Homeಮುಖಪುಟಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

ಕೃಷಿ ಕಾನೂನು ರದ್ದತಿ ಬಿಟ್ಟು ಬೇರೇನಾದರೂ ಕೇಳಿ: ರೈತರೊಂದಿಗೆ ವಿನಂತಿಸಿದ ಒಕ್ಕೂಟ ಸರ್ಕಾರ

- Advertisement -
- Advertisement -

ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಕೊನೆಗೊಳಿಸಬೇಕೆಂದು ಒಕ್ಕೂಟ ಸರ್ಕಾರ ಹಲವಾರು ಬಾರಿ ಪ್ರತಿಭಟನಾ ನಿರತ ರೈತರಿಗೆ ಮನವಿ ಮಾಡಿದೆ. ಗುರುವಾರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರತಿಭಟನೆಯನ್ನು ನಿಲ್ಲಿಸುವಂತೆ ಮತ್ತೆ ರೈತರಿಗೆ ಮನವಿ ಮಾಡಿದ್ದಾರೆ. ದಿನಗಳ ಹಿಂದೆಯಷ್ಟೇ ನವೀಕರಣಗೊಂಡಿದ್ದ ಮೋದಿ ಸರ್ಕಾರದ ಹೊಸ ಸಚಿವ ಸಂಪುಟದಲ್ಲಿ, ಕೃಷಿ ಕ್ಷೇತ್ರಕ್ಕಾಗಿ ತೆಗೆದುಕೊಂಡ ಕೆಲವು ಯೋಜನೆಗಳನ್ನು ಸೂಚಿಸುತ್ತಾ ಈ ಬಾರಿ ರೈತರೊಂದಿಗೆ ವಿನಂತಿ ಮಾಡಲಾಗಿದೆ.

ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ(ಎಪಿಎಂಸಿ) ಗೆ 1 ಲಕ್ಷ ಕೋಟಿ ರೂ. ಗಳ ನಿಧಿಯನ್ನು ಬಳಸಲು ಅನುಮತಿ ನೀಡಲಾಗುವುದು ಎಂದು ಸಚಿವ ನರೇಂದ್ರ ತೋಮರ್‌‌ ಸಚಿವ ಸಂಪುಟದ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

“ಸರ್ಕಾರ ಏನೇ ಘೋಷಿಸಿದರೂ ಅವುಗಳನ್ನು ಕಾರ್ಯಗತಗೊಳಿಸುವ ಇಚ್ಛಾಶಕ್ತಿ ಇದೆ. ಈ ವರ್ಷದ ಬಜೆಟ್‌ನಲ್ಲಿ ಕೃಷಿ ಮಂಡಿಗಳನ್ನು ಮುಚ್ಚಲಾಗುವುದಿಲ್ಲ ಎಂದು ಘೋಷಿಸಲಾಯಿತು. ರೈತ ಮೂಲಸೌಕರ್ಯ ನಿಧಿಗೆ ಆತ್ಮನಿರ್ಭರ ಭಾರತ ಅಡಿಯಲ್ಲಿ ಹಂಚಿಕೆಯಾದ 1 ಲಕ್ಷ ಕೋಟಿ ರೂಗಳ ನಿಧಿಯನ್ನು ಬಳಸಲು ಎಪಿಎಂಸಿಗೆ ಅನುಮತಿ ನೀಡಲಾಗುವುದು ಎಂದು ಘೋಷಿಸಲಾಗಿದೆ. ಇಂದಿನ ಕ್ಯಾಬಿನೆಟ್ ಸಭೆಯಲ್ಲಿ, ಆ ಘೋಷಣೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಎಲ್ಲಾ ರಾಜ್ಯ-ಕೇಂದ್ರ ಸಹಕಾರ ಸಂಘಗಳು, ಒಕ್ಕೂಟಗಳು ಮತ್ತು ಸ್ವಾಯತ್ತ ಒಕ್ಕೂಟಗಳು ಈ ನಿಧಿಯನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಒಕ್ಕೂಟ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ಮಾತುಕತೆಗಳ ಕುರಿತು ಮಾತನಾಡಿ ಸಚಿವ, “ಕಾನೂನುಗಳನ್ನು ರದ್ದುಪಡಿಸುವುದನ್ನು ಹೊರತುಪಡಿಸಿ ಯಾವುದೇ ವಿಷಯದ ಬಗ್ಗೆ ಮಾತನಾಡಲು ನಾವು ಸಿದ್ಧರಿದ್ದೇವೆ ಎಂದು ನಾನು ಹಲವಾರು ಬಾರಿ ಹೇಳಿದ್ದೇನೆ. ರೈತರ ಬೇಡಿಕೆಗಳ ಕುರಿತು ಸರ್ಕಾರ ಯಾವಾಗಲೂ ಸೂಕ್ಷ್ಮತೆಯಿಂದ ಇರುತ್ತದೆ. ಪ್ರಧಾನಿ ಮೋದಿ ಸರ್ಕಾರವು ರೈತರ ಕುರಿತು ಹೆಚ್ಚಿನ ಗೌರವವನ್ನು ಹೊಂದಿದೆ. ನಮ್ಮ ಸರ್ಕಾರದ ಅಡಿಯಲ್ಲಿ ರೈತರು ಉದ್ದಾರ ಹೊಂದಬೇಕೆಂದು ನಾವು ಬಯಸುತ್ತೇವೆ. ಅದಕ್ಕಾಗಿಯೆ ಮೂರು ಕಾನೂನುಗಳನ್ನು ಪರಿಚಯಿಸಲಾಗಿದೆ. ಎಪಿಎಂಸಿಗಳನ್ನು ಬಲಪಡಿಸಲು ನಾವು ತೆಗೆದುಕೊಳ್ಳುತ್ತಿರುವ ಕ್ರಮಗಳ ಬಗ್ಗೆ ರೈತ ಸಂಘವು ಈಗ ಚಿಂತಿಸಬೇಕು” ಎಂದು ಅವರು ಹೇಳಿದ್ದಾರೆ.

“ಪ್ರತಿಭಟನೆ ಪ್ರಾರಂಭವಾದಾಗಿನಿಂದ, ನಾವು ಎಂಎಸ್‌ಪಿಯಲ್ಲಿ ಏನು ಮಾಡುತ್ತಿದ್ದೇವೆಂದು ನೀವು ನೋಡುತ್ತಿದ್ದೀರಿ. ಪ್ರತಿಭಟನೆಯ ಮುಂಚೂಣಿಯಲ್ಲಿರುವ ಆ ಪ್ರದೇಶಗಳ ರೈತರು ನಮ್ಮ ಎಂಎಸ್‌ಪಿ ಯೋಜನೆಯ ಗರಿಷ್ಠ ಲಾಭವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಮಾತುಕತೆಗಳನ್ನು ಪುನರಾರಂಭಿಸಲು ನಾನು ಮತ್ತೆ ರೈತ ಸಂಘಗಳ ಮುಖಂಡರನ್ನು ಒತ್ತಾಯಿಸುತ್ತಿದ್ದೇನೆ” ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ: ಯುಪಿ: ಚುನಾವಣೆಗೆ ನಾಮಪತ್ರ ಸಲ್ಲಿಸಲು ತೆರಳುತ್ತಿದ್ದ ಮಹಿಳೆಯ ಸೀರೆ ಎಳೆದ ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...