Homeಕರ್ನಾಟಕಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

ಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

- Advertisement -
- Advertisement -

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು.

ಭಾರತ ಸಂವಿಧಾನ ಸಂಘಟನಾ ಸಮಿತಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಆಡಿದ ಮಾತುಗಳನ್ನು ಉದ್ಧರಿಸುತ್ತ ಖ್ಯಾತ ಎಡಪಂಥೀಯ ಚಿಂತಕ, ಪಿ. ಸಾಯಿನಾಥ್ ‘ಭಾರತದ ಪ್ರಜಾಪ್ರಭುತ್ವದಲ್ಲಿ ಅಂತರ್ಗತವಾಗಿರುವ ದೌರ್ಬಲ್ಯದ ಬಗ್ಗೆ ಬಾಬಾ ಸಾಹೇಬರು ಬಹಳ ಹಿಂದೆಯೇ ಎಚ್ಚರಿಸಿದ್ದರು. ಸಮಾನತೆಯನ್ನು ಹೊರಗಿಟ್ಟ ಸ್ವಾತಂತ್ರ್ಯ ಬಹುಜನರ ಮೇಲೆ ಕೆಲವೇ ಕೆಲವು ಜನಗಳ ದಬ್ಬಾಳಿಕೆಗೆ ದಾರಿಮಾಡಿಕೊಡುತ್ತದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವಗಳ ಮೌಲ್ಯಗಳನ್ನು ಬೇರ್ಪಡಿಸಿ ನೋಡುವ ಹಾಗಿಲ್ಲ. ಅವುಗಳ ಪೈಕಿ ಒಂದನ್ನು ಹೊರತುಪಡಿಸಿ ಇನ್ನೊಂದು ಇರಲಾರದು’ ಎಂದು ಸಾಯಿನಾಥ್ ಬಾಬಾ ಸಾಹೇಬರನ್ನು ಉಲ್ಲೇಖಿಸಿದ್ದರು. ತನ್ನ ಮಾತು ಮುಂದುವರಿಸುತ್ತ ಸಾಯಿನಾಥ್ ಹಾಲೀ ಕೇಂದ್ರ ಸರಕಾರದ ಧೋರಣೆಗಳು ದೇಶದಲ್ಲಿ ಹಿಂದೆಂದೂ ಕಾಣದ ಅಸಮಾನತೆಗೆ ಕಾರಣವಾಗಿದೆ ಎಂದು ಹೇಳಿದರು.

ಈ ಸಂಗತಿಗಳಲ್ಲಿ ಒಂದಕ್ಕೊಂದು ಹೇಗೆ ಥಳಕು ಹಾಕಿಕೊಂಡಿದೆ ಎಂದು ಹೇಳುತ್ತ ಸಾಯಿನಾಥ್ ತನ್ನ ಮಾತಿಗೆ ಮುಸ್ಲಿಂ ಜಾನುವಾರು ಕಸಾಯಿಗಳ ನಿದರ್ಶನ ನೀಡಿದರು. ಈ ವ್ಯವಹಾರದ ಮೂಲಾಧಾರವಾಗಿರುವ ಜಾನುವಾರು ದಲ್ಲಾಳಿಗಳಲ್ಲಿ ಹೆಚ್ಚಿನವರು ಕೆಳಜಾತಿ, ವರ್ಗಗಳ ಹಿಂದುಗಳು. ಜಾನುವಾರು ಹತ್ಯೆ ನಿಷೇಧಗೊಂಡಾಗ ಮುಸ್ಲಿಂ ಕಸಾಯಿಗಳು ನಿರುದ್ಯೋಗಿಗಳಾದರು; ಹಿಂದುಳಿದ ಜಾತಿವರ್ಗಗಳವರು ತಮ್ಮ ಅರೆಕಾಲಿಕ ಉದ್ಯೋಗಗಳನ್ನು ಕಳಕಂಡರು. ಬೆಲೆಗಳು ಕುಸಿದವು. ಮಹಾರಾಷ್ಟ್ರ ರಾಜ್ಯದ ಬಹುಮುಖ್ಯ ಉದ್ಯಮಗಳಲ್ಲಿ ಒಂದಾಗಿರುವ ಕೊಲ್ಹಾಪುರಿ ಚಪ್ಪಲಿಗಳ ತಯಾರಿಕೆ ದಿವಾಳಿ ಎದ್ದಿತು. ದೇಶದ ಆರ್ಥಿಕ ಧೋರಣೆಗಳನ್ನು ದೆಹಲಿಯಲ್ಲಿ ಕೂತು ನಿರ್ಧರಿಸುವವರಿಗೆ ಗ್ರಾಮೀಣ ಉದ್ಯಮಗಳು ಹೇಗೆ ಪರಸ್ಪರ ಸಂಬಂಧ ಹೊಂದಿದ್ದು ನಿಕಟವಾಗಿ ಹೆಣೆದುಕೊಂಡಿದೆ ಎಂಬ ಕಲ್ಪನೆಯೇ ಇಲ್ಲ ಎಂದು ಸಾಯಿನಾಥ್ ಹೇಳಿದರು. ದೇಶ ಈಗ ಕೃಷಿ, ಶಿಕ್ಷಣ ಅರ್ಥವ್ಯವಸ್ಥೆ ಮತ್ತು ಉದ್ಯೋಗ ನಿರ್ಮಾಣ ಕ್ಷೇತ್ರಗಳಲ್ಲಿ ಗಂಭೀರವಾದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಅವರು ತಿಳಿಸಿದರು. ಮಂಗಳೂರಿನ ಈ ಉಪನ್ಯಾಸವನ್ನು ನಗರದ ಸೈಂಟ್ ಅಲೋಸಿಯಸ್ ಕಾಲೇಜು ಏರ್ಪಡಿಸಿತ್ತು.

ಕುಂದಾಪುರದಲ್ಲಿ ‘ಸಮುದಾಯ’ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಜಂಟಿ ಆಶ್ರಯದಲ್ಲಿ ನಡೆದ ಇನ್ನೊಂದು ಸಭೆಯಲ್ಲಿ ‘ಕಾರ್ಪೊರೇಟ್ ಫಾರ್ಮಿಂಗ್ – ಭಾರತದ ಕೃಷಿ ಬಿಕ್ಕಟ್ಟುಗಳು’ ಎಂಬ ವಿಷಯದ ಕುರಿತು ನೀಡಿದ ಉಪನ್ಯಾಸದಲ್ಲಿ ಸಾಯಿನಾಥ್ ರೈತನಿಗೆ ಆತ ಬಳಸುವ ನೆಲ ಹೊರತು ಪಡಿಸಿ, ಬೇರೆ ಯಾವುದರ ಮೇಲೂ ಹಿಡಿತವಿಲ್ಲ. ಕೃಷಿಯ ಮೂಲಭೂತ ಅಗತ್ಯಗಳಾದ ನೀರು, ಗೊಬ್ಬರ, ಬೀಜ, ಮಾರುಕಟ್ಟೆ, ಸಾರಿಗೆ – ಎಲ್ಲವೂ ಕಾರ್ಪೊರೇಟ್ ಕಂಪನಿಗಳ ನಿಯಂತ್ರಣದಲ್ಲಿವೆ. ಕಾರ್ಪೊರೇಟ್ ಕಂಪನಿಗಳು ಕೃಷಿಕ್ಷೇತ್ರವನ್ನು ಕೈವಶ ಮಾಡಿಕೊಂಡಿವೆ. ಇದರ ಪರಿಣಾಮವಾಗಿ ರೈತ, ಇಂದು, ಅಕ್ಷರಶಃ ಕಾರ್ಪೊರೇಟ್ ಹಿತಾಸಕ್ತಿಗಳ ಗುಲಾಮನಾಗಿದ್ದಾನೆ. ಒಬ್ಬ ಬಡಗಿ, ನೇಕಾರ, ಮೋಚಿ ಅಥವಾ ಅಕ್ಕಸಾಲಿಗ, ಹೀಗೆ ಯಾವ ದುಡಿಮೆಗಾರನಿಗಾದರೂ ತನ್ನ ದುಡಿಮೆಯ ವೇತನ ಎಷ್ಟು? ತಾನು ಉತ್ಪಾದಿಸಿದ ಸರಕಿನ ಬೆಲೆ ಎಷ್ಟು? ಎಂದು ನಿರ್ಧರಿಸುವ ಹಕ್ಕು ಇರುತ್ತದೆ. ಆದರೆ ಕೃಷಿ ಕ್ಷೇತ್ರದಲ್ಲಿ ಮಾತ್ರ ರೈತನ ನಿರ್ಧಾರಗಳನ್ನೂ ಆತನ ಹೆಸರಿನಲ್ಲಿ ಕಾರ್ಪೊರೇಶನ್ ಕಂಪನಿಗಳೇ ತೆಗೆದುಕೊಳ್ಳುತ್ತವೆ. ಹಾಗಾಗಿ ‘ರೈತ’ ಎಂಬ ಶಬ್ದಕ್ಕೆ ಈಗ ಯಾವ ಅರ್ಥವೂ ಉಳಿದಿಲ್ಲ. ಹಾಲೀಕೇಂದ್ರ ಸರಕಾರದ ಬಹುಮುಖ್ಯ ಆರ್ಥಿಕ ನಿರ್ಧಾರಗಳನ್ನೆ ನೋಡಿ. ನೋಟು ಅಮಾನ್ಯೀಕರಣ ಹಾಗೂ ಜಿ.ಎಸ್.ಟಿ ತೆರಿಗೆಗಳು ರೈತನ ಪರವಾಗಿಲ್ಲ. ರೈತರ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸದೆ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಗಳು ಅವು. ದೇಶದ ಕೃಷಿ ವಿಶ್ವ ವಿದ್ಯಾಲಯಗಳು ಸಹ ಈಗ ರೈತರ ಬದಲು ಕಾರ್ಪೊರೇಟ್ ಹಿತಾಸಕ್ತಿಗಳ ವಕ್ತಾರರಂತೆ ವರ್ತಿಸುತ್ತಿವೆ. ಅವು ಹೆಸರಿಗಷ್ಟೇ ‘ಸ್ವಾವಲಂಬಿ’ ವಾಸ್ತವವಾಗಿ ಅವೆಲ್ಲವೂ ಕಾರ್ಪೊರೇಟ್ ಬಂಡವಾಳಶಾಹಿಯ ಕೃಪಾಪೋಷಿತ ಸಂಸ್ಥೆಗಳು ಈ ಸನ್ನಿವೇಶದಲ್ಲಿ ಮಾರುಕಟ್ಟೆಯನ್ನೇ ಅವಲಂಬಿಸಿದ ವಾಣಿಜ್ಯ ಕೃಷಿ ಅತಂತ್ರವಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವೆನಿಲ್ಲಾ ಬೆಳೆಗೆ ವಿಪರೀತ ಬೆಲೆ ಏರಿದುದರಿಂದ ಕೇರಳ, ಮಂಗಳೂರುಗಳ ರೈತರು ಭಾರೀ ವರಮಾನ ಗಳಿಸಿದರು. ಆದರೆ ಒಮ್ಮೆ ವೆನಿಲ್ಲಾದ ಬೆಲೆ ಕುಸಿಯಲಾರಂಭಿಸಿದಾಗ ಅವುಗಳ ಮೇಲೆ ಭರವಸೆ ಇಟ್ಟಿದ್ದ ರೈತರು ದಿಕ್ಕೆಟ್ಟು ಆತ್ಮಹತ್ಯೆ ಮಾಡಿ ಕೊಳ್ಳಬೇಕಾಯಿತು. ಇದೇ ಪರಿಸ್ಥಿತಿ ಪಂಜಾಬ್‍ನ ರೈತರಿಗೂ ಎದುರಾಯಿತು. ಬಹುರಾಷ್ಟ್ರೀಯ ಕಂಪನಿ ಪೆಪ್ಸಿಕೋ ಪಂಜಾಬ್‍ನ ರೈತರು ಬೆಳೆಸಿದ ವಿಶಿಷ್ಟ ತಳಿಯ ಟೊಮೆಟೋ ಹಣ್ಣು ಕೊಳ್ಳಲಾರಂಭಿತು. ಮೊದಲ ಎರಡು ವರ್ಷ ಪಂಜಾಬ್ ರೈತರಿಗೆ ಪೆಪ್ಸಿಕೋ ಬಹಳ ಒಳ್ಳೆಯ ವರ ನೀಡಿತು. ಆ ನಂತರ ಕಂಪನಿಗೆ ಅದೇ ಗುಣಮಟ್ಟದ ಟೊಮೆಟೋ ಹಣ್ಣು ಬೇರೆ ದೇಶಗಳಲ್ಲಿ ಲಭ್ಯವಿದ್ದುದರಿಂದ ಪಂಜಾಬ್ ಟೊಮೆಟೋ ಬೆಳೆಯನ್ನು ಕೇಳುವವರೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿತು.

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣ ಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು. ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಬಂಡವಾಳಶಾಹಿಯ ದುರಾಶೆಗೆ ಬಲಿಯಾಗಿ ಬದುಕನ್ನೇ ಕಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಭಾಗವಾಗಿ 1991 ರಿಂದ ಮುಂದಿನ 20 ವರ್ಷಗಳ ಅವಧಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ಕಾಲಾವಧಿಯಲ್ಲಿ 72 ಲಕ್ಷಕ್ಕೂ ಮೀರಿ ರೈತರು ಕೃಷಿಕ್ಷೇತ್ರಕ್ಕೆ ವಿದಾಯ ಹೇಳಿದ್ದಾರೆ. ಈ ಪರಿಸ್ಥಿತಿ ಬದಲಾಗಲೇಬೇಕು. ಇದು ನಮ್ಮ ಕಾಲ ಎದುರಿಸುತ್ತಿರುವ ಬಹು ದೊಡ್ಡ ಪಂಥಾಹ್ವಾನ ಎಂದು ಸಾಯಿನಾಥ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...