Homeಕರ್ನಾಟಕಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

ಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

- Advertisement -
- Advertisement -

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು.

ಭಾರತ ಸಂವಿಧಾನ ಸಂಘಟನಾ ಸಮಿತಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಆಡಿದ ಮಾತುಗಳನ್ನು ಉದ್ಧರಿಸುತ್ತ ಖ್ಯಾತ ಎಡಪಂಥೀಯ ಚಿಂತಕ, ಪಿ. ಸಾಯಿನಾಥ್ ‘ಭಾರತದ ಪ್ರಜಾಪ್ರಭುತ್ವದಲ್ಲಿ ಅಂತರ್ಗತವಾಗಿರುವ ದೌರ್ಬಲ್ಯದ ಬಗ್ಗೆ ಬಾಬಾ ಸಾಹೇಬರು ಬಹಳ ಹಿಂದೆಯೇ ಎಚ್ಚರಿಸಿದ್ದರು. ಸಮಾನತೆಯನ್ನು ಹೊರಗಿಟ್ಟ ಸ್ವಾತಂತ್ರ್ಯ ಬಹುಜನರ ಮೇಲೆ ಕೆಲವೇ ಕೆಲವು ಜನಗಳ ದಬ್ಬಾಳಿಕೆಗೆ ದಾರಿಮಾಡಿಕೊಡುತ್ತದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವಗಳ ಮೌಲ್ಯಗಳನ್ನು ಬೇರ್ಪಡಿಸಿ ನೋಡುವ ಹಾಗಿಲ್ಲ. ಅವುಗಳ ಪೈಕಿ ಒಂದನ್ನು ಹೊರತುಪಡಿಸಿ ಇನ್ನೊಂದು ಇರಲಾರದು’ ಎಂದು ಸಾಯಿನಾಥ್ ಬಾಬಾ ಸಾಹೇಬರನ್ನು ಉಲ್ಲೇಖಿಸಿದ್ದರು. ತನ್ನ ಮಾತು ಮುಂದುವರಿಸುತ್ತ ಸಾಯಿನಾಥ್ ಹಾಲೀ ಕೇಂದ್ರ ಸರಕಾರದ ಧೋರಣೆಗಳು ದೇಶದಲ್ಲಿ ಹಿಂದೆಂದೂ ಕಾಣದ ಅಸಮಾನತೆಗೆ ಕಾರಣವಾಗಿದೆ ಎಂದು ಹೇಳಿದರು.

ಈ ಸಂಗತಿಗಳಲ್ಲಿ ಒಂದಕ್ಕೊಂದು ಹೇಗೆ ಥಳಕು ಹಾಕಿಕೊಂಡಿದೆ ಎಂದು ಹೇಳುತ್ತ ಸಾಯಿನಾಥ್ ತನ್ನ ಮಾತಿಗೆ ಮುಸ್ಲಿಂ ಜಾನುವಾರು ಕಸಾಯಿಗಳ ನಿದರ್ಶನ ನೀಡಿದರು. ಈ ವ್ಯವಹಾರದ ಮೂಲಾಧಾರವಾಗಿರುವ ಜಾನುವಾರು ದಲ್ಲಾಳಿಗಳಲ್ಲಿ ಹೆಚ್ಚಿನವರು ಕೆಳಜಾತಿ, ವರ್ಗಗಳ ಹಿಂದುಗಳು. ಜಾನುವಾರು ಹತ್ಯೆ ನಿಷೇಧಗೊಂಡಾಗ ಮುಸ್ಲಿಂ ಕಸಾಯಿಗಳು ನಿರುದ್ಯೋಗಿಗಳಾದರು; ಹಿಂದುಳಿದ ಜಾತಿವರ್ಗಗಳವರು ತಮ್ಮ ಅರೆಕಾಲಿಕ ಉದ್ಯೋಗಗಳನ್ನು ಕಳಕಂಡರು. ಬೆಲೆಗಳು ಕುಸಿದವು. ಮಹಾರಾಷ್ಟ್ರ ರಾಜ್ಯದ ಬಹುಮುಖ್ಯ ಉದ್ಯಮಗಳಲ್ಲಿ ಒಂದಾಗಿರುವ ಕೊಲ್ಹಾಪುರಿ ಚಪ್ಪಲಿಗಳ ತಯಾರಿಕೆ ದಿವಾಳಿ ಎದ್ದಿತು. ದೇಶದ ಆರ್ಥಿಕ ಧೋರಣೆಗಳನ್ನು ದೆಹಲಿಯಲ್ಲಿ ಕೂತು ನಿರ್ಧರಿಸುವವರಿಗೆ ಗ್ರಾಮೀಣ ಉದ್ಯಮಗಳು ಹೇಗೆ ಪರಸ್ಪರ ಸಂಬಂಧ ಹೊಂದಿದ್ದು ನಿಕಟವಾಗಿ ಹೆಣೆದುಕೊಂಡಿದೆ ಎಂಬ ಕಲ್ಪನೆಯೇ ಇಲ್ಲ ಎಂದು ಸಾಯಿನಾಥ್ ಹೇಳಿದರು. ದೇಶ ಈಗ ಕೃಷಿ, ಶಿಕ್ಷಣ ಅರ್ಥವ್ಯವಸ್ಥೆ ಮತ್ತು ಉದ್ಯೋಗ ನಿರ್ಮಾಣ ಕ್ಷೇತ್ರಗಳಲ್ಲಿ ಗಂಭೀರವಾದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಅವರು ತಿಳಿಸಿದರು. ಮಂಗಳೂರಿನ ಈ ಉಪನ್ಯಾಸವನ್ನು ನಗರದ ಸೈಂಟ್ ಅಲೋಸಿಯಸ್ ಕಾಲೇಜು ಏರ್ಪಡಿಸಿತ್ತು.

ಕುಂದಾಪುರದಲ್ಲಿ ‘ಸಮುದಾಯ’ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಜಂಟಿ ಆಶ್ರಯದಲ್ಲಿ ನಡೆದ ಇನ್ನೊಂದು ಸಭೆಯಲ್ಲಿ ‘ಕಾರ್ಪೊರೇಟ್ ಫಾರ್ಮಿಂಗ್ – ಭಾರತದ ಕೃಷಿ ಬಿಕ್ಕಟ್ಟುಗಳು’ ಎಂಬ ವಿಷಯದ ಕುರಿತು ನೀಡಿದ ಉಪನ್ಯಾಸದಲ್ಲಿ ಸಾಯಿನಾಥ್ ರೈತನಿಗೆ ಆತ ಬಳಸುವ ನೆಲ ಹೊರತು ಪಡಿಸಿ, ಬೇರೆ ಯಾವುದರ ಮೇಲೂ ಹಿಡಿತವಿಲ್ಲ. ಕೃಷಿಯ ಮೂಲಭೂತ ಅಗತ್ಯಗಳಾದ ನೀರು, ಗೊಬ್ಬರ, ಬೀಜ, ಮಾರುಕಟ್ಟೆ, ಸಾರಿಗೆ – ಎಲ್ಲವೂ ಕಾರ್ಪೊರೇಟ್ ಕಂಪನಿಗಳ ನಿಯಂತ್ರಣದಲ್ಲಿವೆ. ಕಾರ್ಪೊರೇಟ್ ಕಂಪನಿಗಳು ಕೃಷಿಕ್ಷೇತ್ರವನ್ನು ಕೈವಶ ಮಾಡಿಕೊಂಡಿವೆ. ಇದರ ಪರಿಣಾಮವಾಗಿ ರೈತ, ಇಂದು, ಅಕ್ಷರಶಃ ಕಾರ್ಪೊರೇಟ್ ಹಿತಾಸಕ್ತಿಗಳ ಗುಲಾಮನಾಗಿದ್ದಾನೆ. ಒಬ್ಬ ಬಡಗಿ, ನೇಕಾರ, ಮೋಚಿ ಅಥವಾ ಅಕ್ಕಸಾಲಿಗ, ಹೀಗೆ ಯಾವ ದುಡಿಮೆಗಾರನಿಗಾದರೂ ತನ್ನ ದುಡಿಮೆಯ ವೇತನ ಎಷ್ಟು? ತಾನು ಉತ್ಪಾದಿಸಿದ ಸರಕಿನ ಬೆಲೆ ಎಷ್ಟು? ಎಂದು ನಿರ್ಧರಿಸುವ ಹಕ್ಕು ಇರುತ್ತದೆ. ಆದರೆ ಕೃಷಿ ಕ್ಷೇತ್ರದಲ್ಲಿ ಮಾತ್ರ ರೈತನ ನಿರ್ಧಾರಗಳನ್ನೂ ಆತನ ಹೆಸರಿನಲ್ಲಿ ಕಾರ್ಪೊರೇಶನ್ ಕಂಪನಿಗಳೇ ತೆಗೆದುಕೊಳ್ಳುತ್ತವೆ. ಹಾಗಾಗಿ ‘ರೈತ’ ಎಂಬ ಶಬ್ದಕ್ಕೆ ಈಗ ಯಾವ ಅರ್ಥವೂ ಉಳಿದಿಲ್ಲ. ಹಾಲೀಕೇಂದ್ರ ಸರಕಾರದ ಬಹುಮುಖ್ಯ ಆರ್ಥಿಕ ನಿರ್ಧಾರಗಳನ್ನೆ ನೋಡಿ. ನೋಟು ಅಮಾನ್ಯೀಕರಣ ಹಾಗೂ ಜಿ.ಎಸ್.ಟಿ ತೆರಿಗೆಗಳು ರೈತನ ಪರವಾಗಿಲ್ಲ. ರೈತರ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸದೆ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಗಳು ಅವು. ದೇಶದ ಕೃಷಿ ವಿಶ್ವ ವಿದ್ಯಾಲಯಗಳು ಸಹ ಈಗ ರೈತರ ಬದಲು ಕಾರ್ಪೊರೇಟ್ ಹಿತಾಸಕ್ತಿಗಳ ವಕ್ತಾರರಂತೆ ವರ್ತಿಸುತ್ತಿವೆ. ಅವು ಹೆಸರಿಗಷ್ಟೇ ‘ಸ್ವಾವಲಂಬಿ’ ವಾಸ್ತವವಾಗಿ ಅವೆಲ್ಲವೂ ಕಾರ್ಪೊರೇಟ್ ಬಂಡವಾಳಶಾಹಿಯ ಕೃಪಾಪೋಷಿತ ಸಂಸ್ಥೆಗಳು ಈ ಸನ್ನಿವೇಶದಲ್ಲಿ ಮಾರುಕಟ್ಟೆಯನ್ನೇ ಅವಲಂಬಿಸಿದ ವಾಣಿಜ್ಯ ಕೃಷಿ ಅತಂತ್ರವಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವೆನಿಲ್ಲಾ ಬೆಳೆಗೆ ವಿಪರೀತ ಬೆಲೆ ಏರಿದುದರಿಂದ ಕೇರಳ, ಮಂಗಳೂರುಗಳ ರೈತರು ಭಾರೀ ವರಮಾನ ಗಳಿಸಿದರು. ಆದರೆ ಒಮ್ಮೆ ವೆನಿಲ್ಲಾದ ಬೆಲೆ ಕುಸಿಯಲಾರಂಭಿಸಿದಾಗ ಅವುಗಳ ಮೇಲೆ ಭರವಸೆ ಇಟ್ಟಿದ್ದ ರೈತರು ದಿಕ್ಕೆಟ್ಟು ಆತ್ಮಹತ್ಯೆ ಮಾಡಿ ಕೊಳ್ಳಬೇಕಾಯಿತು. ಇದೇ ಪರಿಸ್ಥಿತಿ ಪಂಜಾಬ್‍ನ ರೈತರಿಗೂ ಎದುರಾಯಿತು. ಬಹುರಾಷ್ಟ್ರೀಯ ಕಂಪನಿ ಪೆಪ್ಸಿಕೋ ಪಂಜಾಬ್‍ನ ರೈತರು ಬೆಳೆಸಿದ ವಿಶಿಷ್ಟ ತಳಿಯ ಟೊಮೆಟೋ ಹಣ್ಣು ಕೊಳ್ಳಲಾರಂಭಿತು. ಮೊದಲ ಎರಡು ವರ್ಷ ಪಂಜಾಬ್ ರೈತರಿಗೆ ಪೆಪ್ಸಿಕೋ ಬಹಳ ಒಳ್ಳೆಯ ವರ ನೀಡಿತು. ಆ ನಂತರ ಕಂಪನಿಗೆ ಅದೇ ಗುಣಮಟ್ಟದ ಟೊಮೆಟೋ ಹಣ್ಣು ಬೇರೆ ದೇಶಗಳಲ್ಲಿ ಲಭ್ಯವಿದ್ದುದರಿಂದ ಪಂಜಾಬ್ ಟೊಮೆಟೋ ಬೆಳೆಯನ್ನು ಕೇಳುವವರೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿತು.

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣ ಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು. ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಬಂಡವಾಳಶಾಹಿಯ ದುರಾಶೆಗೆ ಬಲಿಯಾಗಿ ಬದುಕನ್ನೇ ಕಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಭಾಗವಾಗಿ 1991 ರಿಂದ ಮುಂದಿನ 20 ವರ್ಷಗಳ ಅವಧಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ಕಾಲಾವಧಿಯಲ್ಲಿ 72 ಲಕ್ಷಕ್ಕೂ ಮೀರಿ ರೈತರು ಕೃಷಿಕ್ಷೇತ್ರಕ್ಕೆ ವಿದಾಯ ಹೇಳಿದ್ದಾರೆ. ಈ ಪರಿಸ್ಥಿತಿ ಬದಲಾಗಲೇಬೇಕು. ಇದು ನಮ್ಮ ಕಾಲ ಎದುರಿಸುತ್ತಿರುವ ಬಹು ದೊಡ್ಡ ಪಂಥಾಹ್ವಾನ ಎಂದು ಸಾಯಿನಾಥ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...