Homeಚಳವಳಿಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

- Advertisement -
- Advertisement -

ದಲಿತ, ಎಡ ಮೈತ್ರಿಯು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ್ದು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಡಳಿತದಿಂದ ತೊಂದರೆಗೀಡಾದ ಒಂದು ವರ್ಷದ ನಂತರ ಮತ್ತೆ ಎಡ ಮತ್ತು ದಲಿತ ಒಕ್ಕೂಟಕ್ಕೆ ಜಯ ಸಿಕ್ಕಿದೆ.

ಗುರುವಾರ ಬಿಗಿ ಭದ್ರತೆಯ ಮಧ್ಯೆ ಚುನಾವಣೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಗಚಿಬೌಲಿಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು. ಅಂತಿಮ ಫಲಿತಾಂಶಗಳನ್ನು ಸಂಜೆ ಘೋಷಿಸಲಾಯಿತು.

ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ದಲಿತ ವಿದ್ಯಾರ್ಥಿ ಸಂಘ (ಡಿಎಸ್‌ಯು), ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್‌ಎ) ಮತ್ತು ಬುಡಕಟ್ಟು ವಿದ್ಯಾರ್ಥಿಗಳ ವೇದಿಕೆ (ಟಿಎಸ್‌ಎಫ್) ಮೈತ್ರಿಯ ಎಡಪಂಥೀಯ, ದಲಿತ ಮತ್ತು ಆದಿವಾಸಿ ಸಂಘಟನೆಗಳೊಂದಿಗೆ ಸಂಯೋಜಿತ ವಿದ್ಯಾರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ವರ್ಷ, ಎಸ್‌ಎಫ್‌ಐ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಿ ಆದಿವಾಸಿ, ದಲಿತ, ಬಹುಜನ, ಮುಸ್ಲಿಂ ಮತ್ತು ಬುಡಕಟ್ಟು ಸಂಸ್ಥೆಗಳಿಂದ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿತು. ತ್ರಿಕೋನ ಸ್ಪರ್ಧೆ ಏರ್ಪಟ್ಟು ಕೊನೆಗೆ ಎಬಿವಿಪಿ ಚುನಾವಣೆಯಲ್ಲಿ ಜಯಗಳಿಸಿತ್ತು. ಆ ಮೂಲಕ ಹಿಂದಿನ ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಸಂಘದಲ್ಲಿ ಅಧಿಕಾರಕ್ಕೆ ಬಂದಿತ್ತು.

ಆದರೆ ಈ ಬಾರಿ ಎಸ್‌ಎಫ್‌ಐ ಮತ್ತೆ ದಲಿತ, ಎಡ ಮತ್ತು ಆದಿವಾಸಿ ಗುಂಪುಗಳ ಮೈತ್ರಿಕೂಟಕ್ಕೆ ಮರಳಿತ್ತು. ಹಾಗಾಗಿ ಆರಾಮದಾಯಕ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿತು. ಎಬಿವಿಪಿಯು ಸಹ ಇತರೆ ಹಿಂದುಳಿದ ವರ್ಗಗಳ ಒಕ್ಕೂಟ (ಒಬಿಸಿಎಫ್) ಮತ್ತು ಹೊಸದಾಗಿ ರೂಪುಗೊಂಡ ಸೆವಲಾಲ್ ವಿದ್ಯಾರ್ಥಿ ದಳ ಎಂಬ ಎರಡು ವಿದ್ಯಾರ್ಥಿ ಗುಂಪುಗಳೊಂದಿಗೆ ಕೈಜೋಡಿಸಿತು. ಆದರೂ ಎರಡನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಎಸ್‌ಎಫ್‌ಐಯ ಅಭಿಷೇಕ್ ನಂದನ್ ಅಧ್ಯಕ್ಷ ಹುದ್ದೆಯನ್ನು ಗೆದ್ದರೆ, ಡಿಎಸ್‌ಯುನಿಂದ ಎಂ.ಶ್ರೀ ಚರಣ್ ಉಪಾಧ್ಯಕ್ಷರಾಗಿಯೂ, ಎಎಸ್‌ಎಯಿಂದ ಗೋಪಿ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಟಿಎಸ್‌ಎಫ್‌ನ ರಾಥೋದ್ ಪ್ರದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್‌ಎಫ್‌ಐನ ಸೊಹೆಲ್ ಅಹ್ಮದ್ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಮತ್ತು ಎಎಸ್‌ಎಯ ಪ್ರಿಯಾಂಕಾ ಬದ್ರಾಸೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿ ಹುದ್ದೆಯನ್ನು ಜಯಸಿದ್ದಾರೆ.

“ಈ ವಿಜಯವು ರೋಹಿತ್ ವೇಮುಲಾ ಅವರಿಗೆ ನ್ಯಾಯಕ್ಕಾಗಿ ಹೋರಾಡುವ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳಸಮುದಾಯದವರನ್ನು ಹೊರದೂಡುವ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳ ವಿರುದ್ಧದ ಹೋರಾಟಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಧೈರ್ಯ ತುಂಬುತ್ತದೆ” ಎಂದು ಎಎಸ್ಎ ಅಧ್ಯಕ್ಷ ಎಂ ಇನಿಯವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಯು ಸಹ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣೆಯ ಹಾದಿಯಲ್ಲಿ ಮಹತ್ವವನ್ನು ಪಡೆದುಕೊಂಡಿತ್ತು. ಇದು ಎಡ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಕಠಿಣ ಯುದ್ಧಕ್ಕೆ ಸಾಕ್ಷಿಯಾಯಿತು.

ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪದ ಮೇಲೆ 2016 ರ ಜನವರಿ 17 ರಂದು ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ನಂತರ ಹೈದರಾಬಾದ್ ವಿಶ್ವವಿದ್ಯಾಲಯವು ಕಳೆದ ಮೂರು ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಚಳವಳಿಗಳು ಗರಿಗೆದರಿದ್ದು ಜಾತಿ ತಾರತಮ್ಯದ ವಿರುದ್ಧ ಆಕ್ರೋಶವೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...