Homeಮುಖಪುಟಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಒಕ್ಕೂಟ ಸರ್ಕಾರ ಹಲವಾರು ಬಾರಿ ಪ್ರತಿಭಟನಾ ನಿರತ ರೈತರಿಗೆ ಮನವಿ ಮಾಡಿದೆ. ಗುರುವಾರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮತ್ತೆ ರೈತರಿಗೆ ಮನವಿ ಮಾಡಿದ್ದಾರೆ. ದಿನಗಳ ಹಿಂದೆಯಷ್ಟೇ ನವೀಕರಣಗೊಂಡಿದ್ದ ಮೋದಿ ಸರ್ಕಾರದ ಹೊಸ ಸಚಿವ ಸಂಪುಟದಲ್ಲಿ, ಕೃಷಿ ಕ್ಷೇತ್ರಕ್ಕಾಗಿ ತೆಗೆದುಕೊಂಡ ಕೆಲವು ಯೋಜನೆಗಳನ್ನು ಸೂಚಿಸುತ್ತಾ ಈ ಬಾರಿ ರೈತರೊಂದಿಗೆ ವಿನಂತಿ ಮಾಡಲಾಗಿದೆ.

ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ(ಎಪಿಎಂಸಿ) ಗೆ 1 ಲಕ್ಷ ಕೋಟಿ ರೂ. ಗಳ ನಿಧಿಯನ್ನು ಬಳಸಲು ಅನುಮತಿ ನೀಡಲಾಗುವುದು ಎಂದು ಸಚಿವ ನರೇಂದ್ರ ತೋಮರ್‌‌ ಸಚಿವ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

“ಸರ್ಕಾರ ಏನೇ ಘೋಷಿಸಿದರೂ ಅವುಗಳನ್ನು ಕಾರ್ಯಗತಗೊಳಿಸುವ ಇಚ್ಛಾಶಕ್ತಿ ಇದೆ. ಈ ವರ್ಷದ ಬಜೆಟ್‌ನಲ್ಲಿ ಕೃಷಿ ಮಂಡಿಗಳನ್ನು ಮುಚ್ಚಲಾಗುವುದಿಲ್ಲ ಎಂದು ಘೋಷಿಸಲಾಯಿತು. ರೈತ ಮೂಲಸೌಕರ್ಯ ನಿಧಿಗೆ ಆತ್ಮನಿರ್ಭರ ಭಾರತ ಅಡಿಯಲ್ಲಿ ಹಂಚಿಕೆಯಾದ 1 ಲಕ್ಷ ಕೋಟಿ ರೂಗಳ ನಿಧಿಯನ್ನು ಬಳಸಲು ಎಪಿಎಂಸಿಗೆ ಅನುಮತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಇಂದಿನ ಕ್ಯಾಬಿನೆಟ್ ಸಭೆಯಲ್ಲಿ, ಆ ಘೋಷಣೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಎಲ್ಲಾ ರಾಜ್ಯ-ಕೇಂದ್ರ ಸಹಕಾರ ಸಂಘಗಳು, ಒಕ್ಕೂಟಗಳು ಮತ್ತು ಸ್ವಾಯತ್ತ ಒಕ್ಕೂಟಗಳು ಈ ನಿಧಿಯನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ಮಾತುಕತೆಗಳ ಕುರಿತು ಮಾತನಾಡಿ ಸಚಿವ, “ಕಾನೂನುಗಳನ್ನು ರದ್ದುಪಡಿಸುವುದನ್ನು ಹೊರತುಪಡಿಸಿ ಯಾವುದೇ ವಿಷಯದ ಬಗ್ಗೆ ಮಾತನಾಡಲು ನಾವು ಸಿದ್ಧರಿದ್ದೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೇನೆ. ರೈತರ ಬೇಡಿಕೆಗಳ ಕುರಿತು ಸರ್ಕಾರ ಯಾವಾಗಲೂ ಸೂಕ್ಷ್ಮತೆಯಿಂದ ಇರುತ್ತದೆ. ಪ್ರಧಾನಿ ಮೋದಿ ಸರ್ಕಾರವು ರೈತರ ಕುರಿತು ಹೆಚ್ಚಿನ ಗೌರವವನ್ನು ಹೊಂದಿದೆ. ನಮ್ಮ ಸರ್ಕಾರದ ಅಡಿಯಲ್ಲಿ ರೈತರು ಉದ್ದಾರ ಹೊಂದಬೇಕೆಂದು ನಾವು ಬಯಸುತ್ತೇವೆ. ಅದಕ್ಕಾಗಿಯೆ ಮೂರು ಕಾನೂನುಗಳನ್ನು ಪರಿಚಯಿಸಲಾಗಿದೆ. ಎಪಿಎಂಸಿಗಳನ್ನು ಬಲಪಡಿಸಲು ನಾವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ರೈತ ಸಂಘವು ಈಗ ಚಿಂತಿಸಬೇಕು” ಎಂದು ಅವರು ಹೇಳಿದ್ದಾರೆ.

“ಪ್ರತಿಭಟನೆ ಪ್ರಾರಂಭವಾದಾಗಿನಿಂದ, ನಾವು ಎಂಎಸ್‌ಪಿಯಲ್ಲಿ ಏನು ಮಾಡುತ್ತಿದ್ದೇವೆಂದು ನೀವು ನೋಡುತ್ತಿದ್ದೀರಿ. ಪ್ರತಿಭಟನೆಯ ಮುಂಚೂಣಿಯಲ್ಲಿರುವ ಆ ಪ್ರದೇಶಗಳ ರೈತರು ನಮ್ಮ ಎಂಎಸ್‌ಪಿ ಯೋಜನೆಯ ಗರಿಷ್ಠ ಲಾಭವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಮಾತುಕತೆಗಳನ್ನು ಪುನರಾರಂಭಿಸಲು ನಾನು ಮತ್ತೆ ರೈತ ಸಂಘಗಳ ಮುಖಂಡರನ್ನು ಒತ್ತಾಯಿಸುತ್ತಿದ್ದೇನೆ” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...