Homeಮುಖಪುಟ’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

’ಟ್ವಿಟರ್‌ ಬಿಡಿ, ಅದು ಉತ್ತಮ ಸ್ಥಳವಾಗಿಯೆ ಉಳಿಯಲಿ’- ‘ಕೂ’ ಸೇರುತ್ತಿರುವ ಬಿಜೆಪಿಗರ ಕಾಲೆಳೆದ ನೆಟ್ಟಿಗರು

- Advertisement -
- Advertisement -

ತಾನು ನಿರ್ದೇಶಿಸಿರುವ ಸಾವಿರಾರು ಖಾತೆಯನ್ನು ತಡೆಹಿಡಿಯದೆ ಇರುವುದರಿಂದ ಕೇಂದ್ರ ಸರ್ಕಾರವು ಟ್ವಿಟರ್ ವಿರುದ್ದ ತಿರುಗಿ ಬಿದ್ದಿದೆ. ಈ ಹಿನ್ನಲೆಯಲ್ಲಿ ಟ್ವಿಟರ್‌ ಮಾದರಿಯ ಸಾಮಾಜಿಕ ಜಾಲತಾಣವಾದ ‘ಕೂ’ ಅಪ್ಲಿಕೇಷನನ್ನು ಬಳಸುವಂತೆ ಕೇಂದ್ರ ಸರ್ಕಾರವು ಕೇಳಿಕೊಂಡಿದೆ. ಹೊಸ ಅಪ್ಲಿಕೇಷನ್‌ ಅನ್ನು ಬಿಜೆಪಿ ಹಾಗು ಅದರ ಬೆಂಬಲಿಗರು ಹೆಚ್ಚಾಗಿ ಬೆಂಬಲಿಸುತ್ತಿದ್ದು, ಅದಕ್ಕಾಗಿ ಹಲವಾರು ಜನರು ಟ್ವಿಟ್ಟರ್‌‌ನಲ್ಲಿ ವ್ಯಂಗ್ಯವಾಡಿದ್ದಾರೆ.

” ‘ಕೂ’ ತೆರಳುವವರು ಬೇಗ ತೆರಳಿದರೆ ಟ್ವಿಟರ್‌ ಹೆಚ್ಚು ಒಳ್ಳೆಯ ಸ್ಥಳವಾಗಲಿದೆ” ಎಂದು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಬಿಜೆಪಿ ಬೆಂಬಲಿಗರನ್ನು ಉದ್ದೇಶಿಸಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬಿಜೆಪಿಯು ಪ್ರಬಲ ಐಟಿ ಸೆಲ್‌ ತಂಡವನ್ನು ಹೊಂದಿದ್ದು ತಮ್ಮ ಪರವಾಗಿ ಹಲವಾರು ಟ್ರೆಂಡ್‌ಗಳನ್ನು ಸೃಷ್ಟಿ ಮಾಡುತ್ತದೆ ಹಾಗೂ ಹಲವು ನಕಲಿ ಖಾತೆಗಳ ಮೂಲಕ ತನ್ನ ಪ್ರೊಪಗಾಂಡವನ್ನು ಹರಡುತ್ತಿದೆ ಎಂಬ ಆರೋಪಗಳಿವೆ. ಇತ್ತೀಚೆಗೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಪರವಾಗಿ ಬಿಜೆಪಿಯು 85 ಸಾವಿರ ನಕಲಿ ಖಾತೆಯನ್ನು ಸೃಷ್ಟಿ ಮಾಡಿತ್ತು ಎಂದು ಮುಂಬೈ ಪೊಲೀಸರು ಆರೋಪಿಸಿದ್ದರು.

ಇದನ್ನೂ ಓದಿ: ‘ಕೂ’ ಆಪ್ ಸುರಕ್ಷಿತವೆ? ಪ್ರಶ್ನೆಗೆ ’ರಾಷ್ಟ್ರೀಯತೆ’ ಹೆಸರು ಹೇಳಿ ತಪ್ಪಿಸಿಕೊಂಡ ’ಕೂ’ ಸಂಸ್ಥಾಪಕ!

ಸಾಮಾಜಿಕ ಕಾರ್ಯಕರ್ತ ಶ್ರೀವತ್ಸ ಅವರು, “KOO ಗೆ ಚೀನಾ ಹಣ ಹೂಡಿಕೆ ಮಾಡಿದೆ ಮತ್ತು ಅದನ್ನು ಅಲ್ಲಿಯೆ ನೋಂದಾಯಿಸಲಾಗಿದೆ. ರಾಮ್‌ದೇವ್‌ ತಮ್ಮ ಪತಂಜಲಿ ಜೇನಿಗೆ ಚೀನೀ ಸಕ್ಕರೆ ಪಾಕವನ್ನು ಸೇರಿಸುತ್ತಾರೆ. ಜಯ್ ಶಾ ಬಿಸಿಸಿಐನಲ್ಲಿ ಚೀನೀ ಹಣವನ್ನು ತೆಗೆದುಕೊಳ್ಳುತ್ತಾರೆ. ಅರ್ನಾಬ್ ಅವರ ರಿಪಬ್ಲಿಕ್ ಟಿವಿ ಚೀನೀ ಕಂಪನಿಗಳಿಂದ ಜಾಹೀರಾತುಗಳನ್ನು ತೆಗೆದುಕೊಳ್ಳುತ್ತದೆ, ಇವರೆಲ್ಲರೂ ‘ರಾಷ್ಟ್ರೀಯವಾದಿಗಳು’. ಆದರೆ ನೀವು ಕ್ಯಾಮ್‌ಸ್ಕಾನರ್ ಅಪ್ಲಿಕೇಶನ್ ಬಳಸುತ್ತಿದ್ದರೆ ಅಥವಾ PUBG ವಿಡಿಯೋ ಗೇಮ್ ಆಡಿದರೆ ‘ದೇಶ ವಿರೋಧಿ’ ಆಗಿರುತ್ತೀರಿ” ಎಂದು ಬಿಜೆಪಿಯನ್ನು ಹಾಗೂ ಬಿಜೆಪಿ ಬೆಂಬಲಿಗರನ್ನು ಕುಕ್ಕಿದ್ದಾರೆ.

ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಕೂ ಆಪ್‌ನಿಂದ ಬಳಕೆದಾರರ ಮಾಹಿತಿ ಸೋರಿಕೆಯಾಗುವ ಬಗ್ಗೆ ವ್ಯಂಗ್ಯವಾಗಿ ಬಿಜೆಪಿ ಬೆಂಬಲಿಗರನ್ನು ಕಾಲೆಳೆದಿದ್ದಾರೆ.

ಇದನ್ನೂ ಓದಿ: ನಿಜಕ್ಕೂ ’ಕೂ’ ಸುರಕ್ಷಿತವೆ? ಸಾಮಾಜಿಕ ಜಾಲತಾಣಗಳ ಭದ್ರತಾ ಸಂಶೋಧಕರು ಹೇಳುತ್ತಿರುವುದೇನು?

ಪರಿಸರ ಹೋರಾಟಗಾರ್ತಿ ಲಿಸಿಪ್ರಿಯ ಅವರು, “ಕೂ ಅಮೇರಿಕಾದಲ್ಲಿ ಹುಟ್ಟಿದ ಆಪ್ ಆಗಿದೆ. ಚೀನಾದಲ್ಲಿ ರಿಜಿಸ್ಟರ್‌ ಆಗಿದೆ. ಹಾಗಾದರೆ ನಿಜವಾಗಿಯು ಇದು ಆತ್ಮನಿರ್ಭರ್‌ ಭಾರತ ಅಲ್ಲವೆ” ಎಂದು ಪ್ರಶ್ನಿಸಿದ್ದಾರೆ.

ಕೂ ಆಪ್‌ನಲ್ಲಿ ನಾಲ್ಕನೇ ಮೂರರಷ್ಟು ಪಾಲನ್ನು ಇನ್ಪೋಸಿಸ್ ಮಾಜಿ ನಿರ್ದೇಶಕ, ಬಿಜೆಪಿ ಬೆಂಬಲಿಗ ಉದ್ಯಮಿ ಮೋಹನ್ ದಾಸ್ ಪೈ ಹೊಂದಿದ್ದಾರೆ. ಉಳಿದಂತೆ ಚೀನಾದ ಕಂಪೆನಿ ಕೂಡಾ ಇದರಲ್ಲಿ ಹೂಡಿಕೆಯನ್ನು ಹೊಂದಿದೆ.

ಇದನ್ನೂ ಓದಿ: ಅಭಿವ್ಯಕ್ತಿ ಸ್ವಾತಂತ್ಯ್ರ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಸದಾ ಬದ್ಧ: ಟ್ವಿಟರ್‌ ಬೆಂಬಲಕ್ಕೆ ಅಮೆರಿಕ

ಅಷ್ಟೇ ಅಲ್ಲದೆ ಈ ಆಪ್‌ ಬಗ್ಗೆ ಹಲವಾರು ಅಘಾತಕಾರಿ ಮಾಹಿತಿಗಳು ಹೊರಬಿದ್ದಿದ್ದು, ಆಪ್‌ ಸುರಕ್ಷಿತ ಅಲ್ಲ ಎಂದು ಹೇಳಿದ್ದಾರೆ. ಟ್ವಿಟರ್‌ನಲ್ಲಿ ಎಲಿಯಟ್ ಆಂಡರ್ಸನ್ ಎಂದು ಜನಪ್ರಿಯವಾಗಿರುವ ಫ್ರೆಂಚ್ ಸೈಬರ್‌ ಸೆಕ್ಯುರಿಟಿ ಸಂಶೋಧಕ ರಾಬರ್ಟ್ ಬ್ಯಾಪ್ಟಿಸ್ಟ್, ’ಕೂ’ ಅಪ್ಲಿಕೇಷನ್‌ನಲ್ಲಿ ಬಳಕೆದಾರರ ಮಾಹಿತಿ ಸೋರಿಕೆಯಾಗುತ್ತದೆ ಎಂದು ಕಂಡು ಹಿಡಿದಿದ್ದಾರೆ. ಬ್ಯಾಪ್ಟಿಸ್ಟ್ ಈ ಹಿಂದೆ ಆಧಾರ್ ವ್ಯವಸ್ಥೆಯಲ್ಲಿನ ಹಲವಾರು ದೋಷಗಳನ್ನು ಎತ್ತಿ ತೋರಿಸಿದ್ದು, ಇದರ ನಂತರ ಅವರು ಜನಪ್ರಿಯರಾಗಿದ್ದರು.

ಬ್ಯಾಪ್ಟಿಸ್ಟ್ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ‘ಕೂ’ ಸಂಸ್ಥಾಪಕ ಅಪ್ರಮೇಯ, “ಕೂ ಪ್ರೋಫೈಲ್‌ನಲ್ಲಿ ಬಳಕೆದಾರರು ತಾವಾಗಿಯೆ ಈ ಮಾಹಿತಿಯನ್ನು ಬಹಿರಂಗ ಪಡಿಸಿದರಷ್ಟೇ ಅದು ಬಹಿರಂಗವಾಗುತ್ತದೆ” ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಬ್ಯಾಷ್ಟಿಸ್ಟ್, ಸೋನಾಲ್ ಗೋಯಲ್ ಎಂಬ ಐಎಎಸ್ ಅಧಿಕಾರಿಯ ‘ಕೂ’ ಫ್ರೋಫೈಲ್‌ ಒಂದರ ಸ್ಕ್ರೀನ್ ಶಾರ್ಟ್ ಹಾಕಿ ಉತ್ತರಿಸಿದ್ದಾರೆ. ಅದರಲ್ಲಿ “ಮೊದಲಿಗೆ ಕಂಡು ಹಿಡಿದ ಫ್ರೋಫೈಲ್ ಇದು.  ಈ ಪ್ರೋಫೈಲ್‌‌ನಲ್ಲಿ ಇವರು ಯಾವುದೆ ಹುಟ್ಟಿದ ದಿನಾಂಕ, ಅವರ ಲಿಂಗ, ಅವರ ವೈವಾಹಿಕ ಸ್ಥಿತಿಯ ಬಗ್ಗೆ ಬಹಿರಂಗಪಡಿಸಿದ್ದಾರೆಯೆ ಎಂದು” ಪ್ರಶ್ನಿಸಿದ್ದಾರೆ. ಆದರೆ ಅಪ್ರಮೇಯ ಅವರು ರಾಷ್ಟ್ರೀಯತೆಯ ಹೆಸರು ಹೇಳಿ ಪ್ರಶ್ನೆಯಿಂದ ತಪ್ಪಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...