Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...