Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...