Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...