Homeಮುಖಪುಟವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ಈ ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

- Advertisement -
- Advertisement -

ವಾಟ್ಸಾಪ್ ತನ್ನ ಗೌಪ್ಯತಾ ನಿಯಮಗಳನ್ನು ಅಪ್‌ಡೇಟ್‌ ಮಾಡಿದ್ದು, ಬಳಕೆದಾರರ ಸಂದೇಶಗಳನ್ನು ಓದುವ ಮತ್ತು ಡೇಟಾ ಸಂಗ್ರಹಿಸುವುದಾಗಿ ಘೋಷಿಸಿಕೊಂಡಿದೆ. ಅಲ್ಲದೆ ಬಳಕೆದಾರರ ಡೇಟಾವನ್ನು ಫೇಸ್‌ಬುಕ್ ಸೇರಿದಂತೆ ಇತರ ಕಂಪನಿಗಳಿಗೆ ಮಾರುವುದಾಗಿ ಹೇಳಿದ್ದು ಎಲ್ಲರೂ ಈ ಷರತ್ತಿಗೆ ಒಪ್ಪಲೇಬೇಕಾಗಿದೆ. ಈ ಹಿನ್ನೆಲೆಯಲ್ಲಿ ವಾಟ್ಸಾಪ್ ತ್ಯಜಿಸಿ, ಸಿಗ್ನಲ್ ಬಳಸಿ ಎಂಬ ಘೋಷಣೆ ಜನಪ್ರಿಯವಾಗಿದೆ. ಈ ಸಿಗ್ನಲ್ ಎಂದರೇನು? ಹೇಗೆ ಕೆಲಸ ಮಾಡುತ್ತದೆ ಎಂಬುದರ ವಿವರ ಇಲ್ಲಿದೆ.

ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.

ಸಿಗ್ನಲ್ ಯಾರದು?

ನಿಮಗೆ ಗೊತ್ತಿರುವಂತೆ ವಾಟ್ಸಾಪ್‌ ಅನ್ನು ಫೇಸ್‌ಬುಕ್ ಕೊಂಡುಕೊಂಡಿದೆ. ಸಿಗ್ನಲ್ ಮೆಸೇಜಿಂಗ್ ಅಪ್ಲಿಕೇಶನ್ ಆಗಿದೆ, ಇದು ಐಫೋನ್, ಐಪ್ಯಾಡ್, ಆಂಡ್ರಾಯ್ಡ್, ವಿಂಡೋಸ್, ಮ್ಯಾಕ್ ಮತ್ತು ಲಿನಕ್ಸ್‌ಗಳಲ್ಲಿ ಲಭ್ಯವಿದೆ. ಈ ಅಪ್ಲಿಕೇಶನ್ ಅನ್ನು ಲಾಭರಹಿತ ಕಂಪನಿಗಳಾದ ಸಿಗ್ನಲ್ ಫೌಂಡೇಶನ್ ಮತ್ತು ಸಿಗ್ನಲ್ ಮೆಸೆಂಜರ್ ಎಲ್ಎಲ್ ಸಿ ಅಭಿವೃದ್ಧಿಪಡಿಸಿವೆ.  ಈ ಅಪ್ಲಿಕೇಶನ್ ಅನ್ನು ಅಮೆರಿಕದ ಕ್ರಿಪ್ಟೋಗ್ರಾಫರ್ ಮತ್ತು ಪ್ರಸ್ತುತ ಸಿಗ್ನಲ್ ಮೆಸೆಂಜರ್ ಸಿಇಒ ಮೋಕ್ಸಿ ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ.

ಸಿಗ್ನಲ್ ಫೌಂಡೇಶನ್ ಅನ್ನು ವಾಟ್ಸಾಪ್ ಸಹ-ಸಂಸ್ಥಾಪಕ ಬ್ರಿಯಾನ್ ಆಕ್ಟನ್ ಮತ್ತು ಮಾರ್ಲಿನ್ಸ್‌ಪೈಕ್ ರಚಿಸಿದ್ದಾರೆ. 2017 ರಲ್ಲಿ ವಾಟ್ಸಾಪ್ ಅನ್ನು ತೊರೆದ ಬ್ರಿಯಾನ್ ಆಕ್ಟನ್, ಸಿಗ್ನಲ್ ಆಪ್‌ಗಾಗಿ ಸುಮಾರು 50 ಮಿಲಿಯನ್ ಹಣ ಹಾಕಿದ್ದಾರೆ.

ಸಿಗ್ನಲ್ ಬಳಸಲು ಹಣ ಪಾವತಿಸಬೇಕೇ?

ಸಿಗ್ನಲ್ ಬಳಕೆ ಸಂಪೂರ್ಣ ಉಚಿತವಾಗಿದೆ. ಇತರ ಮೆಸೇಜಿಂಗ್ ಅಪ್ಲಿಕೇಶನ್‌ಗಳ ರೀತಿ ಸಿಗ್ನಲ್ ನಲ್ಲಿ ಬಳಕೆದಾರರಿಗೆ ಸಂದೇಶಗಳನ್ನು ಕಳುಹಿಸಲು, ತಮ್ಮ ಸ್ನೇಹಿತರೊಂದಿಗೆ ಆಡಿಯೋ ಮತ್ತು ವಿಡಿಯೋ ಕರೆಗಳನ್ನು ಮಾಡಲು, ಫೋಟೋಗಳು, ವೀಡಿಯೊಗಳು ಮತ್ತು ಲಿಂಕ್‌ಗಳನ್ನು ಹಂಚಿಕೊಳ್ಳಲು ಅನುಮತಿಸುತ್ತದೆ. ಇದು ಇತ್ತೀಚೆಗೆ ಡಿಸೆಂಬರ್ 2020 ರಲ್ಲಿ ಗ್ರೂಪ್ ವಿಡಿಯೋ ಕಾಲಿಂಗ್ ಆಯ್ಕೆಯನ್ನು ಪರಿಚಯಿಸಿದೆ. ಸಿಗ್ನಲ್‌ನಲ್ಲಿ ಗುಂಪುಗಳನ್ನು ಸಹ ರಚಿಸಬಹುದು. ಒಂದು ಗುಂಪು 150 ಸದಸ್ಯರಿಗೆ ಸೀಮಿತವಾಗಿದೆ.

ನಿಮಗೆಲ್ಲಾ ತಿಳಿದ ಹಾಗೆ ವಾಟ್ಸಾಪ್‌ನಲ್ಲಿ ಗುಂಪು ರಚಿಸಿದರೆ ನಿಮ್ಮ ಕಾಂಟಾಕ್ಟ್ ಲಿಸ್ಟ್‌ನಲ್ಲಿರುವ ಯಾರನ್ನು ಬೇಕಾದರೂ ಸೇರಿಸಬಹುದು (ಕೆಲವರು ಹೀಗೆ ಸೇರಿಸದಂತೆ ಸೆಟ್ಟಿಂಗ್ ಬದಲಿಸಿರುತ್ತಾರೆ). ಆದರೆ ಸಿಗ್ನಲ್‌ ನಲ್ಲಿ ಹೀಗೆ ಮಾಡಲು ಸಾಧ್ಯವಿಲ್ಲ. ಮೊದಲು ಗ್ರೂಪ್‌ಗೆ ನಿಮ್ಮನ್ನು ಸೇರಿಸಲಾಗುತ್ತದೆ ಎಂದು ಇನ್ವೈಟ್ ಕಳಿಸಲಾಗುತ್ತದೆ. ಅದನ್ನು ಸ್ವೀಕರಿಸಿದರೆ ಮಾತ್ರ ಗ್ರೂಪ್‌ಗೆ ಸೇರಿಸಲಾಗುತ್ತದೆ.

ಸಂದೇಶಗಳಿಗೆ ಪ್ರತ್ಯೇಕವಾಗಿ ಪ್ರತ್ಯುತ್ತರಿಸಲು, ನಿರ್ದಿಷ್ಟ ಸಂದೇಶಕ್ಕೆ ಎಮೋಜಿ ಆಧಾರಿತ ಪ್ರತಿಕ್ರಿಯೆಗಳನ್ನು ಕಳುಹಿಸಲು ಮತ್ತು ‘ಎಲ್ಲರಿಗೂ ಅಳಿಸು’ ಆಯ್ಕೆಯನ್ನು ಆರಿಸುವ ಮೂಲಕ ಚಾಟ್‌ನಿಂದ ನಿರ್ದಿಷ್ಟ ಸಂದೇಶವನ್ನು ಅಳಿಸಲು ಸಿಗ್ನಲ್ ನಿಮಗೆ ಅನುಮತಿಸುತ್ತದೆ. ವಾಟ್ಸಾಪ್ ಸೇರಿದಂತೆ ಇತರ ಮೆಸೇಂಜಿಗ್ ಅಪ್ಲಿಕೇಶನ್‌ಗಳಲ್ಲಿ ನಾವು ನೋಡಿದ ಎಲ್ಲಾ ವೈಶಿಷ್ಟ್ಯಗಳು ಇಲ್ಲಿವೆ.

ಆದರೆ ಸಿಗ್ನಲ್‌ನ ಗಮನವು ಸಂಪೂರ್ಣವಾಗಿ ಗೌಪ್ಯತೆಯ ಮೇಲಿದೆ. ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಮಾತ್ರವಲ್ಲದೆ ಡೇಟಾ ಸಂಗ್ರಹಣೆಯ ಮೇಲೂ ಇದು ವಿಶೇಷ ಕಾಳಜಿ ವಹಿಸಿದೆ.

ಲ್ಯಾಪ್‌ಟಾಪ್ ಅಥವಾ ಐಪ್ಯಾಡ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದೇ?

ಹೌದು, ನಿಮ್ಮ ಐಪ್ಯಾಡ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ನೀವು ಸಿಗ್ನಲ್ ಅನ್ನು ಬಳಸಬಹುದು, ಮತ್ತು ನಿಮ್ಮ ಫೋನ್‌ನಲ್ಲಿರುವ ಖಾತೆಯನ್ನು ಲಿಂಕ್ ಮಾಡಬಹುದು. ಆದರೆ ಇಲ್ಲಿ ಒಮ್ಮೆ ಲಿಂಕ್ ಮಾಡಿದರೆ ನಿಮ್ಮ ಹಿಂದಿನ ಚಾಟ್ ಹಿಸ್ಟರಿ ಲ್ಯಾಪ್‌ಟಾಪ್‌ ನಲ್ಲಿ ಗೋಚರಿಸುವುದಿಲ್ಲ. ಅಲ್ಲಿಂದ ಮುಂದಕ್ಕೆ ನಡೆಸುವ ಸಂಭಾಷಣೆಗಳು ಮಾತ್ರ ಗೋಚರಿಸುತ್ತವೆ. ಏಕೆಂದರೆ ಎಲ್ಲಾ ಹಿಸ್ಟರಿ ಆಯಾ ಪ್ರತ್ಯೇಕ ಸಾಧನಗಳಲ್ಲಿ ಸೇವ್ ಆಗುತ್ತದೆ.

ಸಿಗ್ನಲ್‌ನಲ್ಲಿ ನನ್ನ ಚಾಟ್‌ಗಳನ್ನು Google ಡ್ರೈವ್ ಅಥವಾ ಐಕ್ಲೌಡ್‌ಗೆ ಬ್ಯಾಕಪ್ ಮಾಡಬಹುದೇ?

ಇಲ್ಲ, ವಾಟ್ಸಾಪ್‌ ನಂತೆ ಇದು ಸಾಧ್ಯವಿಲ್ಲ.

ಸಿಗ್ನಲ್‌ನಲ್ಲಿನ ಗೌಪ್ಯತೆ ವೈಶಿಷ್ಟ್ಯಗಳು ಯಾವುವು?

ಸಿಗ್ನಲ್ ಸಾಕಷ್ಟು ಗೌಪ್ಯತೆ-ಕೇಂದ್ರಿತ ವೈಶಿಷ್ಟ್ಯಗಳನ್ನು ಹೊಂದಿದೆ. ನಿಮ್ಮ ಐಪಿ ವಿಳಾಸವನ್ನು ಬಹಿರಂಗಪಡಿಸದೆ ನೀವು ಕರೆಗಳನ್ನು ಮಾಡಬಹುದು. ಆದರೆ ಕರೆ ಗುಣಮಟ್ಟ ಕಡಿಮೆಯಾಗುತ್ತದೆ.

ಇನ್ನು ನೀವು ಸಂದೇಶ ಓದಿದ್ದೀರೋ, ಇಲ್ಲವೋ? ಯಾವಾಗ ಓದಿದ್ದೀರಿ? ಇತ್ಯಾದಿ ಅಂಶಗಳನ್ನು ಸಿಗ್ನಲ್‌ನಲ್ಲಿ ಮರೆಮಾಚಬಹುದಾಗಿದೆ. ಅಲ್ಲದೆ ನೀವು ಆನ್‌ಲೈನ್‌ ನಲ್ಲಿ ಇದ್ದೀರೋ, ಇಲ್ಲವೋ ಎಂಬುದನ್ನು ಸಹ ಮರೆ ಮಾಚಬಹುದು.

ಸಿಗ್ನಲ್ ಯಾವ ಡೇಟಾವನ್ನು ಸಂಗ್ರಹಿಸುತ್ತದೆ?

ಸಿಗ್ನಲ್ ಸಂಗ್ರಹಿಸುವ ಏಕೈಕ ಡೇಟಾವೆಂದರೆ ‘ಸಂಪರ್ಕ ಮಾಹಿತಿ’ ಅದು ಫೋನ್ ಸಂಖ್ಯೆ. ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, “ಯಾವುದೇ ಸೂಕ್ಷ್ಮ ಮಾಹಿತಿಯನ್ನು ಎಂದಿಗೂ ಸಂಗ್ರಹಿಸಲು ಈ ಆಪ್ ವಿನ್ಯಾಸಗೊಳಿಸಲಾಗಿಲ್ಲ”. ಅಪ್ಲಿಕೇಶನ್‌ನಲ್ಲಿನ ಎಲ್ಲಾ ಸಂದೇಶಗಳು ಮತ್ತು ಕರೆಗಳು ಎಂಡ್ ಟು ಎಂಡ್ ಎನ್‌ಕ್ರಿಪ್ಟ್ ಆಗಿವೆ. ಅಂದರೆ ಯಾವುದೇ ಮೂರನೇ ವ್ಯಕ್ತಿ ಮಾತ್ರವಲ್ಲ ಸ್ವತಃ ಸಿಗ್ನಲ್ ಸಹ ಅವುಗಳನ್ನು ನೋಡಲಾಗುವುದಿಲ್ಲ.

ಸಿಗ್ನಲ್‌ನ ಗೌಪ್ಯತೆ ನೀತಿಯ ಪ್ರಕಾರ, ಸಿಗ್ನಲ್ ಖಾತೆಯನ್ನು ರಚಿಸಲು ಬಳಸುವ ಫೋನ್ ಸಂಖ್ಯೆ ಮಾತ್ರ ತಿಳಿದಿರುತ್ತದೆ. ಪ್ರೊಫೈಲ್ ಹೆಸರು ಮತ್ತು ಚಿತ್ರದಂತಹ ಖಾತೆಗೆ ಸೇರಿಸಲಾದ ಇತರ ಮಾಹಿತಿಯು ಸಹ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಟ್ ಆಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಸಿಗ್ನಲ್ ನಿಮ್ಮ ಸಂದೇಶಗಳನ್ನು ಅಥವಾ ನಿಮ್ಮ ಕರೆಗಳ ಬಗ್ಗೆ ಯಾವುದೇ ಮಾಹಿತಿಯನ್ನು ಅದರ ಸರ್ವರ್‌ಗಳಲ್ಲಿ ಸಂಗ್ರಹಿಸುವುದಿಲ್ಲ. ಆದರೆ ಇದು “ತಾತ್ಕಾಲಿಕವಾಗಿ ಆಫ್‌ಲೈನ್‌ನಲ್ಲಿರುವ ಸಾಧನಗಳಿಗೆ ತಲುಪಿಸಲು ಅದರ ಸರ್ವರ್‌ಗಳಲ್ಲಿ ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶಗಳನ್ನು ಮಾತ್ರ ಇಟ್ಟಿರುತ್ತದೆ.” ಉದಾಹರಣೆ ಎಂದರೆ ಫೋನ್‌ನ ಬ್ಯಾಟರಿ ಖಾಲಿಯಾಗಿದ್ದರೆ ಅಥವಾ ಇಂಟರ್ನೆಟ್ ಸಂಪರ್ಕವನ್ನು ಕಳೆದುಕೊಂಡಿದ್ದರೆ ಬಳಕೆದಾರರ ಸಂದೇಶ ಇತಿಹಾಸವನ್ನು ಅವರ ಸ್ವಂತ ಸಾಧನದಲ್ಲಿ ಸಂಗ್ರಹಿಸಲಾಗಿದೆ ಎಂದು ಸಿಗ್ನಲ್ ಹೇಳುತ್ತದೆ.

ಕೆಲವು ಸೇವೆಗಳನ್ನು ಒದಗಿಸಲು ಮೂರನೇ ವ್ಯಕ್ತಿಗಳೊಂದಿಗೆ ಕೆಲವು ಮಾಹಿತಿಯನ್ನು ಹಂಚಿಕೊಳ್ಳಬಹುದು ಎಂದು ಸಿಗ್ನಲ್ ಹೇಳುತ್ತದೆ. ಉದಾಹರಣೆಗೆ, ಪರಿಶೀಲನಾ ಕೋಡ್ ಅನ್ನು ಒದಗಿಸುವ ಮೂರನೇ ವ್ಯಕ್ತಿಯ ಸೇವೆಗಳು.

ಈ ಅಪ್ಲಿಕೇಶನ್ “ನಿಮ್ಮ ವೈಯಕ್ತಿಕ ಡೇಟಾ ಅಥವಾ ವಿಷಯವನ್ನು ಯಾವುದೇ ರೀತಿಯಲ್ಲಿ ಮಾನಿಟರ್ ಮಾಡುವುದಿಲ್ಲ, ಮಾರಾಟ ಮಾಡುವುದಿಲ್ಲ, ಬಾಡಿಗೆಗೆ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸುತ್ತದೆ.

ಸಿಗ್ನಲ್‌ನಲ್ಲಿ ಬುಸಿನೆಸ್ ಖಾತೆ ರಚಿಸಬಹುದೇ?

ಸಿಗ್ನಲ್ ಜನರ ನಡುವಿನ ನೇರ ಸಂಭಾಷಣೆಗೆ ಮೀಸಲಾತಿ ಆಪ್. ಇದು ಸಣ್ಣ, ಮಧ್ಯಮ, ದೊಡ್ಡ ಉದ್ಯಮಗಳಿಗೆ ಸೂಕ್ತವಾದುದ್ದಲ್ಲ. ಆದರೂ ನೀವು ಬುಸಿನೆಸ್ ಖಾತೆ ರಚಿಸಬಹುದು. ಜೊತೆಗೆ ಅದನ್ನು ರದ್ದುಪಡಿಸುವ ಅವಕಾಶ ನಿಮಗೆ ಇದ್ದೇ ಇರುತ್ತದೆ.

ಕೃಪೆ: ದಿ ಇಂಡಿಯನ್ ಎಕ್ಸ್‌ಪ್ರೆಸ್‌


ಇದನ್ನೂ ಓದಿ:ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...