Homeಮುಖಪುಟಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

ಆಸ್ಪತ್ರೆಯ ಎದುರಲ್ಲೇ ಕುಸಿದು ಬಿದ್ದರೂ 25 ನಿಮಿಷಗಳವರೆಗೂ ಬಿಸಿಲಲ್ಲಿ ಬಳಲಿದ ಆರೋಗ್ಯ ಕಾರ್ಯಕರ್ತ

- Advertisement -
- Advertisement -

ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಕೊರೊನಾ ರೋಗಿಗಳಿಗೆ ಸಹಾಯ ಮಾಡುವ ಆರೋಗ್ಯ ಕಾರ್ಯಕರ್ತರೊಬ್ಬರು ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಆದರೆ 25 ನಿಮಿಷಗಳ ಕಾಲ 44 ಡಿಗ್ರಿ ಸೆಲ್ಸಿಯಸ್ ಶಾಖದ ಬಿಸಿಲಿನಲ್ಲಿ ರಸ್ತೆಯಲ್ಲೇ ಅವರು ಬಿದ್ದದ್ದರೂ ಯಾರು ಸಹಾಯಕ್ಕೆ ಬಂದಿಲ್ಲ ಎಂದು ತಿಳಿದುಬಂದಿದೆ.

ತುರ್ತು ಸೇವೆಯಾದ 108 ಆಂಬ್ಯುಲೆನ್ಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಕಾರ್ಯಕರ್ತ ಹಿರಾಲಾಲ್ ಪ್ರಜಾಪತಿ, ಟಿಬಿ ಆಸ್ಪತ್ರೆಯಿಂದ ಬುಂಡೇಲ್‌ಖಂಡ್ ವೈದ್ಯಕೀಯ ಕಾಲೇಜಿಗೆ (ಬಿಎಂಸಿ) ಕೊರೊನಾ ವೈರಸ್ ಪಾಸಿಟಿವ್ ಆಗಿರುವ ಜನರನ್ನು ಸಾಗಿಸಿದ ನಂತರ ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಕುಸಿದು ಬಿದ್ದರು ಎನ್ನಲಾಗಿದೆ.

ಸ್ಥಳೀಯ ವರದಿಗಳ ಪ್ರಕಾರ, ದೇಹದ ಪೂರ್ತಿ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ್ದ ಪ್ರಜಾಪತಿ ಶಾಖದಿಂದ ಕುದಿಯುತ್ತಿದ್ದು, ಬಿಎಂಸಿ ಬಳಿ ಕುಸಿದುಬಿದ್ದರು. ಆದರೆ ಅವರ ಸಹೋದ್ಯೋಗಿಯಾಗಿರುವ ಆಂಬ್ಯುಲೆನ್ಸ್ ಚಾಲಕ ಅವರನ್ನು ಬಿಎಂಸಿಗೆ ದಾಖಲಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು ಆದರೆ ಅಧಿಕಾರಿಗಳು ನಿರಾಕರಿಸಿದರಿಂದ ಸುಮಾರು ಅರ್ಧ ಘಂಟೆಯವರೆಗೆ ನೆಲದ ಮೇಲೆ ಬಿದ್ದಿದ್ದರು.

ಅಂತಿಮವಾಗಿ, ಅವರನ್ನು ಇತರ ಅರೆವೈದ್ಯಕೀಯ ಸಿಬ್ಬಂದಿಗಳು ತಮ್ಮ ಆಂಬ್ಯುಲೆನ್ಸ್‌ನಲ್ಲಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು, ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಯಿತು. ಪ್ರಸ್ತುತ ಪ್ರಜಾಪತಿ ಚೇತರಿಸಿಕೊಂಡಿದ್ದಾರೆ ಹಾಗೂ ಸ್ಥಿರವಾಗಿದ್ದಾರೆ ಎನ್ನಲಾಗಿದೆ.

ಮಧ್ಯಪ್ರದೇಶದಲ್ಲಿ ಇದುವರೆಗೆ 7,000 ಕೊರೊನಾ ಪ್ರಕರಣಗಳು ವರದಿಯಾಗಿದ್ದು, 313 ಜನರು ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ರಾಜ್ಯದ ಇಂದೋರ್ ನಗರವು ಕೊರೊನಾ ಭಾದಿತ ನಗರಗಳಲ್ಲೇ ದೇಶದ ಅತ್ಯಂತ ಕೆಟ್ಟ ಪ್ರದೇಶಗಳಲ್ಲಿ ಒಂದಾಗಿದೆ. ಅಲ್ಲಿ 3,000 ಪ್ರಕರಣಗಳು ವರದಿಯಾಗಿದ್ದು; 78 ಹೊಸ ಪ್ರಕರಣಗಳು ಬುಧವಾರ ಪತ್ತೆಯಾಗಿವೆ ಎಂದು ಮುಖ್ಯ ವೈದ್ಯಾಧಿಕಾರಿ ಪ್ರವೀಣ್ ಜಾಡಿಯಾ ತಿಳಿಸಿದ್ದಾರೆ.

ನಿನ್ನೆ ಹೊರಡಿಸಿದ ಆದೇಶದಲ್ಲಿ, ಮನೆ ಸಂಪರ್ಕತಡೆಯನ್ನು ಉಲ್ಲಂಘಿಸುವವರಿಗೆ 2 ಸಾವಿರ ರೂ.ಗಳ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಎರಡನೇ ಬಾರಿಗೆ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಲ್ಲಿ ಅವರನ್ನು ಸಾಂಸ್ಥಿಕ ಸಂಪರ್ಕತಡೆಗೆ ಹಾಕಲಾಗುತ್ತದೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ.

ಇದರ ಮಧ್ಯೆ ಮಧ್ಯಪ್ರದೇಶ ಆಡಳಿತವು ಬೆಳೆಗಳ ಮೇಲೆ ದಾಳಿ ಮಾಡುತ್ತಿರುವ ಮಿಡತೆಗಳ ಬೆದರಿಕೆಯನ್ನು ಎದುರಿಸುತ್ತಿದೆ. ಸೆಹೋರ್ ಜಿಲ್ಲೆಯ ಬುಡ್ನಿ ಮತ್ತು ನಸ್ರುಲ್ಲಗಂಜ್ ಪ್ರದೇಶಗಳಲ್ಲಿನ ರೈತರು ಮಿಡತೆಗಳನ್ನು ಓಡಿಸಲು ಕೃಷಿ ಇಲಾಖೆಯ ಸಲಹೆಯಂತೆ ಪಾತ್ರೆಗಳನ್ನು ಹೊಡೆಯುತ್ತಿರುವುದು ಕಂಡುಬಂದಿಂದೆ.

ಕಳೆದ ವಾರ ರಾಜಸ್ಥಾನ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶಕ್ಕೆ ಮಿಡತೆಗಳ ದೊಡ್ಡ ಗುಂಪು ಪ್ರವೇಶಿಸಿದೆ. ಇವುಗಳನ್ನು ಶೀಘ್ರದಲ್ಲೇ ನಿಯಂತ್ರಿಸದಿದ್ದರೆ, ಸುಮಾರು 8,000 ಕೋಟಿ ಮೌಲ್ಯದ ಏಕದಳ ಬೆಳೆಗಳನ್ನು ನಾಶಪಡಿಸಬಹುದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.


ಓದಿ: ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿಗೆ ಏಳು ವರ್ಷಗಳ ಜೈಲು ಶಿಕ್ಷೆ: ಕೇಂದ್ರ ಸರ್ಕಾರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...