್ನು ಮರೆಯದೇ ಮುನ್ನಲೆಗೆ ತರಬೇಕು ಎಂದರು.

ಗಾಂಧಿಯ ಮಾತುಗಳನ್ನು ಮೊದಲು ನಾವೆಲ್ಲರೂ ಪಾಲಿಸಬೇಕು. ಅವರ ವಿಚಾರಗಳನ್ನು ಹೇಳುವುದಕ್ಕಿಂತ ಹೆಚ್ಚಾಗಿ ಪಾಲಿಸಬೇಕಾಗಿದೆ. ಇದಕ್ಕೆ ನಮ್ಮ ಹೃದಯವೇ ಮೌಲ್ಯಮಾಪಕವಾಗಿದೆ‌. ದೇಶಕ್ಕೆ ಆವರಿಸಿರುವ ದೊಡ್ಡ ಕಗ್ಗತ್ತಲೆಯನ್ನು ಹೋಗಲಾಡಿಸಲಿಕ್ಕೆ ಹೃದಯ ಮುಟ್ಟಿ ನೋಡಿಕೊಳ್ಳುತ್ತಲೇ ಗಾಂಧಿಯೆಡೆಗೆ ನಮ್ಮ ನಡಿಗೆ ಮುಂದುವರೆಸಬೇಕು ಎಂದರು.

ಚಿಂತಕರಾದ ಜಗದೀಶ್ ಕೊಪ್ಪರವರು ಮಾತನಾಡಿಗಾಂಧಿ ವಿಚಾರಧಾರೆಯನ್ನು ನಾವಿಂದು ಎದೆಗೆ ಇಳಿಸಿಕೊಳ್ಳಬೇಕಗಿದೆ. ಏಕೆಂದರೆ ಇಂದು ನಾವು ಸ್ವಾರ್ಥಿಗಳಾಗಿದ್ದೇವೆ. ನಮ್ಮೊಳಗಿನ ಬೌದ್ಧಿಕ ದಿವಾಳಿತನತನದಿಂದ ಇಂದು ಗಾಂಧಿಯವರು ನಕಾರತ್ಮಕವಾಗಿ ಬಿಂಬಿಸಲ್ಪಡುತ್ತಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದರು.

ನಮ್ಮ ಅಂತರಂಗದಲ್ಲಿ ಉಂಟಾಗಿರುವ ಸಂಕ್ಷೋಬೆ ಹೋಗಲಾಡಿಸಲು ಗಾಂಧಿ ವಿಚಾರಗಳನ್ನು ಮನನ ಮಾಡಿಕೊಳ್ಳಬೇಕಿದೆ. ನಮ್ಮ ವಯಕ್ತಿಕ ಸ್ವಾರ್ಥಕ್ಕಾಗಿ ನಾವು ಪರಿಸರವನ್ನು ಹಾಳು ಮಾಡಿದ್ದೇವೆ. ಆದರೆ ವಯಕ್ತಿಕ ಹಿತಾಸಕ್ತಿಯಿಂದ ಸಮಾಜ ಉದ್ದಾರ ಆಗುವುದಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಇಂದು ಕಲವು ದಲಿತರು ಗಾಂಧಿಯನ್ನು ಶತ್ರು ರೀತಿಯಲ್ಲಿ ನೋಡುತ್ತಿದ್ದಾರೆ. ಪೂನಾ ಒಪ್ಪಂದ ಬಿಟ್ಟು ಗಾಂಧಿಯನ್ನು ನೋಡಿದರೆ ಗಾಂಧಿಯ ಜಾತಿವಿರೋಧಿ ಮನಸ್ಥಿತಿ ಅರ್ಥವಾಗುತ್ತದೆ ಎಂದರು.

ಸಬರಮತಿ ಆಶ್ರಮದಲ್ಲಿ ಗಾಂಧಿಯವರ ಪತ್ನಿ ಕಸ್ತೂರಬಾ ರವರು ನಿಧನಹೊಂದಿದ್ದಾಗ ಗಾಂಧಿಯೊಡನೆ ಹಲವು ಹೆಣ್ಣುಮಕ್ಕಳು ಚಿತೆಗೆ ಬೆಂಕಿ ಸ್ಪರ್ಶ ಮಾಡಿದರು. ಆಗ ಕಸ್ತೂರಬಾರವರು ಧರಿಸಿದ್ದ ಆಭರಣಗಳನ್ನು ದಲಿತ ಬಾಲಕನಿಗೆ ದಾನ ಮಾಡಲಾಯಿತು ಇದೆಲ್ಲದನ್ನು ನಾವು ನೆನಪಿಸಿಕೊಳ್ಳಬೇಕು ಎಂದರು.

ಗಾಂಧಿಯವರು ಸ್ಥಾಪಿಸಿದ್ದ ಹರಿಜನ ಸೇವಕ ಸಂಘಕ್ಕೆ ಅಂಬೇಡ್ಕರ್ ವಿರೋಧ ವ್ಯಕ್ತಪಡಿಸಿದ್ದರು. ಒಬ್ಬರೂ ದಲಿತರಿಲ್ಲದ ದಲಿತ ಸೇವಕ ಸಂಘ ಇದು ಎಂದು ಟೀಕಿಸಿದ್ದರು. ಆಗ ಗಾಂಧಿಯವರುದಲಿತರ ಸೇವೆಯನ್ನು ದಲಿತೇತರರೆ ಮಾಡಬೇಕು“, ಶೋಷಿತ ದಲಿತರ ಪರವಾಗಿ ಸವರ್ಣೀಯರು ನಿಲ್ಲಬೇಕು ಎಂದು ಗಾಂಧಿ ಪ್ರತಿಪಾದಿಸಿದ್ದರು ಎಂದು ತಿಳಿಸಿದರು.

ಗಾಂಧಿ ತಮ್ಮ ಕೊನೆಗಾಲದಲ್ಲಿ ಅಂತರ್ಜಾತಿ ವಿವಾಹಗಳನ್ನು ಹೊರತುಪಡಿಸಿ ಬೇರೆ ಯಾವ ವಿವಾಹಗಳಿಗೂ ತಾನು ಹೋಗುವುದಿಲ್ಲ ಎಂದ ತೀರ್ಮಾನಿಸಿದ್ದರು. ಕಾಶಿಯ ವಿಶ್ವನಾಥ ದೇವಾಲಯಕ್ಕೆ ಹರಿಜನರಿಗೆ ಪ್ರವೇಶ ಇಲ್ಲದಿದ್ದರೆ ತನಗೂ ಬೇಡವೆಂದು ಘೋಷಿಸಿದ್ದರು.ಉಡುಪಿಯ ಕೃಷ್ಣ ಮಂದಿರದ ಮುಂದೆ ಹೋದರೂ ಸಹ ಇದೇ ಕಾರಣಕ್ಕೆ ದೇವಾಲಯ ಪ್ರವೇಶಿಸಲಿಲ್ಲ ಅಲ್ಲವೇ? ಎಂದು ಜಗದೀಶ್ ಕೊಪ್ಪ ತಿಳಿಸಿದರು.

ಪಾದಯಾತ್ರೆಯಲ್ಲಿ ಭಗಾವಹಿಸಿದ್ದ ಹಲವು ಜನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಹಿರಿಯ ಗಾಂಧಿವಾದಿಗಳಾದ ಹೆಗ್ಗೋಡು ಪ್ರಸನ್ನರವರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...