Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...