Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...