Homeಚಳವಳಿಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

- Advertisement -
- Advertisement -

ದಲಿತ, ಎಡ ಮೈತ್ರಿಯು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ್ದು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಡಳಿತದಿಂದ ತೊಂದರೆಗೀಡಾದ ಒಂದು ವರ್ಷದ ನಂತರ ಮತ್ತೆ ಎಡ ಮತ್ತು ದಲಿತ ಒಕ್ಕೂಟಕ್ಕೆ ಜಯ ಸಿಕ್ಕಿದೆ.

ಗುರುವಾರ ಬಿಗಿ ಭದ್ರತೆಯ ಮಧ್ಯೆ ಚುನಾವಣೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಗಚಿಬೌಲಿಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು. ಅಂತಿಮ ಫಲಿತಾಂಶಗಳನ್ನು ಸಂಜೆ ಘೋಷಿಸಲಾಯಿತು.

ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ದಲಿತ ವಿದ್ಯಾರ್ಥಿ ಸಂಘ (ಡಿಎಸ್‌ಯು), ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್‌ಎ) ಮತ್ತು ಬುಡಕಟ್ಟು ವಿದ್ಯಾರ್ಥಿಗಳ ವೇದಿಕೆ (ಟಿಎಸ್‌ಎಫ್) ಮೈತ್ರಿಯ ಎಡಪಂಥೀಯ, ದಲಿತ ಮತ್ತು ಆದಿವಾಸಿ ಸಂಘಟನೆಗಳೊಂದಿಗೆ ಸಂಯೋಜಿತ ವಿದ್ಯಾರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ವರ್ಷ, ಎಸ್‌ಎಫ್‌ಐ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಿ ಆದಿವಾಸಿ, ದಲಿತ, ಬಹುಜನ, ಮುಸ್ಲಿಂ ಮತ್ತು ಬುಡಕಟ್ಟು ಸಂಸ್ಥೆಗಳಿಂದ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿತು. ತ್ರಿಕೋನ ಸ್ಪರ್ಧೆ ಏರ್ಪಟ್ಟು ಕೊನೆಗೆ ಎಬಿವಿಪಿ ಚುನಾವಣೆಯಲ್ಲಿ ಜಯಗಳಿಸಿತ್ತು. ಆ ಮೂಲಕ ಹಿಂದಿನ ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಸಂಘದಲ್ಲಿ ಅಧಿಕಾರಕ್ಕೆ ಬಂದಿತ್ತು.

ಆದರೆ ಈ ಬಾರಿ ಎಸ್‌ಎಫ್‌ಐ ಮತ್ತೆ ದಲಿತ, ಎಡ ಮತ್ತು ಆದಿವಾಸಿ ಗುಂಪುಗಳ ಮೈತ್ರಿಕೂಟಕ್ಕೆ ಮರಳಿತ್ತು. ಹಾಗಾಗಿ ಆರಾಮದಾಯಕ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿತು. ಎಬಿವಿಪಿಯು ಸಹ ಇತರೆ ಹಿಂದುಳಿದ ವರ್ಗಗಳ ಒಕ್ಕೂಟ (ಒಬಿಸಿಎಫ್) ಮತ್ತು ಹೊಸದಾಗಿ ರೂಪುಗೊಂಡ ಸೆವಲಾಲ್ ವಿದ್ಯಾರ್ಥಿ ದಳ ಎಂಬ ಎರಡು ವಿದ್ಯಾರ್ಥಿ ಗುಂಪುಗಳೊಂದಿಗೆ ಕೈಜೋಡಿಸಿತು. ಆದರೂ ಎರಡನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಎಸ್‌ಎಫ್‌ಐಯ ಅಭಿಷೇಕ್ ನಂದನ್ ಅಧ್ಯಕ್ಷ ಹುದ್ದೆಯನ್ನು ಗೆದ್ದರೆ, ಡಿಎಸ್‌ಯುನಿಂದ ಎಂ.ಶ್ರೀ ಚರಣ್ ಉಪಾಧ್ಯಕ್ಷರಾಗಿಯೂ, ಎಎಸ್‌ಎಯಿಂದ ಗೋಪಿ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಟಿಎಸ್‌ಎಫ್‌ನ ರಾಥೋದ್ ಪ್ರದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್‌ಎಫ್‌ಐನ ಸೊಹೆಲ್ ಅಹ್ಮದ್ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಮತ್ತು ಎಎಸ್‌ಎಯ ಪ್ರಿಯಾಂಕಾ ಬದ್ರಾಸೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿ ಹುದ್ದೆಯನ್ನು ಜಯಸಿದ್ದಾರೆ.

“ಈ ವಿಜಯವು ರೋಹಿತ್ ವೇಮುಲಾ ಅವರಿಗೆ ನ್ಯಾಯಕ್ಕಾಗಿ ಹೋರಾಡುವ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳಸಮುದಾಯದವರನ್ನು ಹೊರದೂಡುವ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳ ವಿರುದ್ಧದ ಹೋರಾಟಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಧೈರ್ಯ ತುಂಬುತ್ತದೆ” ಎಂದು ಎಎಸ್ಎ ಅಧ್ಯಕ್ಷ ಎಂ ಇನಿಯವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಯು ಸಹ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣೆಯ ಹಾದಿಯಲ್ಲಿ ಮಹತ್ವವನ್ನು ಪಡೆದುಕೊಂಡಿತ್ತು. ಇದು ಎಡ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಕಠಿಣ ಯುದ್ಧಕ್ಕೆ ಸಾಕ್ಷಿಯಾಯಿತು.

ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪದ ಮೇಲೆ 2016 ರ ಜನವರಿ 17 ರಂದು ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ನಂತರ ಹೈದರಾಬಾದ್ ವಿಶ್ವವಿದ್ಯಾಲಯವು ಕಳೆದ ಮೂರು ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಚಳವಳಿಗಳು ಗರಿಗೆದರಿದ್ದು ಜಾತಿ ತಾರತಮ್ಯದ ವಿರುದ್ಧ ಆಕ್ರೋಶವೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...