Homeಕರ್ನಾಟಕಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

- Advertisement -
- Advertisement -

“ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲದಿದ್ದರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿನ ಕೋಮುದ್ವೇಷ ಬೆಳವಣಿಗೆಗಳನ್ನು ಖಂಡಿಸಿರುವ ಅವರು, ಖಡಕ್‌ ಎಚ್ಚರಿಕೆ ನೀಡಿದ್ದಾರೆ. ‘ಧರ್ಮ ಸಂಘರ್ಷ’ ಹಾಗೂ ನುಗ್ಗಿಕೇರಿ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಆಸೆ. ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

“ಯಾರಾದರೂ ನಮ್ಮ ಸಹಬಾಳ್ವೆಗೆ ಅಡ್ಡಿ ಮಾಡುವಂತಹ ಪ್ರಯತ್ನ ಮಾಡಿದರೆ, ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

“ಈಗಾಗಲೇ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟಿದ್ದಾರೆ. ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾನೂ ಕೂಡ ಕಿವಿಮಾತು ಹೇಳುತ್ತಿದ್ದೇನೆ. ಇಲ್ಲಿಗೆ ಎಲ್ಲವನ್ನೂ ನಿಲ್ಲಿಸಿ, ನಿಮ್ಮ-ನಿಮ್ಮ ಕೆಲಸ ಮಾಡಿ. ಎಲ್ಲರೂ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮತೀಯ ಸಂಘಟನೆಗಳು ಸಂಘರ್ಷವನ್ನು ಉಂಟು ಮಾಡುತ್ತಿರುವ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪನವರು ಇಳಿದ ಬಳಿಕ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿತು. ಬೊಮ್ಮಾಯಿಯವರು ಯಡಿಯೂರಪ್ಪನವರ ಆಪ್ತರಾದ ಕಾರಣ, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಬೊಮ್ಮಾಯಿಯವರು ಸಮಾಜವಾದಿ ಹಿನ್ನೆಲೆಯವರಾಗಿದ್ದು, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಭಾವಿಸಲಾಗಿತ್ತು. ದುರಾದೃಷ್ಟವಶಾತ್‌ ಬೊಮ್ಮಾಯಿಯವರ ಅವಧಿಯಲ್ಲಿ ಹಲವಾರು ಕೋಮುದ್ವೇಷ ಪ್ರಕರಣಗಳು ಘಟಿಸಿವೆ. ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ್ದು ಟೀಕೆಗೆ ಒಳಗಾಗಿದೆ.

ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪರಿಸ್ಥಿತಿ ಇಷ್ಟು ದುಸ್ಥಿತಿಗೆ ಇಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಮೂಡಿಬರುತ್ತಿವೆ. ಈಗ ಯಡಿಯೂರಪ್ಪನವರೇ ಮತೀಯ ಸಂಘಟನೆಗಳಿಗೆ ಕಡಿವಾಣ ಹಾಕುವ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ.


ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾನ್ಯ ಯೆಡಿಯೂರಪ್ಪ ನವರ ಮಾತು ಎಲ್ಲರೂ ಸ್ವಾಗತಿಸ ಬೇಕಾದುದ್ದೆ, ಈ ಮಾತು ಮುಖ್ಯಮಂತ್ರಿಗಳು ಹೇಳಬೇಕಿತ್ತು ಮತ್ತು ಕಠಿಣ ನಿರ್ಧಾರ ತೆಗೆದುಕೊಂಡು ಯಾರೇ ಕೋಮು ದ್ವೇಷ ಕದಡುವ ಪ್ರಯತ್ನ ಪಟ್ಟಿದ್ದಾರೆ ಅವರಿಗೆಲ್ಲ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಬೇಕಿತ್ತು,
    ಮನುಷ್ಯ ಎಂದಿಗೂ ಮನುಷ್ಯತ್ವ ಮರೀಬಾರ್ದು
    ಜೈ ಹಿಂದ್
    ಜೈ ಕರ್ನಾಟಕ

  2. ಅಧಿಕಾರಕ್ಕಾಗಿ ಹಸಿದ ತೋಳದ ಕಾವಲಿನಲ್ಲಿರುವ ಜನತೆಗೆ ಬಿಡುಗಡೆ ಅಷ್ಟು ಸುಲಬದ್ದಲ್ಲ .

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...