Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

ಲೆಬನಾನ್ ಮೇಲೆ ಇಸ್ರೇಲ್ ದಾಳಿ | 600 ಭಾರತೀಯ ಸೈನಿಕರು ಅಪಾಯದಲ್ಲಿ!

- Advertisement -
- Advertisement -

ಇಸ್ರೇಲ್ ಸೇನೆ ಹಿಜ್ಬುಲ್ಲಾ ವಿರುದ್ಧ ಮಾಡಿದ್ದ ದಾಳಿಗೆ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆ  ಒಳಗಾಗಿದೆ. ಲೆಬನಾನ್‌ ಗಡಿಯ ಈ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆಯಲ್ಲಿ 600 ಭಾರತೀಯ ಸೈನಿಕರಿದ್ದು ಈ ದಾಳಿಯ ಬಗ್ಗೆ ಭಾರತ ಆತಂಕ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ ಈ ಸೇನೆಯಲ್ಲಿರುವ ಭಾರತೀಯ ಸೈನಿಕರು ಇಸ್ರೇಲ್-ಲೆಬನಾನ್ ಗಡಿಯಲ್ಲಿ 120-ಕಿಮೀ ನೀಲಿ ರೇಖೆಯ ಉದ್ದಕ್ಕೂ ನೆಲೆಸಿದ್ದಾರೆ.ಇಸ್ರೇಲ್ ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು, “ನೀಲಿ ರೇಖೆಯ ಉದ್ದಕ್ಕೂ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ನಾವು ಕಳವಳಗೊಂಡಿದ್ದೇವೆ. ನಾವು ಪರಿಸ್ಥಿತಿಯನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ವಿಶ್ವಸಂಸ್ಥೆಯ ಆವರಣದ ಪಾವಿತ್ರತೆಯನ್ನು ಎಲ್ಲರೂ ಗೌರವಿಸಬೇಕು ಮತ್ತು ವಿಶ್ವಸಂಸ್ಥೆಯ ಶಾಂತಿಪಾಲಕರ ಸುರಕ್ಷತೆ ಮತ್ತು ಅವರ ಆದೇಶದ ಪವಿತ್ರತೆಯನ್ನು ಖಚಿತಪಡಿಸಿಕೊಳ್ಳಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದೆ.

ಇದನ್ನೂಓದಿ: ಜಮ್ಮು ಕಾಶ್ಮೀರ | ನ್ಯಾಷನಲ್ ಕಾನ್ಫರೆನ್ಸ್‌ ಸರ್ಕಾರಕ್ಕೆ ಆಮ್ ಆದ್ಮಿ ಪಕ್ಷ ಬೆಂಬಲ

ಲೆಬನಾನ್‌ನಲ್ಲಿರುವ ವಿಶ್ವಸಂಸ್ಥೆಯ ಮಧ್ಯಂತರ ಪಡೆ (UNIFIL)ನ ನಖೌರಾ ಪ್ರಧಾನ ಕಛೇರಿ ಮತ್ತು ಹತ್ತಿರದ ಸ್ಥಾನಗಳನ್ನು ಇಸ್ರೇಲಿ ಪಡೆಗಳು ಪದೇ ಪದೇ ದಾಳಿಯ ಮಾಡುತ್ತಿದೆ ವಿಶ್ವಸಂಸ್ಥೆ ಹೇಳಿದ ಒಂದು ದಿನದ ನಂತರ ಭಾರತ ಸರ್ಕಾರ ಈ ಹೇಳಿಕೆ ನೀಡಿದೆ.ಇಸ್ರೇಲ್ ದಾಳಿ

“ಇಂದು ಬೆಳಿಗ್ಗೆ, ಇಸ್ರೇಲ್ ಸೇನೆ ಮೆರ್ಕಾವಾ ಟ್ಯಾಂಕ್ ನಖೌರಾದಲ್ಲಿನ ಯುನಿಫಿಲ್‌ನ ಪ್ರಧಾನ ಕಛೇರಿಯಲ್ಲಿನ ವೀಕ್ಷಣಾ ಗೋಪುರದ ಕಡೆಗೆ ತನ್ನ ಆಯುಧವನ್ನು ಹಾರಿಸಿದ್ದು, ಇಬ್ಬರು ಶಾಂತಿಪಾಲಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೆ ಗಂಭೀರ ಗಾಯಗಳಾಗಿಲ್ಲ. ಆದರೆ ಅವರು ಆಸ್ಪತ್ರೆಯಲ್ಲಿಯೇ ಇದ್ದಾರೆ” ಎಂದು ವಿಶ್ವಸಂಸ್ಥೆ ಹೇಳಿಕೆ ತಿಳಿಸಿದೆ.

ಇಸ್ರೇಲ್-ಲೆಬನಾನ್ ಗಡಿಯಲ್ಲಿನ ಪರಿಸ್ಥಿತಿಯು ಹಿಜ್ಬುಲ್ಲಾದ ಮಾಜಿ ಮುಖ್ಯಸ್ಥ ಹಸನ್ ನಸ್ರಲ್ಲಾ ಅವರ ಹತ್ಯೆಯ ನಂತರ ತೀವ್ರವಾಗಿ ಉಲ್ಬಣಗೊಂಡಿದೆ. ಇಸ್ರೇಲ್ ಈ ಪ್ರದೇಶದಲ್ಲಿ ಭೂ-ಆಧಾರಿತ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದೆ ಎಂದು ವರದಿಯಾಗಿದ್ದು, ಅಲ್ಲಿರುವ ಪಡೆಗಳಿಗೆ ಹೆಚ್ಚಿನ ಅಪಾಯವಿದೆ ಎಂದು ವರದಿಯಾಗಿದೆ. ಆದರೆ UNIFIL ಪೋಸ್ಟ್‌ಗಳ ಸಮೀಪವಿರುವ ಪ್ರದೇಶಗಳಲ್ಲಿ ಹೆಜ್ಬುಲ್ಲಾ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೇಲ್ ಆರೋಪಿಸಿದೆ.

ವಿಡಿಯೊ ನೋಡಿ: ಶಿಲ್ಪಕಲೆಗಳ ತವರೂರು ಹಾಸನದಲ್ಲಿ ಮಹಾತ್ಮ ಗಾಂಧಿಯ ವಿರೂಪ ಪ್ರತಿಮೆಗಳ ರಚನೆ; ಉದ್ಘಾಟನೆ ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...