Homeಕರ್ನಾಟಕಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

ಎಲ್ಲವನ್ನೂ ಇಲ್ಲಿಗೆ ಬಿಡಿ, ಕೋಮು ಸಾಮರಸ್ಯ ಹಾಳು ಮಾಡಬೇಡಿ: ಬಿಎಸ್‌ವೈ ಖಡಕ್‌ ಎಚ್ಚರಿಕೆ

- Advertisement -
- Advertisement -

“ಎಲ್ಲವನ್ನೂ ಇಲ್ಲಿಗೆ ಬಿಟ್ಟು, ನಿಮ್ಮ ಕೆಲಸ ನೀವು ಮಾಡಿ. ಇಲ್ಲದಿದ್ದರೆ, ಸರ್ಕಾರದಿಂದ ಕಠಿಣ ಕ್ರಮ ಖಂಡಿತ” ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ರಾಜ್ಯದಲ್ಲಿನ ಕೋಮುದ್ವೇಷ ಬೆಳವಣಿಗೆಗಳನ್ನು ಖಂಡಿಸಿರುವ ಅವರು, ಖಡಕ್‌ ಎಚ್ಚರಿಕೆ ನೀಡಿದ್ದಾರೆ. ‘ಧರ್ಮ ಸಂಘರ್ಷ’ ಹಾಗೂ ನುಗ್ಗಿಕೇರಿ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹಿಂದೂ-ಮುಸ್ಲಿಮರು ಒಂದೇ ತಾಯಿ ಮಕ್ಕಳಂತೆ ಸೌಹಾರ್ದತೆಯಿಂದ ಬದುಕಬೇಕೆಂಬುದು ನಮ್ಮ ಆಸೆ. ಅದನ್ನು ಹಾಳು ಮಾಡುವ ಕೆಲಸ ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

“ಯಾರಾದರೂ ನಮ್ಮ ಸಹಬಾಳ್ವೆಗೆ ಅಡ್ಡಿ ಮಾಡುವಂತಹ ಪ್ರಯತ್ನ ಮಾಡಿದರೆ, ಮುಖ್ಯಮಂತ್ರಿಗಳು ಹೇಳಿದಂತೆ ಅಂಥವರ ಮೇಲೆ ಕಾನೂನಿನ ಕ್ರಮ ತೆಗೆದುಕೊಳ್ಳುತ್ತೇವೆ. ಇನ್ನು ಮುಂದೆಯಾದರೂ ಅಹಿತಕರ ಘಟನೆ ನಡೆಯದಂತೆ ಒಟ್ಟಾಗಿ ಬಾಳುವುದಕ್ಕೆ ಅವಕಾಶ ಮಾಡಿಕೊಡಬೇಕು” ಎಂದು ತಿಳಿಸಿದ್ದಾರೆ.

“ಈಗಾಗಲೇ ಮುಖ್ಯಮಂತ್ರಿ ಎಚ್ಚರಿಕೆ ಕೊಟ್ಟಿದ್ದಾರೆ. ಇಂತಹ ಘಟನೆಗಳನ್ನ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ನಾನೂ ಕೂಡ ಕಿವಿಮಾತು ಹೇಳುತ್ತಿದ್ದೇನೆ. ಇಲ್ಲಿಗೆ ಎಲ್ಲವನ್ನೂ ನಿಲ್ಲಿಸಿ, ನಿಮ್ಮ-ನಿಮ್ಮ ಕೆಲಸ ಮಾಡಿ. ಎಲ್ಲರೂ ಗೌರವ, ನೆಮ್ಮದಿಯಿಂದ ಬದುಕಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾದ ಬಳಿಕ ರಾಜ್ಯದಲ್ಲಿ ಮತೀಯ ಸಂಘಟನೆಗಳು ಸಂಘರ್ಷವನ್ನು ಉಂಟು ಮಾಡುತ್ತಿರುವ ಕುರಿತು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪನವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್‌.ಯಡಿಯೂರಪ್ಪನವರು ಇಳಿದ ಬಳಿಕ ಬೊಮ್ಮಾಯಿಯವರಿಗೆ ಮುಖ್ಯಮಂತ್ರಿ ಸ್ಥಾನ ದೊರಕಿತು. ಬೊಮ್ಮಾಯಿಯವರು ಯಡಿಯೂರಪ್ಪನವರ ಆಪ್ತರಾದ ಕಾರಣ, ನಿಜವಾದ ಸಿಎಂ ಯಡಿಯೂರಪ್ಪನವರೇ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಬೊಮ್ಮಾಯಿಯವರು ಸಮಾಜವಾದಿ ಹಿನ್ನೆಲೆಯವರಾಗಿದ್ದು, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ಭಾವಿಸಲಾಗಿತ್ತು. ದುರಾದೃಷ್ಟವಶಾತ್‌ ಬೊಮ್ಮಾಯಿಯವರ ಅವಧಿಯಲ್ಲಿ ಹಲವಾರು ಕೋಮುದ್ವೇಷ ಪ್ರಕರಣಗಳು ಘಟಿಸಿವೆ. ಮುಖ್ಯಮಂತ್ರಿಯವರೇ ಮತೀಯ ಗೂಂಡಾಗಿರಿಯನ್ನು ಸಮರ್ಥಿಸಿದ್ದು ಟೀಕೆಗೆ ಒಳಗಾಗಿದೆ.

ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಪರಿಸ್ಥಿತಿ ಇಷ್ಟು ದುಸ್ಥಿತಿಗೆ ಇಳಿಯುತ್ತಿರಲಿಲ್ಲ ಎಂಬ ಅಭಿಪ್ರಾಯಗಳು ಮೂಡಿಬರುತ್ತಿವೆ. ಈಗ ಯಡಿಯೂರಪ್ಪನವರೇ ಮತೀಯ ಸಂಘಟನೆಗಳಿಗೆ ಕಡಿವಾಣ ಹಾಕುವ ಹೇಳಿಕೆ ನೀಡಿರುವುದು ಭರವಸೆ ಮೂಡಿಸಿದೆ.


ಇದನ್ನೂ ಓದಿರಿ: ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಮಾನ್ಯ ಯೆಡಿಯೂರಪ್ಪ ನವರ ಮಾತು ಎಲ್ಲರೂ ಸ್ವಾಗತಿಸ ಬೇಕಾದುದ್ದೆ, ಈ ಮಾತು ಮುಖ್ಯಮಂತ್ರಿಗಳು ಹೇಳಬೇಕಿತ್ತು ಮತ್ತು ಕಠಿಣ ನಿರ್ಧಾರ ತೆಗೆದುಕೊಂಡು ಯಾರೇ ಕೋಮು ದ್ವೇಷ ಕದಡುವ ಪ್ರಯತ್ನ ಪಟ್ಟಿದ್ದಾರೆ ಅವರಿಗೆಲ್ಲ ದೇಶದ್ರೋಹ ಪ್ರಕರಣ ದಾಖಲಿಸಿ ಶಿಕ್ಷೆ ಕೊಡಬೇಕಿತ್ತು,
    ಮನುಷ್ಯ ಎಂದಿಗೂ ಮನುಷ್ಯತ್ವ ಮರೀಬಾರ್ದು
    ಜೈ ಹಿಂದ್
    ಜೈ ಕರ್ನಾಟಕ

  2. ಅಧಿಕಾರಕ್ಕಾಗಿ ಹಸಿದ ತೋಳದ ಕಾವಲಿನಲ್ಲಿರುವ ಜನತೆಗೆ ಬಿಡುಗಡೆ ಅಷ್ಟು ಸುಲಬದ್ದಲ್ಲ .

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...