Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....