Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...