Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...