Homeಮುಖಪುಟ'ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

‘ರಾಜಕೀಯ ಪ್ರವೇಶಕ್ಕಾಗಿ ಕುಸ್ತಿ ತೊರೆದಿದ್ದಾರೆ’; ಅಥ್ಲೀಟ್‌ಗಳ ವಿರುದ್ಧ ಸಂಜಯ್ ಸಿಂಗ್ ಆರೋಪ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್ಐ) ದೈನಂದಿನ ವ್ಯವಹಾರಗಳನ್ನು ನಿರ್ವಹಿಸಲು ಮೂವರು ಸದಸ್ಯರ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ತಾತ್ಕಾಲಿಕ ಸಮಿತಿಯನ್ನು ರಚಿಸಿದ ನಂತರ, ಅಮಾನತಾಗಿರುವ ಅಧ್ಯಕ್ಷ ಸಂಜಯ್ ಸಿಂಗ್ ಆಕ್ರೋಶ ಹರಹಾಕಿದ್ದಾರೆ. ಬಜರಂಗ್ ಪುನಿಯಾ ವಿರುದ್ಧ ಕಿಡಿಕಾರಿರುವ ಅವರು, ‘ಪುನಿಯಾ ಮತ್ತು ಇತರೆ ಕುಸ್ತಿಪಟುಗಳು ರಾಜಕೀಯ ಪ್ರವೇಶದ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ; ಆಟಗಾರರಾಗಿ ಅವರು ತಮ್ಮ ವ್ಯಾಪ್ತಿಯನ್ನು ಮೀರಿದ್ದಾರೆ’ ಎಂದು ಹೇಳಿದರು.

ಕೇಂದ್ರ ಕ್ರೀಡಾ ಸಚಿವಾಲಯವು ಡಬ್ಲ್ಯೂಎಫ್ಐನ ಎಲ್ಲ ಪದಾಧಿಕಾರಿಗಳ ಆಡಳಿತ ಮಂಡಳಿಯನ್ನು ಭಾನುವಾರ ಅಮಾನತುಗೊಳಿಸಿದೆ. ಅದೇ ಸಮಯದಲ್ಲಿ ಸಚಿವಾಲಯವು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ)ಗೆ ಸೂಚನೆ ನೀಡಿದ್ದು, ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯೂಎಫ್‌ಐ) ವ್ಯವಹಾರಗಳನ್ನು ನಿರ್ವಹಿಸಲು ಮತ್ತು ನಿಯಂತ್ರಿಸಲು ತಾತ್ಕಾಲಿಕ ಸಮಿತಿಯನ್ನು ರಚಿಸುವಂತೆ ನಿರ್ದೇಶನ ನೀಡಿತ್ತು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅಂಜಯ್ ಸಿಂಗ್, ‘ಈ ಆಟಗಾರರು ಕುಸ್ತಿ ಆಡುವ ತಮ್ಮ ಪ್ರಾಯ ಮೀರಿದ್ದಾರೆ. ನೀವು ಬಜರಂಗ್ ಪುನಿಯಾ ಅವರನ್ನು ನೋಡಿ, ಅವರು ತಮ್ಮ ಕೊನೆಯ ಪಂದ್ಯವನ್ನು 10-0 ಅಂತರದಿಂದ ಸೋತರು. ಈಗ ಅವರು ರಾಜಕೀಯ ಸೇರುವುದಕ್ಕಾಗಿ ಕುಸ್ತಿಯನ್ನು ತೊರೆದಿದ್ದಾರೆ. ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ, ಅವರೊಂದಿಗೆ ಕುಸ್ತಿ ಮ್ಯಾಟ್ ಮೇಲೆ ಸೆಣಸಾಡಿದ್ದಾರೆ. ಇದು ಆಟಗಾರರು ಮಾಡುವ ಕೆಲಸವಲ್ಲ’ ಎಂದು ಸಂಜಯ್ ಸಿಂಗ್ ಕಿಡಿಕಾರಿದ್ದಾರೆ.

ಬುಧವಾರ ಬೆಳಗ್ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಜಜ್ಜರ್ ಜಿಲ್ಲೆಯ ಛಾರಾ ಗ್ರಾಮದ ವೀರೇಂದ್ರ ಆರ್ಯ ಅಖಾರಾ ತಲುಪಿ ಒಲಿಂಪಿಯನ್ ಬಜರಂಗ್ ಪುನಿಯಾ ಸೇರಿದಂತೆ ಕುಸ್ತಿಪಟುಗಳೊಂದಿಗೆ ಸಂವಾದ ನಡೆಸಿದ್ದರು.

‘ಪ್ರತಿಭಟನೆ ನಡೆಸುತ್ತಿರುವ ಹಿರಿಯ ಕುಸ್ತಿಪಟುಗಳು ಕಿರಿಯರ ಪ್ರಗತಿ ಬಯಸುತ್ತಿಲ್ಲ. ಅವರ ಪ್ರತಿಭಟನೆಯು ಎಲ್ಲ ಕುಸ್ತಿ ಚಟುವಟಿಕೆಗಳನ್ನು ಸ್ಥಗಿತಗೊಳಿಸಿದೆ. ಅವರು ಕಿರಿಯ ಆಟಗಾರರ ಹಿತ ಬಯಸುವುದಿಲ್ಲ, ಅವರು ರಾಜಕೀಯ ಮಾಡುತ್ತಿದ್ದಾರೆ, ಬೇರೆಬೇರೆ ಪಕ್ಷದ ನಾಯಕರನ್ನು ಭೇಟಿ ಮಾಡುತ್ತಿದ್ದಾರೆ. ಇದರಿಂದ ಟ್ರಯಲ್ಸ್ ನಡೆಯದೆ ಜೂನಿಯರ್‌ಗಳಿಗೆ ಸಾಕಷ್ಟು ನಷ್ಟವಾಗುತ್ತಿದೆ. ನಾನು 10-12 ವರ್ಷಗಳಿಂದ ಕುಸ್ತಿಯೊಂದಿಗೆ ಸಂಬಂಧ ಹೊಂದಿದ್ದೇನೆ. ಎಂದಾದರೂ ಕುಸ್ತಿಪಟುವಿಗೆ ಅಗೌರವ ತೋರಿದ್ದರೆ, ಅವರು ಅದಕ್ಕೆ ಪುರಾವೆ ತೋರಿಸಬೇಕು’ ಎಂದು ಸಿಂಗ್ ಹೇಳಿದರು.

‘ನಾನು ಅಧ್ಯಕ್ಷನಾಗಿ ಆಯ್ಕೆಯಾದ ಕೂಡಲೇ ಪ್ರತಿಭಟನೆ ಆರಂಭಿಸಿದ್ದಾರೆ, ಅದರಲ್ಲಿ ನನ್ನ ತಪ್ಪೇನು’ ಎಂದು ಕುಸ್ತಿಪಟುಗಳನ್ನು ಪ್ರಶ್ನಿಸಿದರು.

ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ತಮ್ಮ ಪ್ರಶಸ್ತಿಗಳನ್ನು ಹಿಂದಿರುಗಿಸಿದ ಬಗ್ಗೆ ಕೇಳಿದಾಗ, ‘ಇದು ಅವರ ವೈಯಕ್ತಿಕ ವಿಷಯ; ಆದರೆ, ಅವರು ಹಾಗೆ ಮಾಡಬಾರದು. ಏಕೆಂದರೆ ನಮ್ಮ ನಾಗರಿಕರ ಹಣ ಮತ್ತು ಭಾವನೆಗಳು ಅವರನ್ನು ಇಂದು ಸ್ಟಾರ್‌ಗಳನ್ನಾಗಿ ಮಾಡಿದೆ’ ಎಂದರು.

ಇದನ್ನೂ ಓದಿ; ‘ಮುಸ್ಲಿಂ ಲೀಗ್ ಜಮ್ಮು-ಕಾಶ್ಮೀರ’ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...