Homeಮುಖಪುಟ'ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

‘ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಮೂವರು ಸದಸ್ಯರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿದ ನಂತರ, ಅಮಾನತಾಗಿರುವ ಅಧ್ಯಕ್ಷ ಸಂಜಯ್ ಸಿಂಗ್ ಆಕ್ರೋಶ ಹರಹಾಕಿದ್ದಾರೆ. ಬಜರಂಗ್ ಪುನಿಯಾ ವಿರುದ್ಧ ಕಿಡಿಕಾರಿರುವ ಅವರು, ‘ಪುನಿಯಾ ಮತ್ತು ಇತರೆ ಕುಸ್ತಿಪಟುಗಳು ರಾಜಕೀಯ ಪ್ರವೇಶದ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ; ಆಟಗಾರರಾಗಿ ಅವರು ತಮ್ಮ ವ್ಯಾಪ್ತಿಯನ್ನು ಮೀರಿದ್ದಾರೆ’ ಎಂದು ಹೇಳಿದರು.

ಕೇಂದ್ರ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐನ ಎಲ್ಲ ಪದಾಧಿಕಾರಿಗಳ ಆಡಳಿತ ಮಂಡಳಿಯನ್ನು ಭಾನುವಾರ ಅಮಾನತುಗೊಳಿಸಿದೆ. ಅದೇ ಸಮಯದಲ್ಲಿ ಸಚಿವಾಲಯವು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಸೂಚನೆ ನೀಡಿದ್ದು, ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯೂಎಫ್‌ಐ) ವ್ಯವಹಾರಗಳನ್ನು ನಿರ್ವಹಿಸಲು ಮತ್ತು ನಿಯಂತ್ರಿಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿತ್ತು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಂಜಯ್ ಸಿಂಗ್, ‘ಈ ಆಟಗಾರರು ಕುಸ್ತಿ ಆಡುವ ತಮ್ಮ ಪ್ರಾಯ ಮೀರಿದ್ದಾರೆ. ನೀವು ಬಜರಂಗ್ ಪುನಿಯಾ ಅವರನ್ನು ನೋಡಿ, ಅವರು ತಮ್ಮ ಕೊನೆಯ ಪಂದ್ಯವನ್ನು 10-0 ಅಂತರದಿಂದ ಸೋತರು. ಈಗ ಅವರು ರಾಜಕೀಯ ಸೇರುವುದಕ್ಕಾಗಿ ಕುಸ್ತಿಯನ್ನು ತೊರೆದಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಅವರೊಂದಿಗೆ ಕುಸ್ತಿ ಮ್ಯಾಟ್ ಮೇಲೆ ಸೆಣಸಾಡಿದ್ದಾರೆ. ಇದು ಆಟಗಾರರು ಮಾಡುವ ಕೆಲಸವಲ್ಲ’ ಎಂದು ಸಂಜಯ್ ಸಿಂಗ್ ಕಿಡಿಕಾರಿದ್ದಾರೆ.

ಬುಧವಾರ ಬೆಳಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಜಜ್ಜರ್ ಜಿಲ್ಲೆಯ ಛಾರಾ ಗ್ರಾಮದ ವೀರೇಂದ್ರ ಆರ್ಯ ಅಖಾರಾ ತಲುಪಿ ಒಲಿಂಪಿಯನ್ ಬಜರಂಗ್ ಪುನಿಯಾ ಸೇರಿದಂತೆ ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿದ್ದರು.

‘ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕುಸ್ತಿಪಟುಗಳು ಕಿರಿಯರ ಪ್ರಗತಿ ಬಯಸುತ್ತಿಲ್ಲ. ಅವರ ಪ್ರತಿಭಟನೆಯು ಎಲ್ಲ ಕುಸ್ತಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅವರು ಕಿರಿಯ ಆಟಗಾರರ ಹಿತ ಬಯಸುವುದಿಲ್ಲ, ಅವರು ರಾಜಕೀಯ ಮಾಡುತ್ತಿದ್ದಾರೆ, ಬೇರೆಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಇದರಿಂದ ಟ್ರಯಲ್ಸ್ ನಡೆಯದೆ ಜೂನಿಯರ್‌ಗಳಿಗೆ ಸಾಕಷ್ಟು ನಷ್ಟವಾಗುತ್ತಿದೆ. ನಾನು 10-12 ವರ್ಷಗಳಿಂದ ಕುಸ್ತಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಎಂದಾದರೂ ಕುಸ್ತಿಪಟುವಿಗೆ ಅಗೌರವ ತೋರಿದ್ದರೆ, ಅವರು ಅದಕ್ಕೆ ಪುರಾವೆ ತೋರಿಸಬೇಕು’ ಎಂದು ಸಿಂಗ್ ಹೇಳಿದರು.

‘ನಾನು ಅಧ್ಯಕ್ಷನಾಗಿ ಆಯ್ಕೆಯಾದ ಕೂಡಲೇ ಪ್ರತಿಭಟನೆ ಆರಂಭಿಸಿದ್ದಾರೆ, ಅದರಲ್ಲಿ ನನ್ನ ತಪ್ಪೇನು’ ಎಂದು ಕುಸ್ತಿಪಟುಗಳನ್ನು ಪ್ರಶ್ನಿಸಿದರು.

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಬಗ್ಗೆ ಕೇಳಿದಾಗ, ‘ಇದು ಅವರ ವೈಯಕ್ತಿಕ ವಿಷಯ; ಆದರೆ, ಅವರು ಹಾಗೆ ಮಾಡಬಾರದು. ಏಕೆಂದರೆ ನಮ್ಮ ನಾಗರಿಕರ ಹಣ ಮತ್ತು ಭಾವನೆಗಳು ಅವರನ್ನು ಇಂದು ಸ್ಟಾರ್‌ಗಳನ್ನಾಗಿ ಮಾಡಿದೆ’ ಎಂದರು.

ಇದನ್ನೂ ಓದಿ; ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...