Homeಚಳವಳಿಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

ಹೈದರಾಬಾದ್ ವಿವಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ದಲಿತ, ಎಡ ಮೈತ್ರಿಗೆ ಭರ್ಜರಿ ಜಯ

- Advertisement -
- Advertisement -

ದಲಿತ, ಎಡ ಮೈತ್ರಿಯು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಗಳ ಚುನಾವಣೆಯಲ್ಲಿ ಜಯಗಳಿಸಿದ್ದು ಎಲ್ಲಾ ಸ್ಥಾನಗಳನ್ನು ತನ್ನ ತೆಕ್ಕೆಗೆ ಹಾಕಿಕೊಂಡಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಆಡಳಿತದಿಂದ ತೊಂದರೆಗೀಡಾದ ಒಂದು ವರ್ಷದ ನಂತರ ಮತ್ತೆ ಎಡ ಮತ್ತು ದಲಿತ ಒಕ್ಕೂಟಕ್ಕೆ ಜಯ ಸಿಕ್ಕಿದೆ.

ಗುರುವಾರ ಬಿಗಿ ಭದ್ರತೆಯ ಮಧ್ಯೆ ಚುನಾವಣೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಗಚಿಬೌಲಿಯ ವಿಶ್ವವಿದ್ಯಾಲಯದ ಆವರಣದಲ್ಲಿರುವ ಅಂಬೇಡ್ಕರ್ ಸಭಾಂಗಣದಲ್ಲಿ ಮತ ಎಣಿಕೆ ನಡೆಯಿತು. ಅಂತಿಮ ಫಲಿತಾಂಶಗಳನ್ನು ಸಂಜೆ ಘೋಷಿಸಲಾಯಿತು.

ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ), ದಲಿತ ವಿದ್ಯಾರ್ಥಿ ಸಂಘ (ಡಿಎಸ್‌ಯು), ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್‌ಎ) ಮತ್ತು ಬುಡಕಟ್ಟು ವಿದ್ಯಾರ್ಥಿಗಳ ವೇದಿಕೆ (ಟಿಎಸ್‌ಎಫ್) ಮೈತ್ರಿಯ ಎಡಪಂಥೀಯ, ದಲಿತ ಮತ್ತು ಆದಿವಾಸಿ ಸಂಘಟನೆಗಳೊಂದಿಗೆ ಸಂಯೋಜಿತ ವಿದ್ಯಾರ್ಥಿಗಳು ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಗಳನ್ನು ಗೆದ್ದುಕೊಂಡಿದ್ದಾರೆ.

ಕಳೆದ ವರ್ಷ, ಎಸ್‌ಎಫ್‌ಐ ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ರಚಿಸಿ ಆದಿವಾಸಿ, ದಲಿತ, ಬಹುಜನ, ಮುಸ್ಲಿಂ ಮತ್ತು ಬುಡಕಟ್ಟು ಸಂಸ್ಥೆಗಳಿಂದ ಪ್ರತ್ಯೇಕವಾಗಿ ಚುನಾವಣೆಯಲ್ಲಿ ಸ್ಪರ್ಧಿಸಿತು. ತ್ರಿಕೋನ ಸ್ಪರ್ಧೆ ಏರ್ಪಟ್ಟು ಕೊನೆಗೆ ಎಬಿವಿಪಿ ಚುನಾವಣೆಯಲ್ಲಿ ಜಯಗಳಿಸಿತ್ತು. ಆ ಮೂಲಕ ಹಿಂದಿನ ಎಂಟು ವರ್ಷಗಳಲ್ಲಿ ಮೊದಲ ಬಾರಿಗೆ ವಿದ್ಯಾರ್ಥಿ ಸಂಘದಲ್ಲಿ ಅಧಿಕಾರಕ್ಕೆ ಬಂದಿತ್ತು.

ಆದರೆ ಈ ಬಾರಿ ಎಸ್‌ಎಫ್‌ಐ ಮತ್ತೆ ದಲಿತ, ಎಡ ಮತ್ತು ಆದಿವಾಸಿ ಗುಂಪುಗಳ ಮೈತ್ರಿಕೂಟಕ್ಕೆ ಮರಳಿತ್ತು. ಹಾಗಾಗಿ ಆರಾಮದಾಯಕ ಬಹುಮತದೊಂದಿಗೆ ಚುನಾವಣೆಯಲ್ಲಿ ಜಯಗಳಿಸಿತು. ಎಬಿವಿಪಿಯು ಸಹ ಇತರೆ ಹಿಂದುಳಿದ ವರ್ಗಗಳ ಒಕ್ಕೂಟ (ಒಬಿಸಿಎಫ್) ಮತ್ತು ಹೊಸದಾಗಿ ರೂಪುಗೊಂಡ ಸೆವಲಾಲ್ ವಿದ್ಯಾರ್ಥಿ ದಳ ಎಂಬ ಎರಡು ವಿದ್ಯಾರ್ಥಿ ಗುಂಪುಗಳೊಂದಿಗೆ ಕೈಜೋಡಿಸಿತು. ಆದರೂ ಎರಡನೇ ಸ್ಥಾನಕ್ಕೆ ನೂಕಲ್ಪಟ್ಟಿದೆ.

ಎಸ್‌ಎಫ್‌ಐಯ ಅಭಿಷೇಕ್ ನಂದನ್ ಅಧ್ಯಕ್ಷ ಹುದ್ದೆಯನ್ನು ಗೆದ್ದರೆ, ಡಿಎಸ್‌ಯುನಿಂದ ಎಂ.ಶ್ರೀ ಚರಣ್ ಉಪಾಧ್ಯಕ್ಷರಾಗಿಯೂ, ಎಎಸ್‌ಎಯಿಂದ ಗೋಪಿ ಸ್ವಾಮಿ ಪ್ರಧಾನ ಕಾರ್ಯದರ್ಶಿಯಾಗಿಯೂ ಮತ್ತು ಟಿಎಸ್‌ಎಫ್‌ನ ರಾಥೋದ್ ಪ್ರದೀಪ್ ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಎಸ್‌ಎಫ್‌ಐನ ಸೊಹೆಲ್ ಅಹ್ಮದ್ ಕ್ರೀಡಾ ಕಾರ್ಯದರ್ಶಿ ಹುದ್ದೆಯನ್ನು ಮತ್ತು ಎಎಸ್‌ಎಯ ಪ್ರಿಯಾಂಕಾ ಬದ್ರಾಸೆಟ್ಟಿ ಸಾಂಸ್ಕೃತಿಕ ಕಾರ್ಯದರ್ಶಿ ಹುದ್ದೆಯನ್ನು ಜಯಸಿದ್ದಾರೆ.

“ಈ ವಿಜಯವು ರೋಹಿತ್ ವೇಮುಲಾ ಅವರಿಗೆ ನ್ಯಾಯಕ್ಕಾಗಿ ಹೋರಾಡುವ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತಳಸಮುದಾಯದವರನ್ನು ಹೊರದೂಡುವ ಬಿಜೆಪಿ ನೇತೃತ್ವದ ಕೇಂದ್ರದ ನೀತಿಗಳ ವಿರುದ್ಧದ ಹೋರಾಟಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ಧೈರ್ಯ ತುಂಬುತ್ತದೆ” ಎಂದು ಎಎಸ್ಎ ಅಧ್ಯಕ್ಷ ಎಂ ಇನಿಯವನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿವಿಯ ವಿದ್ಯಾರ್ಥಿ ಸಂಘದ ಚುನಾವಣೆಯು ಸಹ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಚುನಾವಣೆಯ ಹಾದಿಯಲ್ಲಿ ಮಹತ್ವವನ್ನು ಪಡೆದುಕೊಂಡಿತ್ತು. ಇದು ಎಡ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳ ನಡುವೆ ಕಠಿಣ ಯುದ್ಧಕ್ಕೆ ಸಾಕ್ಷಿಯಾಯಿತು.

ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯದ ಆರೋಪದ ಮೇಲೆ 2016 ರ ಜನವರಿ 17 ರಂದು ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಮಾಡಿಕೊಂಡ ನಂತರ ಹೈದರಾಬಾದ್ ವಿಶ್ವವಿದ್ಯಾಲಯವು ಕಳೆದ ಮೂರು ವರ್ಷಗಳಿಂದ ಕ್ಯಾಂಪಸ್‌ನಲ್ಲಿ ಚಳವಳಿಗಳು ಗರಿಗೆದರಿದ್ದು ಜಾತಿ ತಾರತಮ್ಯದ ವಿರುದ್ಧ ಆಕ್ರೋಶವೆದ್ದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...