Homeಚಳವಳಿಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

- Advertisement -
- Advertisement -

ದಲಿತ, ಎಡ ಮೈತ್ರಿಯು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ್ದು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಡಳಿತದಿಂದ ತೊಂದರೆಗೀಡಾದ ಒಂದು ವರ್ಷದ ನಂತರ ಮತ್ತೆ ಎಡ ಮತ್ತು ದಲಿತ ಒಕ್ಕೂಟಕ್ಕೆ ಜಯ ಸಿಕ್ಕಿದೆ.

ಗುರುವಾರ ಬಿಗಿ ಭದ್ರತೆಯ ಮಧ್ಯೆ ಚುನಾವಣೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಗಚಿಬೌಲಿಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು. ಅಂತಿಮ ಫಲಿತಾಂಶಗಳನ್ನು ಸಂಜೆ ಘೋಷಿಸಲಾಯಿತು.

ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ದಲಿತ ವಿದ್ಯಾರ್ಥಿ ಸಂಘ (ಡಿಎಸ್‌ಯು), ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್‌ಎ) ಮತ್ತು ಬುಡಕಟ್ಟು ವಿದ್ಯಾರ್ಥಿಗಳ ವೇದಿಕೆ (ಟಿಎಸ್‌ಎಫ್) ಮೈತ್ರಿಯ ಎಡಪಂಥೀಯ, ದಲಿತ ಮತ್ತು ಆದಿವಾಸಿ ಸಂಘಟನೆಗಳೊಂದಿಗೆ ಸಂಯೋಜಿತ ವಿದ್ಯಾರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ವರ್ಷ, ಎಸ್‌ಎಫ್‌ಐ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಿ ಆದಿವಾಸಿ, ದಲಿತ, ಬಹುಜನ, ಮುಸ್ಲಿಂ ಮತ್ತು ಬುಡಕಟ್ಟು ಸಂಸ್ಥೆಗಳಿಂದ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿತು. ತ್ರಿಕೋನ ಸ್ಪರ್ಧೆ ಏರ್ಪಟ್ಟು ಕೊನೆಗೆ ಎಬಿವಿಪಿ ಚುನಾವಣೆಯಲ್ಲಿ ಜಯಗಳಿಸಿತ್ತು. ಆ ಮೂಲಕ ಹಿಂದಿನ ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಸಂಘದಲ್ಲಿ ಅಧಿಕಾರಕ್ಕೆ ಬಂದಿತ್ತು.

ಆದರೆ ಈ ಬಾರಿ ಎಸ್‌ಎಫ್‌ಐ ಮತ್ತೆ ದಲಿತ, ಎಡ ಮತ್ತು ಆದಿವಾಸಿ ಗುಂಪುಗಳ ಮೈತ್ರಿಕೂಟಕ್ಕೆ ಮರಳಿತ್ತು. ಹಾಗಾಗಿ ಆರಾಮದಾಯಕ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿತು. ಎಬಿವಿಪಿಯು ಸಹ ಇತರೆ ಹಿಂದುಳಿದ ವರ್ಗಗಳ ಒಕ್ಕೂಟ (ಒಬಿಸಿಎಫ್) ಮತ್ತು ಹೊಸದಾಗಿ ರೂಪುಗೊಂಡ ಸೆವಲಾಲ್ ವಿದ್ಯಾರ್ಥಿ ದಳ ಎಂಬ ಎರಡು ವಿದ್ಯಾರ್ಥಿ ಗುಂಪುಗಳೊಂದಿಗೆ ಕೈಜೋಡಿಸಿತು. ಆದರೂ ಎರಡನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಎಸ್‌ಎಫ್‌ಐಯ ಅಭಿಷೇಕ್ ನಂದನ್ ಅಧ್ಯಕ್ಷ ಹುದ್ದೆಯನ್ನು ಗೆದ್ದರೆ, ಡಿಎಸ್‌ಯುನಿಂದ ಎಂ.ಶ್ರೀ ಚರಣ್ ಉಪಾಧ್ಯಕ್ಷರಾಗಿಯೂ, ಎಎಸ್‌ಎಯಿಂದ ಗೋಪಿ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಟಿಎಸ್‌ಎಫ್‌ನ ರಾಥೋದ್ ಪ್ರದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್‌ಎಫ್‌ಐನ ಸೊಹೆಲ್ ಅಹ್ಮದ್ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಮತ್ತು ಎಎಸ್‌ಎಯ ಪ್ರಿಯಾಂಕಾ ಬದ್ರಾಸೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿ ಹುದ್ದೆಯನ್ನು ಜಯಸಿದ್ದಾರೆ.

“ಈ ವಿಜಯವು ರೋಹಿತ್ ವೇಮುಲಾ ಅವರಿಗೆ ನ್ಯಾಯಕ್ಕಾಗಿ ಹೋರಾಡುವ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳಸಮುದಾಯದವರನ್ನು ಹೊರದೂಡುವ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳ ವಿರುದ್ಧದ ಹೋರಾಟಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಧೈರ್ಯ ತುಂಬುತ್ತದೆ” ಎಂದು ಎಎಸ್ಎ ಅಧ್ಯಕ್ಷ ಎಂ ಇನಿಯವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಯು ಸಹ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣೆಯ ಹಾದಿಯಲ್ಲಿ ಮಹತ್ವವನ್ನು ಪಡೆದುಕೊಂಡಿತ್ತು. ಇದು ಎಡ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಕಠಿಣ ಯುದ್ಧಕ್ಕೆ ಸಾಕ್ಷಿಯಾಯಿತು.

ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪದ ಮೇಲೆ 2016 ರ ಜನವರಿ 17 ರಂದು ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ನಂತರ ಹೈದರಾಬಾದ್ ವಿಶ್ವವಿದ್ಯಾಲಯವು ಕಳೆದ ಮೂರು ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಚಳವಳಿಗಳು ಗರಿಗೆದರಿದ್ದು ಜಾತಿ ತಾರತಮ್ಯದ ವಿರುದ್ಧ ಆಕ್ರೋಶವೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...