Homeಕರ್ನಾಟಕಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

ಪಿ.ಸಾಯಿನಾಥ್ ಉಪನ್ಯಾಸ; ಕರಾವಳಿಯಲ್ಲಿ ಮೊಳಗಿದ ಎಡಪಂಥದ ಕಹಳೆ

- Advertisement -
- Advertisement -

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು.

ಭಾರತ ಸಂವಿಧಾನ ಸಂಘಟನಾ ಸಮಿತಿಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಆಡಿದ ಮಾತುಗಳನ್ನು ಉದ್ಧರಿಸುತ್ತ ಖ್ಯಾತ ಎಡಪಂಥೀಯ ಚಿಂತಕ, ಪಿ. ಸಾಯಿನಾಥ್ ‘ಭಾರತದ ಪ್ರಜಾಪ್ರಭುತ್ವದಲ್ಲಿ ಅಂತರ್ಗತವಾಗಿರುವ ದೌರ್ಬಲ್ಯದ ಬಗ್ಗೆ ಬಾಬಾ ಸಾಹೇಬರು ಬಹಳ ಹಿಂದೆಯೇ ಎಚ್ಚರಿಸಿದ್ದರು. ಸಮಾನತೆಯನ್ನು ಹೊರಗಿಟ್ಟ ಸ್ವಾತಂತ್ರ್ಯ ಬಹುಜನರ ಮೇಲೆ ಕೆಲವೇ ಕೆಲವು ಜನಗಳ ದಬ್ಬಾಳಿಕೆಗೆ ದಾರಿಮಾಡಿಕೊಡುತ್ತದೆ. ಸ್ವಾತಂತ್ರ್ಯ ಸಮಾನತೆ ಮತ್ತು ಸಹೋದರತ್ವಗಳ ಮೌಲ್ಯಗಳನ್ನು ಬೇರ್ಪಡಿಸಿ ನೋಡುವ ಹಾಗಿಲ್ಲ. ಅವುಗಳ ಪೈಕಿ ಒಂದನ್ನು ಹೊರತುಪಡಿಸಿ ಇನ್ನೊಂದು ಇರಲಾರದು’ ಎಂದು ಸಾಯಿನಾಥ್ ಬಾಬಾ ಸಾಹೇಬರನ್ನು ಉಲ್ಲೇಖಿಸಿದ್ದರು. ತನ್ನ ಮಾತು ಮುಂದುವರಿಸುತ್ತ ಸಾಯಿನಾಥ್ ಹಾಲೀ ಕೇಂದ್ರ ಸರಕಾರದ ಧೋರಣೆಗಳು ದೇಶದಲ್ಲಿ ಹಿಂದೆಂದೂ ಕಾಣದ ಅಸಮಾನತೆಗೆ ಕಾರಣವಾಗಿದೆ ಎಂದು ಹೇಳಿದರು.

ಈ ಸಂಗತಿಗಳಲ್ಲಿ ಒಂದಕ್ಕೊಂದು ಹೇಗೆ ಥಳಕು ಹಾಕಿಕೊಂಡಿದೆ ಎಂದು ಹೇಳುತ್ತ ಸಾಯಿನಾಥ್ ತನ್ನ ಮಾತಿಗೆ ಮುಸ್ಲಿಂ ಜಾನುವಾರು ಕಸಾಯಿಗಳ ನಿದರ್ಶನ ನೀಡಿದರು. ಈ ವ್ಯವಹಾರದ ಮೂಲಾಧಾರವಾಗಿರುವ ಜಾನುವಾರು ದಲ್ಲಾಳಿಗಳಲ್ಲಿ ಹೆಚ್ಚಿನವರು ಕೆಳಜಾತಿ, ವರ್ಗಗಳ ಹಿಂದುಗಳು. ಜಾನುವಾರು ಹತ್ಯೆ ನಿಷೇಧಗೊಂಡಾಗ ಮುಸ್ಲಿಂ ಕಸಾಯಿಗಳು ನಿರುದ್ಯೋಗಿಗಳಾದರು; ಹಿಂದುಳಿದ ಜಾತಿವರ್ಗಗಳವರು ತಮ್ಮ ಅರೆಕಾಲಿಕ ಉದ್ಯೋಗಗಳನ್ನು ಕಳಕಂಡರು. ಬೆಲೆಗಳು ಕುಸಿದವು. ಮಹಾರಾಷ್ಟ್ರ ರಾಜ್ಯದ ಬಹುಮುಖ್ಯ ಉದ್ಯಮಗಳಲ್ಲಿ ಒಂದಾಗಿರುವ ಕೊಲ್ಹಾಪುರಿ ಚಪ್ಪಲಿಗಳ ತಯಾರಿಕೆ ದಿವಾಳಿ ಎದ್ದಿತು. ದೇಶದ ಆರ್ಥಿಕ ಧೋರಣೆಗಳನ್ನು ದೆಹಲಿಯಲ್ಲಿ ಕೂತು ನಿರ್ಧರಿಸುವವರಿಗೆ ಗ್ರಾಮೀಣ ಉದ್ಯಮಗಳು ಹೇಗೆ ಪರಸ್ಪರ ಸಂಬಂಧ ಹೊಂದಿದ್ದು ನಿಕಟವಾಗಿ ಹೆಣೆದುಕೊಂಡಿದೆ ಎಂಬ ಕಲ್ಪನೆಯೇ ಇಲ್ಲ ಎಂದು ಸಾಯಿನಾಥ್ ಹೇಳಿದರು. ದೇಶ ಈಗ ಕೃಷಿ, ಶಿಕ್ಷಣ ಅರ್ಥವ್ಯವಸ್ಥೆ ಮತ್ತು ಉದ್ಯೋಗ ನಿರ್ಮಾಣ ಕ್ಷೇತ್ರಗಳಲ್ಲಿ ಗಂಭೀರವಾದ ಬಿಕ್ಕಟ್ಟು ಎದುರಿಸುತ್ತಿದೆ ಎಂದು ಅವರು ತಿಳಿಸಿದರು. ಮಂಗಳೂರಿನ ಈ ಉಪನ್ಯಾಸವನ್ನು ನಗರದ ಸೈಂಟ್ ಅಲೋಸಿಯಸ್ ಕಾಲೇಜು ಏರ್ಪಡಿಸಿತ್ತು.

ಕುಂದಾಪುರದಲ್ಲಿ ‘ಸಮುದಾಯ’ ಹಾಗೂ ತಲ್ಲೂರು ಫ್ಯಾಮಿಲಿ ಟ್ರಸ್ಟ್‍ನ ಜಂಟಿ ಆಶ್ರಯದಲ್ಲಿ ನಡೆದ ಇನ್ನೊಂದು ಸಭೆಯಲ್ಲಿ ‘ಕಾರ್ಪೊರೇಟ್ ಫಾರ್ಮಿಂಗ್ – ಭಾರತದ ಕೃಷಿ ಬಿಕ್ಕಟ್ಟುಗಳು’ ಎಂಬ ವಿಷಯದ ಕುರಿತು ನೀಡಿದ ಉಪನ್ಯಾಸದಲ್ಲಿ ಸಾಯಿನಾಥ್ ರೈತನಿಗೆ ಆತ ಬಳಸುವ ನೆಲ ಹೊರತು ಪಡಿಸಿ, ಬೇರೆ ಯಾವುದರ ಮೇಲೂ ಹಿಡಿತವಿಲ್ಲ. ಕೃಷಿಯ ಮೂಲಭೂತ ಅಗತ್ಯಗಳಾದ ನೀರು, ಗೊಬ್ಬರ, ಬೀಜ, ಮಾರುಕಟ್ಟೆ, ಸಾರಿಗೆ – ಎಲ್ಲವೂ ಕಾರ್ಪೊರೇಟ್ ಕಂಪನಿಗಳ ನಿಯಂತ್ರಣದಲ್ಲಿವೆ. ಕಾರ್ಪೊರೇಟ್ ಕಂಪನಿಗಳು ಕೃಷಿಕ್ಷೇತ್ರವನ್ನು ಕೈವಶ ಮಾಡಿಕೊಂಡಿವೆ. ಇದರ ಪರಿಣಾಮವಾಗಿ ರೈತ, ಇಂದು, ಅಕ್ಷರಶಃ ಕಾರ್ಪೊರೇಟ್ ಹಿತಾಸಕ್ತಿಗಳ ಗುಲಾಮನಾಗಿದ್ದಾನೆ. ಒಬ್ಬ ಬಡಗಿ, ನೇಕಾರ, ಮೋಚಿ ಅಥವಾ ಅಕ್ಕಸಾಲಿಗ, ಹೀಗೆ ಯಾವ ದುಡಿಮೆಗಾರನಿಗಾದರೂ ತನ್ನ ದುಡಿಮೆಯ ವೇತನ ಎಷ್ಟು? ತಾನು ಉತ್ಪಾದಿಸಿದ ಸರಕಿನ ಬೆಲೆ ಎಷ್ಟು? ಎಂದು ನಿರ್ಧರಿಸುವ ಹಕ್ಕು ಇರುತ್ತದೆ. ಆದರೆ ಕೃಷಿ ಕ್ಷೇತ್ರದಲ್ಲಿ ಮಾತ್ರ ರೈತನ ನಿರ್ಧಾರಗಳನ್ನೂ ಆತನ ಹೆಸರಿನಲ್ಲಿ ಕಾರ್ಪೊರೇಶನ್ ಕಂಪನಿಗಳೇ ತೆಗೆದುಕೊಳ್ಳುತ್ತವೆ. ಹಾಗಾಗಿ ‘ರೈತ’ ಎಂಬ ಶಬ್ದಕ್ಕೆ ಈಗ ಯಾವ ಅರ್ಥವೂ ಉಳಿದಿಲ್ಲ. ಹಾಲೀಕೇಂದ್ರ ಸರಕಾರದ ಬಹುಮುಖ್ಯ ಆರ್ಥಿಕ ನಿರ್ಧಾರಗಳನ್ನೆ ನೋಡಿ. ನೋಟು ಅಮಾನ್ಯೀಕರಣ ಹಾಗೂ ಜಿ.ಎಸ್.ಟಿ ತೆರಿಗೆಗಳು ರೈತನ ಪರವಾಗಿಲ್ಲ. ರೈತರ ಸಂಘಟನೆಗಳ ಜೊತೆ ಸಮಾಲೋಚನೆ ನಡೆಸದೆ ತೆಗೆದುಕೊಂಡ ಏಕಪಕ್ಷೀಯ ನಿರ್ಧಾರಗಳು ಅವು. ದೇಶದ ಕೃಷಿ ವಿಶ್ವ ವಿದ್ಯಾಲಯಗಳು ಸಹ ಈಗ ರೈತರ ಬದಲು ಕಾರ್ಪೊರೇಟ್ ಹಿತಾಸಕ್ತಿಗಳ ವಕ್ತಾರರಂತೆ ವರ್ತಿಸುತ್ತಿವೆ. ಅವು ಹೆಸರಿಗಷ್ಟೇ ‘ಸ್ವಾವಲಂಬಿ’ ವಾಸ್ತವವಾಗಿ ಅವೆಲ್ಲವೂ ಕಾರ್ಪೊರೇಟ್ ಬಂಡವಾಳಶಾಹಿಯ ಕೃಪಾಪೋಷಿತ ಸಂಸ್ಥೆಗಳು ಈ ಸನ್ನಿವೇಶದಲ್ಲಿ ಮಾರುಕಟ್ಟೆಯನ್ನೇ ಅವಲಂಬಿಸಿದ ವಾಣಿಜ್ಯ ಕೃಷಿ ಅತಂತ್ರವಾಗುತ್ತಿದೆ. ಕೆಲವು ವರ್ಷಗಳ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ವೆನಿಲ್ಲಾ ಬೆಳೆಗೆ ವಿಪರೀತ ಬೆಲೆ ಏರಿದುದರಿಂದ ಕೇರಳ, ಮಂಗಳೂರುಗಳ ರೈತರು ಭಾರೀ ವರಮಾನ ಗಳಿಸಿದರು. ಆದರೆ ಒಮ್ಮೆ ವೆನಿಲ್ಲಾದ ಬೆಲೆ ಕುಸಿಯಲಾರಂಭಿಸಿದಾಗ ಅವುಗಳ ಮೇಲೆ ಭರವಸೆ ಇಟ್ಟಿದ್ದ ರೈತರು ದಿಕ್ಕೆಟ್ಟು ಆತ್ಮಹತ್ಯೆ ಮಾಡಿ ಕೊಳ್ಳಬೇಕಾಯಿತು. ಇದೇ ಪರಿಸ್ಥಿತಿ ಪಂಜಾಬ್‍ನ ರೈತರಿಗೂ ಎದುರಾಯಿತು. ಬಹುರಾಷ್ಟ್ರೀಯ ಕಂಪನಿ ಪೆಪ್ಸಿಕೋ ಪಂಜಾಬ್‍ನ ರೈತರು ಬೆಳೆಸಿದ ವಿಶಿಷ್ಟ ತಳಿಯ ಟೊಮೆಟೋ ಹಣ್ಣು ಕೊಳ್ಳಲಾರಂಭಿತು. ಮೊದಲ ಎರಡು ವರ್ಷ ಪಂಜಾಬ್ ರೈತರಿಗೆ ಪೆಪ್ಸಿಕೋ ಬಹಳ ಒಳ್ಳೆಯ ವರ ನೀಡಿತು. ಆ ನಂತರ ಕಂಪನಿಗೆ ಅದೇ ಗುಣಮಟ್ಟದ ಟೊಮೆಟೋ ಹಣ್ಣು ಬೇರೆ ದೇಶಗಳಲ್ಲಿ ಲಭ್ಯವಿದ್ದುದರಿಂದ ಪಂಜಾಬ್ ಟೊಮೆಟೋ ಬೆಳೆಯನ್ನು ಕೇಳುವವರೇ ಇಲ್ಲ ಎಂಬ ಪರಿಸ್ಥಿತಿ ತಲೆದೋರಿತು.

ಈಗ ಈ ಎಲ್ಲ ವಿದ್ಯಮಾನಗಳ ಜೊತೆ ಭಾರತದಲ್ಲಿ ಬಹಳ ಹಿಂದೆಯೇ ರಾಷ್ಟ್ರೀಕರಣ ಗೊಂಡಿದ್ದ ಬ್ಯಾಂಕುಗಳ ಖಾಸಗೀಕರಣದ ಪ್ರಸ್ತಾಪಗಳು ಮುನ್ನೆಲೆಗೆ ಬರುತ್ತಿದೆ. ರೈತನ ವಿಶ್ವವೇ ಕುಸಿದಿದೆ, ರೈತನ ಹತಾಶ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಳವಳಕಾರಿಯಾಗಬಹುದು. ರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಬಂಡವಾಳಶಾಹಿಯ ದುರಾಶೆಗೆ ಬಲಿಯಾಗಿ ಬದುಕನ್ನೇ ಕಳೆದುಕೊಳ್ಳುತ್ತಿರುವ ಪ್ರಕ್ರಿಯೆಯ ಭಾಗವಾಗಿ 1991 ರಿಂದ ಮುಂದಿನ 20 ವರ್ಷಗಳ ಅವಧಿಯಲ್ಲಿ 3 ಲಕ್ಷಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೇ ಕಾಲಾವಧಿಯಲ್ಲಿ 72 ಲಕ್ಷಕ್ಕೂ ಮೀರಿ ರೈತರು ಕೃಷಿಕ್ಷೇತ್ರಕ್ಕೆ ವಿದಾಯ ಹೇಳಿದ್ದಾರೆ. ಈ ಪರಿಸ್ಥಿತಿ ಬದಲಾಗಲೇಬೇಕು. ಇದು ನಮ್ಮ ಕಾಲ ಎದುರಿಸುತ್ತಿರುವ ಬಹು ದೊಡ್ಡ ಪಂಥಾಹ್ವಾನ ಎಂದು ಸಾಯಿನಾಥ್ ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...