Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...