Homeಕರ್ನಾಟಕ22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಬಿಟ್ಟು 23ನೇ ಸಮ್ಮೇಳನ ಆಚರಣೆ: ಕಪ್ಪು ಪಟ್ಟಿ...

22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಬಿಟ್ಟು 23ನೇ ಸಮ್ಮೇಳನ ಆಚರಣೆ: ಕಪ್ಪು ಪಟ್ಟಿ ಪ್ರದರ್ಶನ

- Advertisement -
- Advertisement -

“ದೊಡ್ಡ ಬಳ್ಳಾಪುರದಲ್ಲಿ 22 ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸದೇ 23ನೇ ಸಮ್ಮೇಳನ ನಡೆಸಲಾಗುತ್ತಿದೆ ಎಂದು ಆರೋಪಿಸಿ, ಖಂಡಿಸಿರುವ ಜಿಲ್ಲೆಯ ಕನ್ನಡಪರ ಸಂಘಟನೆಗಳು, ಕಪ್ಪು ಬಾವುಟ ಪ್ರದರ್ಶನ ಮಾಡಿ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್ ವಿರುದ್ಧ ಘೋಷಣೆ ಕೂಗಿದರು.

ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ದೊಡ್ಡಬಳ್ಳಾಪುರದಲ್ಲಿ ಭಾನುವಾರ 23 ನೇ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರು ಮತ್ತು ಕಲಾ ತಂಡಗಳ ಮೆರವಣಿಗೆ ನಡೆಯಿತು. ಇದಾದ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಚಿ.ಮಾ.ಸುಧಾಕರ್, ಪ್ರಾಸ್ತಾವಿಕ ನುಡಿ ಆರಂಭಿಸುತ್ತಿದ್ದಂತೆ ವೇದಿಕೆ ಮುಂಭಾಗದಲ್ಲಿದ್ದ ಹೋರಾಟಗಾರರು ಕಪ್ಪುಪಟ್ಟಿ ಪ್ರದರ್ಶನ ಮಾಡಿ ಘೊಷಣೆ ಕೂಗಿದರು. ಜೊತೆಗೆ ವೇದಿಕೆ ಮುಂಭಾಗದಲ್ಲಿ ಪ್ರತಿಭಟನೆಯನ್ನೂ ನಡೆಸಿದರು.

ಇದನ್ನೂ ಓದಿ: ಕನ್ನಡ ಧ್ವಜ ಇಳಿಸದಿದ್ದರೆ ಗಲ್ಲಿ-ಗಲ್ಲಿಯಲ್ಲಿ ಭಗವಾಧ್ವಜ ಹಾರಾಡುತ್ತದೆ: ಎಚ್ಚರಿಕೆ ನೀಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ

“ಜಿಲ್ಲಾ ಘಟಕದ ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. 22 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ನಂತರ ಜನವರಿ 28 ಕ್ಕೆ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈಗ ತರಾತುರಿಯಲ್ಲಿ 23 ನೇ ಸಮ್ಮೇಳನ ಮಾಡಲಾಗುತ್ತಿದೆ. ಇದರಿಂದ 22ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಿಗೆ ಅಪಮಾನ ಮಾಡಿದಂತಾಗುತ್ತದೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

“ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಶಿಷ್ಟಾಚಾರ ಉಲ್ಲಂಘನೆ ಮಾಡಲಾಗುತ್ತಿದೆ. 22ನೇ ಸಾಹಿತ್ಯ ಸಮ್ಮೇಳನಾಧ್ಯಕ್ಷರಿಂದ 23ನೇ ಸಮ್ಮೇಳನಾಧ್ಯಕ್ಷರಿಗೆ ಕನ್ನಡದ ಬಾವುಟ ಹಸ್ತಾಂತರಿಸುವುದು ರೂಢಿ. ಸಮ್ಮೇಳನವೇ ನಡೆಯದೇ ಇರುವಾಗ ಹಸ್ತಾಂತರ ಮಾಡುವವರು ಯಾರು, ಈ ವಿಚಾರ ಅವರಿಗೆ ತಿಳಿದಿದ್ದರೂ ಪ್ರಭುದೇವ್ ಅವರಿಗೆ ಅಪಮಾನ ಮಾಡಿದ್ದಾರೆ” ಎಂದು ದೊಡ್ಡಬಳ್ಳಾಪುರ ಸಾಹಿತ್ಯ ಪರಿಷತ್‌ ನಿರ್ದೇಶಕ ಕಿರಣ್ ಹೇಳಿದರು.

ನಂತರ ಮಾತನಾಡಿದ ಸುಧಾಕರ್, ಜನವರಿ 28 ರಂದು ಸಮ್ಮೇಳನ ನಡೆಸುವುದಾಗಿ ಹೇಳಿದರು.


ಇದನ್ನೂ ಓದಿ: ಬಿಜೆಪಿ ಜಿಲ್ಲಾಧ್ಯಕ್ಷರ ಆಮಿಷ: ಪಕ್ಷಕ್ಕೆ ಬಂದರೆ ಅಧ್ಯಕ್ಷ ಪದವಿ ಗ್ಯಾರೆಂಟಿ ಎಂದ ಬಿ.ಸುರೇಶ್ ಗೌಡ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...