Homeಕರ್ನಾಟಕಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

ಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

- Advertisement -
- Advertisement -

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು.

ಭಾರತ ಸಂವಿಧಾನ ಸಂಘಟನಾ ಸಮಿತಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಆಡಿದ ಮಾತುಗಳನ್ನು ಉದ್ಧರಿಸುತ್ತ ಖ್ಯಾತ ಎಡಪಂಥೀಯ ಚಿಂತಕ, ಪಿ. ಸಾಯಿನಾಥ್ ‘ಭಾರತದ ಪ್ರಜಾಪ್ರಭುತ್ವದಲ್ಲಿ ಅಂತರ್ಗತವಾಗಿರುವ ದೌರ್ಬಲ್ಯದ ಬಗ್ಗೆ ಬಾಬಾ ಸಾಹೇಬರು ಬಹಳ ಹಿಂದೆಯೇ ಎಚ್ಚರಿಸಿದ್ದರು. ಸಮಾನತೆಯನ್ನು ಹೊರಗಿಟ್ಟ ಸ್ವಾತಂತ್ರ್ಯ ಬಹುಜನರ ಮೇಲೆ ಕೆಲವೇ ಕೆಲವು ಜನಗಳ ದಬ್ಬಾಳಿಕೆಗೆ ದಾರಿಮಾಡಿಕೊಡುತ್ತದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವಗಳ ಮೌಲ್ಯಗಳನ್ನು ಬೇರ್ಪಡಿಸಿ ನೋಡುವ ಹಾಗಿಲ್ಲ. ಅವುಗಳ ಪೈಕಿ ಒಂದನ್ನು ಹೊರತುಪಡಿಸಿ ಇನ್ನೊಂದು ಇರಲಾರದು’ ಎಂದು ಸಾಯಿನಾಥ್ ಬಾಬಾ ಸಾಹೇಬರನ್ನು ಉಲ್ಲೇಖಿಸಿದ್ದರು. ತನ್ನ ಮಾತು ಮುಂದುವರಿಸುತ್ತ ಸಾಯಿನಾಥ್ ಹಾಲೀ ಕೇಂದ್ರ ಸರಕಾರದ ಧೋರಣೆಗಳು ದೇಶದಲ್ಲಿ ಹಿಂದೆಂದೂ ಕಾಣದ ಅಸಮಾನತೆಗೆ ಕಾರಣವಾಗಿದೆ ಎಂದು ಹೇಳಿದರು.

ಈ ಸಂಗತಿಗಳಲ್ಲಿ ಒಂದಕ್ಕೊಂದು ಹೇಗೆ ಥಳಕು ಹಾಕಿಕೊಂಡಿದೆ ಎಂದು ಹೇಳುತ್ತ ಸಾಯಿನಾಥ್ ತನ್ನ ಮಾತಿಗೆ ಮುಸ್ಲಿಂ ಜಾನುವಾರು ಕಸಾಯಿಗಳ ನಿದರ್ಶನ ನೀಡಿದರು. ಈ ವ್ಯವಹಾರದ ಮೂಲಾಧಾರವಾಗಿರುವ ಜಾನುವಾರು ದಲ್ಲಾಳಿಗಳಲ್ಲಿ ಹೆಚ್ಚಿನವರು ಕೆಳಜಾತಿ, ವರ್ಗಗಳ ಹಿಂದುಗಳು. ಜಾನುವಾರು ಹತ್ಯೆ ನಿಷೇಧಗೊಂಡಾಗ ಮುಸ್ಲಿಂ ಕಸಾಯಿಗಳು ನಿರುದ್ಯೋಗಿಗಳಾದರು; ಹಿಂದುಳಿದ ಜಾತಿವರ್ಗಗಳವರು ತಮ್ಮ ಅರೆಕಾಲಿಕ ಉದ್ಯೋಗಗಳನ್ನು ಕಳಕಂಡರು. ಬೆಲೆಗಳು ಕುಸಿದವು. ಮಹಾರಾಷ್ಟ್ರ ರಾಜ್ಯದ ಬಹುಮುಖ್ಯ ಉದ್ಯಮಗಳಲ್ಲಿ ಒಂದಾಗಿರುವ ಕೊಲ್ಹಾಪುರಿ ಚಪ್ಪಲಿಗಳ ತಯಾರಿಕೆ ದಿವಾಳಿ ಎದ್ದಿತು. ದೇಶದ ಆರ್ಥಿಕ ಧೋರಣೆಗಳನ್ನು ದೆಹಲಿಯಲ್ಲಿ ಕೂತು ನಿರ್ಧರಿಸುವವರಿಗೆ ಗ್ರಾಮೀಣ ಉದ್ಯಮಗಳು ಹೇಗೆ ಪರಸ್ಪರ ಸಂಬಂಧ ಹೊಂದಿದ್ದು ನಿಕಟವಾಗಿ ಹೆಣೆದುಕೊಂಡಿದೆ ಎಂಬ ಕಲ್ಪನೆಯೇ ಇಲ್ಲ ಎಂದು ಸಾಯಿನಾಥ್ ಹೇಳಿದರು. ದೇಶ ಈಗ ಕೃಷಿ, ಶಿಕ್ಷಣ ಅರ್ಥವ್ಯವಸ್ಥೆ ಮತ್ತು ಉದ್ಯೋಗ ನಿರ್ಮಾಣ ಕ್ಷೇತ್ರಗಳಲ್ಲಿ ಗಂಭೀರವಾದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಅವರು ತಿಳಿಸಿದರು. ಮಂಗಳೂರಿನ ಈ ಉಪನ್ಯಾಸವನ್ನು ನಗರದ ಸೈಂಟ್ ಅಲೋಸಿಯಸ್ ಕಾಲೇಜು ಏರ್ಪಡಿಸಿತ್ತು.

ಕುಂದಾಪುರದಲ್ಲಿ ‘ಸಮುದಾಯ’ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಜಂಟಿ ಆಶ್ರಯದಲ್ಲಿ ನಡೆದ ಇನ್ನೊಂದು ಸಭೆಯಲ್ಲಿ ‘ಕಾರ್ಪೊರೇಟ್ ಫಾರ್ಮಿಂಗ್ – ಭಾರತದ ಕೃಷಿ ಬಿಕ್ಕಟ್ಟುಗಳು’ ಎಂಬ ವಿಷಯದ ಕುರಿತು ನೀಡಿದ ಉಪನ್ಯಾಸದಲ್ಲಿ ಸಾಯಿನಾಥ್ ರೈತನಿಗೆ ಆತ ಬಳಸುವ ನೆಲ ಹೊರತು ಪಡಿಸಿ, ಬೇರೆ ಯಾವುದರ ಮೇಲೂ ಹಿಡಿತವಿಲ್ಲ. ಕೃಷಿಯ ಮೂಲಭೂತ ಅಗತ್ಯಗಳಾದ ನೀರು, ಗೊಬ್ಬರ, ಬೀಜ, ಮಾರುಕಟ್ಟೆ, ಸಾರಿಗೆ – ಎಲ್ಲವೂ ಕಾರ್ಪೊರೇಟ್ ಕಂಪನಿಗಳ ನಿಯಂತ್ರಣದಲ್ಲಿವೆ. ಕಾರ್ಪೊರೇಟ್ ಕಂಪನಿಗಳು ಕೃಷಿಕ್ಷೇತ್ರವನ್ನು ಕೈವಶ ಮಾಡಿಕೊಂಡಿವೆ. ಇದರ ಪರಿಣಾಮವಾಗಿ ರೈತ, ಇಂದು, ಅಕ್ಷರಶಃ ಕಾರ್ಪೊರೇಟ್ ಹಿತಾಸಕ್ತಿಗಳ ಗುಲಾಮನಾಗಿದ್ದಾನೆ. ಒಬ್ಬ ಬಡಗಿ, ನೇಕಾರ, ಮೋಚಿ ಅಥವಾ ಅಕ್ಕಸಾಲಿಗ, ಹೀಗೆ ಯಾವ ದುಡಿಮೆಗಾರನಿಗಾದರೂ ತನ್ನ ದುಡಿಮೆಯ ವೇತನ ಎಷ್ಟು? ತಾನು ಉತ್ಪಾದಿಸಿದ ಸರಕಿನ ಬೆಲೆ ಎಷ್ಟು? ಎಂದು ನಿರ್ಧರಿಸುವ ಹಕ್ಕು ಇರುತ್ತದೆ. ಆದರೆ ಕೃಷಿ ಕ್ಷೇತ್ರದಲ್ಲಿ ಮಾತ್ರ ರೈತನ ನಿರ್ಧಾರಗಳನ್ನೂ ಆತನ ಹೆಸರಿನಲ್ಲಿ ಕಾರ್ಪೊರೇಶನ್ ಕಂಪನಿಗಳೇ ತೆಗೆದುಕೊಳ್ಳುತ್ತವೆ. ಹಾಗಾಗಿ ‘ರೈತ’ ಎಂಬ ಶಬ್ದಕ್ಕೆ ಈಗ ಯಾವ ಅರ್ಥವೂ ಉಳಿದಿಲ್ಲ. ಹಾಲೀಕೇಂದ್ರ ಸರಕಾರದ ಬಹುಮುಖ್ಯ ಆರ್ಥಿಕ ನಿರ್ಧಾರಗಳನ್ನೆ ನೋಡಿ. ನೋಟು ಅಮಾನ್ಯೀಕರಣ ಹಾಗೂ ಜಿ.ಎಸ್.ಟಿ ತೆರಿಗೆಗಳು ರೈತನ ಪರವಾಗಿಲ್ಲ. ರೈತರ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸದೆ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಗಳು ಅವು. ದೇಶದ ಕೃಷಿ ವಿಶ್ವ ವಿದ್ಯಾಲಯಗಳು ಸಹ ಈಗ ರೈತರ ಬದಲು ಕಾರ್ಪೊರೇಟ್ ಹಿತಾಸಕ್ತಿಗಳ ವಕ್ತಾರರಂತೆ ವರ್ತಿಸುತ್ತಿವೆ. ಅವು ಹೆಸರಿಗಷ್ಟೇ ‘ಸ್ವಾವಲಂಬಿ’ ವಾಸ್ತವವಾಗಿ ಅವೆಲ್ಲವೂ ಕಾರ್ಪೊರೇಟ್ ಬಂಡವಾಳಶಾಹಿಯ ಕೃಪಾಪೋಷಿತ ಸಂಸ್ಥೆಗಳು ಈ ಸನ್ನಿವೇಶದಲ್ಲಿ ಮಾರುಕಟ್ಟೆಯನ್ನೇ ಅವಲಂಬಿಸಿದ ವಾಣಿಜ್ಯ ಕೃಷಿ ಅತಂತ್ರವಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವೆನಿಲ್ಲಾ ಬೆಳೆಗೆ ವಿಪರೀತ ಬೆಲೆ ಏರಿದುದರಿಂದ ಕೇರಳ, ಮಂಗಳೂರುಗಳ ರೈತರು ಭಾರೀ ವರಮಾನ ಗಳಿಸಿದರು. ಆದರೆ ಒಮ್ಮೆ ವೆನಿಲ್ಲಾದ ಬೆಲೆ ಕುಸಿಯಲಾರಂಭಿಸಿದಾಗ ಅವುಗಳ ಮೇಲೆ ಭರವಸೆ ಇಟ್ಟಿದ್ದ ರೈತರು ದಿಕ್ಕೆಟ್ಟು ಆತ್ಮಹತ್ಯೆ ಮಾಡಿ ಕೊಳ್ಳಬೇಕಾಯಿತು. ಇದೇ ಪರಿಸ್ಥಿತಿ ಪಂಜಾಬ್‍ನ ರೈತರಿಗೂ ಎದುರಾಯಿತು. ಬಹುರಾಷ್ಟ್ರೀಯ ಕಂಪನಿ ಪೆಪ್ಸಿಕೋ ಪಂಜಾಬ್‍ನ ರೈತರು ಬೆಳೆಸಿದ ವಿಶಿಷ್ಟ ತಳಿಯ ಟೊಮೆಟೋ ಹಣ್ಣು ಕೊಳ್ಳಲಾರಂಭಿತು. ಮೊದಲ ಎರಡು ವರ್ಷ ಪಂಜಾಬ್ ರೈತರಿಗೆ ಪೆಪ್ಸಿಕೋ ಬಹಳ ಒಳ್ಳೆಯ ವರ ನೀಡಿತು. ಆ ನಂತರ ಕಂಪನಿಗೆ ಅದೇ ಗುಣಮಟ್ಟದ ಟೊಮೆಟೋ ಹಣ್ಣು ಬೇರೆ ದೇಶಗಳಲ್ಲಿ ಲಭ್ಯವಿದ್ದುದರಿಂದ ಪಂಜಾಬ್ ಟೊಮೆಟೋ ಬೆಳೆಯನ್ನು ಕೇಳುವವರೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿತು.

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣ ಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು. ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಬಂಡವಾಳಶಾಹಿಯ ದುರಾಶೆಗೆ ಬಲಿಯಾಗಿ ಬದುಕನ್ನೇ ಕಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಭಾಗವಾಗಿ 1991 ರಿಂದ ಮುಂದಿನ 20 ವರ್ಷಗಳ ಅವಧಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ಕಾಲಾವಧಿಯಲ್ಲಿ 72 ಲಕ್ಷಕ್ಕೂ ಮೀರಿ ರೈತರು ಕೃಷಿಕ್ಷೇತ್ರಕ್ಕೆ ವಿದಾಯ ಹೇಳಿದ್ದಾರೆ. ಈ ಪರಿಸ್ಥಿತಿ ಬದಲಾಗಲೇಬೇಕು. ಇದು ನಮ್ಮ ಕಾಲ ಎದುರಿಸುತ್ತಿರುವ ಬಹು ದೊಡ್ಡ ಪಂಥಾಹ್ವಾನ ಎಂದು ಸಾಯಿನಾಥ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...