Homeಕರ್ನಾಟಕಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

- Advertisement -
- Advertisement -

“ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲದಿದ್ದರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿನ ಕೋಮುದ್ವೇಷ ಬೆಳವಣಿಗೆಗಳನ್ನು ಖಂಡಿಸಿರುವ ಅವರು, ಖಡಕ್‌ ಎಚ್ಚರಿಕೆ ನೀಡಿದ್ದಾರೆ. ‘ಧರ್ಮ ಸಂಘರ್ಷ’ ಹಾಗೂ ನುಗ್ಗಿಕೇರಿ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಆಸೆ. ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

“ಯಾರಾದರೂ ನಮ್ಮ ಸಹಬಾಳ್ವೆಗೆ ಅಡ್ಡಿ ಮಾಡುವಂತಹ ಪ್ರಯತ್ನ ಮಾಡಿದರೆ, ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

“ಈಗಾಗಲೇ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟಿದ್ದಾರೆ. ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾನೂ ಕೂಡ ಕಿವಿಮಾತು ಹೇಳುತ್ತಿದ್ದೇನೆ. ಇಲ್ಲಿಗೆ ಎಲ್ಲವನ್ನೂ ನಿಲ್ಲಿಸಿ, ನಿಮ್ಮ-ನಿಮ್ಮ ಕೆಲಸ ಮಾಡಿ. ಎಲ್ಲರೂ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮತೀಯ ಸಂಘಟನೆಗಳು ಸಂಘರ್ಷವನ್ನು ಉಂಟು ಮಾಡುತ್ತಿರುವ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪನವರು ಇಳಿದ ಬಳಿಕ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿತು. ಬೊಮ್ಮಾಯಿಯವರು ಯಡಿಯೂರಪ್ಪನವರ ಆಪ್ತರಾದ ಕಾರಣ, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಬೊಮ್ಮಾಯಿಯವರು ಸಮಾಜವಾದಿ ಹಿನ್ನೆಲೆಯವರಾಗಿದ್ದು, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಭಾವಿಸಲಾಗಿತ್ತು. ದುರಾದೃಷ್ಟವಶಾತ್‌ ಬೊಮ್ಮಾಯಿಯವರ ಅವಧಿಯಲ್ಲಿ ಹಲವಾರು ಕೋಮುದ್ವೇಷ ಪ್ರಕರಣಗಳು ಘಟಿಸಿವೆ. ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ್ದು ಟೀಕೆಗೆ ಒಳಗಾಗಿದೆ.

ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪರಿಸ್ಥಿತಿ ಇಷ್ಟು ದುಸ್ಥಿತಿಗೆ ಇಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಮೂಡಿಬರುತ್ತಿವೆ. ಈಗ ಯಡಿಯೂರಪ್ಪನವರೇ ಮತೀಯ ಸಂಘಟನೆಗಳಿಗೆ ಕಡಿವಾಣ ಹಾಕುವ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ.


ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾನ್ಯ ಯೆಡಿಯೂರಪ್ಪ ನವರ ಮಾತು ಎಲ್ಲರೂ ಸ್ವಾಗತಿಸ ಬೇಕಾದುದ್ದೆ, ಈ ಮಾತು ಮುಖ್ಯಮಂತ್ರಿಗಳು ಹೇಳಬೇಕಿತ್ತು ಮತ್ತು ಕಠಿಣ ನಿರ್ಧಾರ ತೆಗೆದುಕೊಂಡು ಯಾರೇ ಕೋಮು ದ್ವೇಷ ಕದಡುವ ಪ್ರಯತ್ನ ಪಟ್ಟಿದ್ದಾರೆ ಅವರಿಗೆಲ್ಲ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಬೇಕಿತ್ತು,
    ಮನುಷ್ಯ ಎಂದಿಗೂ ಮನುಷ್ಯತ್ವ ಮರೀಬಾರ್ದು
    ಜೈ ಹಿಂದ್
    ಜೈ ಕರ್ನಾಟಕ

  2. ಅಧಿಕಾರಕ್ಕಾಗಿ ಹಸಿದ ತೋಳದ ಕಾವಲಿನಲ್ಲಿರುವ ಜನತೆಗೆ ಬಿಡುಗಡೆ ಅಷ್ಟು ಸುಲಬದ್ದಲ್ಲ .

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...