Homeಚಳವಳಿಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

- Advertisement -
- Advertisement -

ದಲಿತ, ಎಡ ಮೈತ್ರಿಯು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ್ದು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಡಳಿತದಿಂದ ತೊಂದರೆಗೀಡಾದ ಒಂದು ವರ್ಷದ ನಂತರ ಮತ್ತೆ ಎಡ ಮತ್ತು ದಲಿತ ಒಕ್ಕೂಟಕ್ಕೆ ಜಯ ಸಿಕ್ಕಿದೆ.

ಗುರುವಾರ ಬಿಗಿ ಭದ್ರತೆಯ ಮಧ್ಯೆ ಚುನಾವಣೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಗಚಿಬೌಲಿಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು. ಅಂತಿಮ ಫಲಿತಾಂಶಗಳನ್ನು ಸಂಜೆ ಘೋಷಿಸಲಾಯಿತು.

ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ದಲಿತ ವಿದ್ಯಾರ್ಥಿ ಸಂಘ (ಡಿಎಸ್‌ಯು), ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್‌ಎ) ಮತ್ತು ಬುಡಕಟ್ಟು ವಿದ್ಯಾರ್ಥಿಗಳ ವೇದಿಕೆ (ಟಿಎಸ್‌ಎಫ್) ಮೈತ್ರಿಯ ಎಡಪಂಥೀಯ, ದಲಿತ ಮತ್ತು ಆದಿವಾಸಿ ಸಂಘಟನೆಗಳೊಂದಿಗೆ ಸಂಯೋಜಿತ ವಿದ್ಯಾರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ವರ್ಷ, ಎಸ್‌ಎಫ್‌ಐ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಿ ಆದಿವಾಸಿ, ದಲಿತ, ಬಹುಜನ, ಮುಸ್ಲಿಂ ಮತ್ತು ಬುಡಕಟ್ಟು ಸಂಸ್ಥೆಗಳಿಂದ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿತು. ತ್ರಿಕೋನ ಸ್ಪರ್ಧೆ ಏರ್ಪಟ್ಟು ಕೊನೆಗೆ ಎಬಿವಿಪಿ ಚುನಾವಣೆಯಲ್ಲಿ ಜಯಗಳಿಸಿತ್ತು. ಆ ಮೂಲಕ ಹಿಂದಿನ ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಸಂಘದಲ್ಲಿ ಅಧಿಕಾರಕ್ಕೆ ಬಂದಿತ್ತು.

ಆದರೆ ಈ ಬಾರಿ ಎಸ್‌ಎಫ್‌ಐ ಮತ್ತೆ ದಲಿತ, ಎಡ ಮತ್ತು ಆದಿವಾಸಿ ಗುಂಪುಗಳ ಮೈತ್ರಿಕೂಟಕ್ಕೆ ಮರಳಿತ್ತು. ಹಾಗಾಗಿ ಆರಾಮದಾಯಕ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿತು. ಎಬಿವಿಪಿಯು ಸಹ ಇತರೆ ಹಿಂದುಳಿದ ವರ್ಗಗಳ ಒಕ್ಕೂಟ (ಒಬಿಸಿಎಫ್) ಮತ್ತು ಹೊಸದಾಗಿ ರೂಪುಗೊಂಡ ಸೆವಲಾಲ್ ವಿದ್ಯಾರ್ಥಿ ದಳ ಎಂಬ ಎರಡು ವಿದ್ಯಾರ್ಥಿ ಗುಂಪುಗಳೊಂದಿಗೆ ಕೈಜೋಡಿಸಿತು. ಆದರೂ ಎರಡನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಎಸ್‌ಎಫ್‌ಐಯ ಅಭಿಷೇಕ್ ನಂದನ್ ಅಧ್ಯಕ್ಷ ಹುದ್ದೆಯನ್ನು ಗೆದ್ದರೆ, ಡಿಎಸ್‌ಯುನಿಂದ ಎಂ.ಶ್ರೀ ಚರಣ್ ಉಪಾಧ್ಯಕ್ಷರಾಗಿಯೂ, ಎಎಸ್‌ಎಯಿಂದ ಗೋಪಿ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಟಿಎಸ್‌ಎಫ್‌ನ ರಾಥೋದ್ ಪ್ರದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್‌ಎಫ್‌ಐನ ಸೊಹೆಲ್ ಅಹ್ಮದ್ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಮತ್ತು ಎಎಸ್‌ಎಯ ಪ್ರಿಯಾಂಕಾ ಬದ್ರಾಸೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿ ಹುದ್ದೆಯನ್ನು ಜಯಸಿದ್ದಾರೆ.

“ಈ ವಿಜಯವು ರೋಹಿತ್ ವೇಮುಲಾ ಅವರಿಗೆ ನ್ಯಾಯಕ್ಕಾಗಿ ಹೋರಾಡುವ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳಸಮುದಾಯದವರನ್ನು ಹೊರದೂಡುವ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳ ವಿರುದ್ಧದ ಹೋರಾಟಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಧೈರ್ಯ ತುಂಬುತ್ತದೆ” ಎಂದು ಎಎಸ್ಎ ಅಧ್ಯಕ್ಷ ಎಂ ಇನಿಯವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಯು ಸಹ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣೆಯ ಹಾದಿಯಲ್ಲಿ ಮಹತ್ವವನ್ನು ಪಡೆದುಕೊಂಡಿತ್ತು. ಇದು ಎಡ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಕಠಿಣ ಯುದ್ಧಕ್ಕೆ ಸಾಕ್ಷಿಯಾಯಿತು.

ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪದ ಮೇಲೆ 2016 ರ ಜನವರಿ 17 ರಂದು ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ನಂತರ ಹೈದರಾಬಾದ್ ವಿಶ್ವವಿದ್ಯಾಲಯವು ಕಳೆದ ಮೂರು ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಚಳವಳಿಗಳು ಗರಿಗೆದರಿದ್ದು ಜಾತಿ ತಾರತಮ್ಯದ ವಿರುದ್ಧ ಆಕ್ರೋಶವೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...